<p>ಹಿರಿಯೂರು: ತಾಲ್ಲೂಕಿನ ವಾಣಿವಿಲಾಸಪುರದಿಂದ ಕಕ್ಕಯ್ಯನಹಟ್ಟಿ ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿನ ತೋಟದ ಮನೆ ಹಾಗೂ ಭರಮಗಿರಿ ಸಮೀಪದ ತೋಟದ ಮನೆಯೊಂದರಲ್ಲಿ ಬುಧವಾರ ರಾತ್ರಿ ಕಳ್ಳತನವಾಗಿದೆ.</p>.<p>ಕಕ್ಕಯ್ಯನಹಟ್ಟಿ ರಸ್ತೆಯಲ್ಲಿರುವ ಎಸ್.ಎಸ್. ರಂಗಪ್ಪ ಅವರ ತೋಟದ ಮನೆಯ ಬೀಗ ಒಡೆದು ಬೆಲೆ ಬಾಳುವ ಕೃಷಿ ಉಪಕರಣಗಳನ್ನು ಕದ್ದೊಯ್ದಿದ್ದಾರೆ. ಮನೆಯಲ್ಲಿ ನಗದು, ಆಭರಣಗಳು ಇರಲಿಲ್ಲ ಎಂದು ಅವರು ತಿಳಿಸಿದ್ದಾರೆ.</p>.<p>ಭರಮಗಿರಿ ಸಮೀಪದ ರೂಪ ಅವರ ಮನೆಯ ಬೀಗ ಒಡೆದು ಒಳ ನುಗ್ಗಿರುವ ಕಳ್ಳರು ಬೆಳ್ಳಿ–ಬಂಗಾರದ ಒಡವೆಗಳನ್ನು ಕಳವು ಮಾಡಿದ್ದಾರೆ.</p>.<p>ಒಂದೇ ದಿನ ಎರಡು ಮನೆಗಳಲ್ಲಿ ಕಳ್ಳತನವಾಗಿರುವ ಕಾರಣ ತೋಟದ ಮನೆಗಳಲ್ಲಿ ವಾಸವಾಗಿರುವವರು ಆತಂಕಗೊಂಡಿದ್ದಾರೆ. ರಾತ್ರಿ ಗಸ್ತು ಹೆಚ್ಚಿಸಬೇಕು, ವಾಣಿವಿಲಾಸಪುರಕ್ಕೆ ಪೂರ್ಣ ಪ್ರಮಾಣದ ಪೊಲೀಸ್ ಠಾಣೆ ಮಂಜೂರು ಮಾಡಬೇಕು ಎಂದು ರಂಗಪ್ಪ ಆಗ್ರಹಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260410-44-959955179</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಿರಿಯೂರು: ತಾಲ್ಲೂಕಿನ ವಾಣಿವಿಲಾಸಪುರದಿಂದ ಕಕ್ಕಯ್ಯನಹಟ್ಟಿ ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿನ ತೋಟದ ಮನೆ ಹಾಗೂ ಭರಮಗಿರಿ ಸಮೀಪದ ತೋಟದ ಮನೆಯೊಂದರಲ್ಲಿ ಬುಧವಾರ ರಾತ್ರಿ ಕಳ್ಳತನವಾಗಿದೆ.</p>.<p>ಕಕ್ಕಯ್ಯನಹಟ್ಟಿ ರಸ್ತೆಯಲ್ಲಿರುವ ಎಸ್.ಎಸ್. ರಂಗಪ್ಪ ಅವರ ತೋಟದ ಮನೆಯ ಬೀಗ ಒಡೆದು ಬೆಲೆ ಬಾಳುವ ಕೃಷಿ ಉಪಕರಣಗಳನ್ನು ಕದ್ದೊಯ್ದಿದ್ದಾರೆ. ಮನೆಯಲ್ಲಿ ನಗದು, ಆಭರಣಗಳು ಇರಲಿಲ್ಲ ಎಂದು ಅವರು ತಿಳಿಸಿದ್ದಾರೆ.</p>.<p>ಭರಮಗಿರಿ ಸಮೀಪದ ರೂಪ ಅವರ ಮನೆಯ ಬೀಗ ಒಡೆದು ಒಳ ನುಗ್ಗಿರುವ ಕಳ್ಳರು ಬೆಳ್ಳಿ–ಬಂಗಾರದ ಒಡವೆಗಳನ್ನು ಕಳವು ಮಾಡಿದ್ದಾರೆ.</p>.<p>ಒಂದೇ ದಿನ ಎರಡು ಮನೆಗಳಲ್ಲಿ ಕಳ್ಳತನವಾಗಿರುವ ಕಾರಣ ತೋಟದ ಮನೆಗಳಲ್ಲಿ ವಾಸವಾಗಿರುವವರು ಆತಂಕಗೊಂಡಿದ್ದಾರೆ. ರಾತ್ರಿ ಗಸ್ತು ಹೆಚ್ಚಿಸಬೇಕು, ವಾಣಿವಿಲಾಸಪುರಕ್ಕೆ ಪೂರ್ಣ ಪ್ರಮಾಣದ ಪೊಲೀಸ್ ಠಾಣೆ ಮಂಜೂರು ಮಾಡಬೇಕು ಎಂದು ರಂಗಪ್ಪ ಆಗ್ರಹಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260410-44-959955179</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>