<p>ಹಿರಿಯೂರು: ನಗರದ ತೇರುಮಲ್ಲೇಶ್ವರಸ್ವಾಮಿ ದೇವಾಲಯದ ಆವರಣದಲ್ಲಿರುವ ಕಾಳಿಕಾಂಬ ದೇವಿಯ ರಥೋತ್ಸವ ಸೋಮವಾರ ಸರಳವಾಗಿ ನೆರವೇರಿತು.</p>.<p>ರಥೋತ್ಸವಕ್ಕೂ ಮೊದಲು ದೇವಾಲಯದಲ್ಲಿ ಹೋಮ, ಗಂಗಾಪೂಜೆ, ಗಣಪತಿ ಪೂಜೆ, ಪುಷ್ಪಾರ್ಚನೆ, ಅಭಿಷೇಕ ಹಾಗೂ ಲೋಕಕಲ್ಯಾಣಕ್ಕಾಗಿ ವಿವಿಧ ಧಾರ್ಮಿಕ ಪೂಜೆಗಳನ್ನು ನಡೆಸಲಾಯಿತು.</p>.<p>ತೇರುಮಲ್ಲೇಶ್ವರ ಸ್ವಾಮಿ ದೇವಾಲಯ ದಿಂದ ಹೊರಟ ರಥ ಸಿದ್ದನಾಯಕ ವೃತ್ತದವರೆಗೆ ಸಾಗಿತು. ರಥಬೀದಿ ಯಲ್ಲಿನ ಮನೆಯ ಮುಂದೆ ದೇವಿಯ ರಥ ಬಂದಾಗ ಭಕ್ತರು ಪೂಜೆ ಸಲ್ಲಿಸಿದರು. ರಥೋತ್ಸವದ ನಂತರ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ, ಅನ್ನದಾಸೋಹ ಕಾರ್ಯಕ್ರಮ ನಡೆಯಿತು.</p>.<p>ಉತ್ಸವದಲ್ಲಿ ಅರ್ಚಕರಾದ ವಿಶ್ವನಾಥಾಚಾರ್ಯ, ನಾಗರಾಜಾ ಚಾರ್ಯ, ಮಂಜುನಾಥ್, ರಮೇಶ್, ನವೀನ್, ಬಸವರಾಜ್, ವಿನಯ್, ಜ್ಞಾನಮೂರ್ತಿ, ಜಗದೀಶ್ ಭಂಡಾರಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260421-44-11143920</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಿರಿಯೂರು: ನಗರದ ತೇರುಮಲ್ಲೇಶ್ವರಸ್ವಾಮಿ ದೇವಾಲಯದ ಆವರಣದಲ್ಲಿರುವ ಕಾಳಿಕಾಂಬ ದೇವಿಯ ರಥೋತ್ಸವ ಸೋಮವಾರ ಸರಳವಾಗಿ ನೆರವೇರಿತು.</p>.<p>ರಥೋತ್ಸವಕ್ಕೂ ಮೊದಲು ದೇವಾಲಯದಲ್ಲಿ ಹೋಮ, ಗಂಗಾಪೂಜೆ, ಗಣಪತಿ ಪೂಜೆ, ಪುಷ್ಪಾರ್ಚನೆ, ಅಭಿಷೇಕ ಹಾಗೂ ಲೋಕಕಲ್ಯಾಣಕ್ಕಾಗಿ ವಿವಿಧ ಧಾರ್ಮಿಕ ಪೂಜೆಗಳನ್ನು ನಡೆಸಲಾಯಿತು.</p>.<p>ತೇರುಮಲ್ಲೇಶ್ವರ ಸ್ವಾಮಿ ದೇವಾಲಯ ದಿಂದ ಹೊರಟ ರಥ ಸಿದ್ದನಾಯಕ ವೃತ್ತದವರೆಗೆ ಸಾಗಿತು. ರಥಬೀದಿ ಯಲ್ಲಿನ ಮನೆಯ ಮುಂದೆ ದೇವಿಯ ರಥ ಬಂದಾಗ ಭಕ್ತರು ಪೂಜೆ ಸಲ್ಲಿಸಿದರು. ರಥೋತ್ಸವದ ನಂತರ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ, ಅನ್ನದಾಸೋಹ ಕಾರ್ಯಕ್ರಮ ನಡೆಯಿತು.</p>.<p>ಉತ್ಸವದಲ್ಲಿ ಅರ್ಚಕರಾದ ವಿಶ್ವನಾಥಾಚಾರ್ಯ, ನಾಗರಾಜಾ ಚಾರ್ಯ, ಮಂಜುನಾಥ್, ರಮೇಶ್, ನವೀನ್, ಬಸವರಾಜ್, ವಿನಯ್, ಜ್ಞಾನಮೂರ್ತಿ, ಜಗದೀಶ್ ಭಂಡಾರಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260421-44-11143920</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>