‘ಶನಿವಾರ ಬೆಳಿಗ್ಗೆ ನಗರಸಭೆ ಪೌರಾಯುಕ್ತ ಶಿವಪ್ರಸಾದ್ ನೇತೃತ್ವದಲ್ಲಿ ನೈಹರೂ ಮೈದಾನದಲ್ಲಿ ಮಾರ್ಕಿಂಗ್ ಮಾಡಿದ್ದು, ಬೆಳಿಗ್ಗೆ 6 ರಿಂದ 9ರ ವರೆಗೆ ವಹಿವಾಟು ನಡೆಸಲು ಅವಕಾಶ ಕಲ್ಪಿಸಲಾಗಿದೆ. ಒಬ್ಬ ವರ್ತಕರ ಬಳಿ ಇಬ್ಬರು, ಮೂವರಿಗಿಂತ ಹೆಚ್ಚು ಗ್ರಾಹಕರು ನಿಲ್ಲದಂತೆ ನೀಡಿಕೊಳ್ಳಬೇಕು. ಹಣ್ಣು, ತರಕಾರಿಯನ್ನು ಹೆಚ್ಚಿನ ಬೆಲೆಗೆ ಮಾರಕೂಡದು. ಅಂತಹ ಪ್ರಕರಣ ಕಂಡು ಬಂದರೆ ವಹಿವಾಟು ನಡೆಸಲು ಬಿಡುವುದಿಲ್ಲ’ ಎಂದು ಪೌರಾಯುಕ್ತರು ತಿಳಿಸಿದ್ದಾರೆ.