ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿರಿಯೂರು: ಕಾಂಗ್ರೆಸ್‌ ನಾಯಕರ ಪ್ರಚಾರ

Last Updated 18 ಅಕ್ಟೋಬರ್ 2020, 6:53 IST
ಅಕ್ಷರ ಗಾತ್ರ

ಹಿರಿಯೂರು: ‘ದೇಶ ಮತ್ತು ರಾಜ್ಯದ ಸ್ವಾಸ್ಥ್ಯವನ್ನು ಹಾಳು ಮಾಡಿರುವ ಬಿಜೆಪಿಗೆ ಪಾಠ ಕಲಿಸಲು ಎಲ್ಲ ವರ್ಗದ ಶಿಕ್ಷಕರು–ಪದವೀಧರರಿಗೆ ಒಂದು ಉತ್ತಮ ಅವಕಾಶ ದೊರೆತಿದೆ. ಆಗ್ನೇಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಮೇಶ್‌ಬಾಬು ಅವರನ್ನು ಬೆಂಬಲಿಸಬೇಕು’ ಎಂದು ಮಾಜಿ ಶಾಸಕ ಡಿ. ಸುಧಾಕರ್ ಮನವಿ ಮಾಡಿದರು.

ನಗರದ ತಮ್ಮ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಕಾಂಗ್ರೆಸ್ ಪಕ್ಷ ಎಂದಿಗೂ ಶಿಕ್ಷಕರು, ಪದವೀಧರ ನಿರುದ್ಯೋಗಿಗಳ ಪರವಾಗಿ ಹೋರಾಟ ನಡೆಸುತ್ತ ಬಂದಿದೆ. ಶಿಕ್ಷಕರು–ಪದವೀಧರ ಕ್ಷೇತ್ರಗಳು ಬಿಜೆಪಿ ಭದ್ರಕೋಟೆಗಳು ಎಂಬ ಮಾತನ್ನು ಈ ಬಾರಿ ಮತದಾರರು ಹುಸಿಗೊಳಿಸಬೇಕು’ ಎಂದು ಮನವಿ ಮಾಡಿದರು.

ಅಭ್ಯರ್ಥಿ ರಮೇಶ್‌ಬಾಬು, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಶಿಕಲಾಸುರೇಶ್ ಬಾಬು, ಮಾಜಿ ಸಂಸದ ಬಿ.ಎನ್. ಚಂದ್ರಪ್ಪ, ಶಾಸಕ ಟಿ. ರಘುಮೂರ್ತಿ, ಮಾಜಿ ಸಚಿವ ಶಿವಮೂರ್ತಿ ನಾಯ್ಕ, ಎಂ.ಕೆ. ತಾಜ್‌ಪೀರ್, ಜಿ.ಎಸ್. ಮಂಜುನಾಥ್ ಮಾತನಾಡಿದರು. ಮೈಲಾರಪ್ಪ, ಖಾದಿ ರಮೇಶ್, ಸಂಪತ್ ಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT