<p><strong>ಹಿರಿಯೂರು:</strong> ‘ಉತ್ತಮವಾಗಿ ಓದಿ ಭವಿಷ್ಯವನ್ನು ರೂಪಿಸಿಕೊಳ್ಳಬೇಕಾದ ಹೆಣ್ಣುಮಕ್ಕಳಿಗೆ ಬಾಲ್ಯದಲ್ಲಿಯೇ ಮದುವೆ ಮಾಡಿ ಅವರ ಭವಿಷ್ಯ ಹಾಳು ಮಾಡಬಾರದು’ ಎಂದು ಗ್ರಾಮಾಂತರ ಠಾಣೆ ಎಸ್ಐ ಅನುಸೂಯಾ ಹೇಳಿದರು.</p>.<p>ತಾಲ್ಲೂಕಿನ ಜವನಗೊಂಡನಹಳ್ಳಿ ಮತ್ತು ಮೇಟಿಕುರ್ಕೆ ಗ್ರಾಮಗಳಲ್ಲಿ ಗ್ರಾಮಾಂತರ ಪೊಲೀಸ್ ಇಲಾಖೆಯಿಂದ ಬಾಲ್ಯವಿವಾಹ ನಿಷೇಧ ಕುರಿತು ಬುಧವಾರ ಏರ್ಪಡಿಸಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಬಾಲ್ಯ ವಿವಾಹಕ್ಕೆ ಮಾಡುವ ಪಾಲಕರು ಮತ್ತು ಸಂಸ್ಥೆಯವರಿಗೆ 2 ವರ್ಷ ಸೆರೆಮನೆ ಮತ್ತು ₹ 1 ಲಕ್ಷ ದಂಡ ವಿಧಿಸುವ ಅವಕಾಶವಿದೆ. ಕಲ್ಲುವಳ್ಳಿ ಭಾಗದಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಪತ್ತೆಯಾಗುತ್ತಿವೆ. ಚಿಕ್ಕ ವಯಸ್ಸಿಗೆ ಮದುವೆ ಮಾಡುವ ಯೋಚನೆ ಬಿಟ್ಟು ಶಿಕ್ಷಣ ಕೊಡಬೇಕು’ ಎಂದು ಸಲಹೆ ನೀಡಿದರು.</p>.<p>‘ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. 18 ವರ್ಷದೊಳಗಿನ ಮಕ್ಕಳು ವಾಹನ ಚಾಲನೆ ಮಾಡಬಾರದು. ಮಕ್ಕಳಿಗೆ ವಾಹನ ಕೊಟ್ಟವರಿಗೆ ದಂಡ ವಿಧಿಸಲಾಗುವುದು. ಚಾಲನಾ ಪರವಾನಗಿ, ವಿಮೆ ಇಲ್ಲದೆ ವಾಹನ ಓಡಿಸಬೇಡಿ. ರಸ್ತೆಯಲ್ಲಿ ವ್ಹೀಲಿ ಮಾಡಬೇಡಿ’ ಎಂದು ಕಿವಿಮಾತು ಹೇಳಿದರು.</p>.<p>ಕಾರ್ಯಕ್ರಮದಲ್ಲಿ ಗ್ರಾಮಾಂತರ ಪೊಲೀಸ್ ಠಾಣೆ ಸಿಬ್ಬಂದಿ ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರಿಯೂರು:</strong> ‘ಉತ್ತಮವಾಗಿ ಓದಿ ಭವಿಷ್ಯವನ್ನು ರೂಪಿಸಿಕೊಳ್ಳಬೇಕಾದ ಹೆಣ್ಣುಮಕ್ಕಳಿಗೆ ಬಾಲ್ಯದಲ್ಲಿಯೇ ಮದುವೆ ಮಾಡಿ ಅವರ ಭವಿಷ್ಯ ಹಾಳು ಮಾಡಬಾರದು’ ಎಂದು ಗ್ರಾಮಾಂತರ ಠಾಣೆ ಎಸ್ಐ ಅನುಸೂಯಾ ಹೇಳಿದರು.</p>.<p>ತಾಲ್ಲೂಕಿನ ಜವನಗೊಂಡನಹಳ್ಳಿ ಮತ್ತು ಮೇಟಿಕುರ್ಕೆ ಗ್ರಾಮಗಳಲ್ಲಿ ಗ್ರಾಮಾಂತರ ಪೊಲೀಸ್ ಇಲಾಖೆಯಿಂದ ಬಾಲ್ಯವಿವಾಹ ನಿಷೇಧ ಕುರಿತು ಬುಧವಾರ ಏರ್ಪಡಿಸಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಬಾಲ್ಯ ವಿವಾಹಕ್ಕೆ ಮಾಡುವ ಪಾಲಕರು ಮತ್ತು ಸಂಸ್ಥೆಯವರಿಗೆ 2 ವರ್ಷ ಸೆರೆಮನೆ ಮತ್ತು ₹ 1 ಲಕ್ಷ ದಂಡ ವಿಧಿಸುವ ಅವಕಾಶವಿದೆ. ಕಲ್ಲುವಳ್ಳಿ ಭಾಗದಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಪತ್ತೆಯಾಗುತ್ತಿವೆ. ಚಿಕ್ಕ ವಯಸ್ಸಿಗೆ ಮದುವೆ ಮಾಡುವ ಯೋಚನೆ ಬಿಟ್ಟು ಶಿಕ್ಷಣ ಕೊಡಬೇಕು’ ಎಂದು ಸಲಹೆ ನೀಡಿದರು.</p>.<p>‘ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. 18 ವರ್ಷದೊಳಗಿನ ಮಕ್ಕಳು ವಾಹನ ಚಾಲನೆ ಮಾಡಬಾರದು. ಮಕ್ಕಳಿಗೆ ವಾಹನ ಕೊಟ್ಟವರಿಗೆ ದಂಡ ವಿಧಿಸಲಾಗುವುದು. ಚಾಲನಾ ಪರವಾನಗಿ, ವಿಮೆ ಇಲ್ಲದೆ ವಾಹನ ಓಡಿಸಬೇಡಿ. ರಸ್ತೆಯಲ್ಲಿ ವ್ಹೀಲಿ ಮಾಡಬೇಡಿ’ ಎಂದು ಕಿವಿಮಾತು ಹೇಳಿದರು.</p>.<p>ಕಾರ್ಯಕ್ರಮದಲ್ಲಿ ಗ್ರಾಮಾಂತರ ಪೊಲೀಸ್ ಠಾಣೆ ಸಿಬ್ಬಂದಿ ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>