<p><strong>ಹಿರಿಯೂರು:</strong> ‘ನಗರದ ಹುಳಿಯಾರು ರಸ್ತೆಯ ನಾಲ್ಕನೇ ತಿರುವಿನಲ್ಲಿರುವ ಓಂ ಶಕ್ತಿ ಅರ್ಧನಾರೀಶ್ವರಿ ಕರುಮಾರಿಯಮ್ಮ ದೇವಾಲಯದಲ್ಲಿ ಮೇ 13ರಿಂದ 15ರವರೆಗೆ 23ನೇ ವರ್ಧಂತ್ಯುತ್ಸವ ಹಾಗೂ ಮಹಾ ಚಂಡಿಕಾ ಹೋಮ, ಬ್ರಹ್ಮ ರಥೋತ್ಸವ ಏರ್ಪಡಿಸಲಾಗಿದೆ’ ಎಂದು ದೇವಸ್ಥಾನ ಟ್ರಸ್ಟ್ ಪದಾಧಿಕಾರಿಗಳು ತಿಳಿಸಿದ್ದಾರೆ.</p>.<p>ಮೇ 13ರಂದು ಬೆಳಿಗ್ಗೆ ಗಂಗಾಪೂಜೆ, ಗೋಪೂಜೆ, ಕಂಕಣ ಬಂಧನ, ಧ್ವಜಾರೋಹಣ ಹಾಗೂ ವಿಶೇಷ ಅಲಂಕಾರ ನಡೆಸಲಾಗುವುದು. ಸಂಜೆ 6 ಗಂಟೆಯ ನಂತರ ಗಣಪತಿ, ನವಗ್ರಹ ಹೋಮ ನಡೆಯಲಿದೆ. 14 ರಂದು ಬೆಳಿಗ್ಗೆ 7 ಗಂಟೆಗೆ ಪಂಚಾಮೃತ ಅಭಿಷೇಕ, ರುದ್ರಾಭಿಷೇಕ ಸೇರಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸಂಜೆ 6 ಗಂಟೆಗೆ ಮಹಾ ಸುದರ್ಶನ ಹೋಮ, ಕುಬೇರ, ಮಹಾಲಕ್ಷ್ಮಿ ಹೋಮ, ವೆಂಕಟೇಶ್ವರ ಸ್ವಾಮಿ ಉತ್ಸವ ಮೂರ್ತಿಗಳಿಗೆ ಏಕದಶಾವರ ಮಹಾಭಿಷೇಕ ಜರುಗಲಿದೆ.</p>.<p>ಮೇ 15ರಂದು ಬೆಳಿಗ್ಗೆ ಮಹಾ ಚಂಡಿಕಾ ಹೋಮ ನಡೆಯಲಿದೆ. ಸಂಜೆ ಊರಿನ ಮುಖ್ಯ ಬೀದಿಗಳಲ್ಲಿ ರಥೋತ್ಸವ ನಡೆಯಲಿದೆ. 16ರಂದು ಕಂಕಣ ವಿಸರ್ಜನೆಯೊಂದಿಗೆ ಉತ್ಸವ ಸಂಪನ್ನಗೊಳ್ಳಲಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಟ್ರಸ್ಟ್ ನವರು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರಿಯೂರು:</strong> ‘ನಗರದ ಹುಳಿಯಾರು ರಸ್ತೆಯ ನಾಲ್ಕನೇ ತಿರುವಿನಲ್ಲಿರುವ ಓಂ ಶಕ್ತಿ ಅರ್ಧನಾರೀಶ್ವರಿ ಕರುಮಾರಿಯಮ್ಮ ದೇವಾಲಯದಲ್ಲಿ ಮೇ 13ರಿಂದ 15ರವರೆಗೆ 23ನೇ ವರ್ಧಂತ್ಯುತ್ಸವ ಹಾಗೂ ಮಹಾ ಚಂಡಿಕಾ ಹೋಮ, ಬ್ರಹ್ಮ ರಥೋತ್ಸವ ಏರ್ಪಡಿಸಲಾಗಿದೆ’ ಎಂದು ದೇವಸ್ಥಾನ ಟ್ರಸ್ಟ್ ಪದಾಧಿಕಾರಿಗಳು ತಿಳಿಸಿದ್ದಾರೆ.</p>.<p>ಮೇ 13ರಂದು ಬೆಳಿಗ್ಗೆ ಗಂಗಾಪೂಜೆ, ಗೋಪೂಜೆ, ಕಂಕಣ ಬಂಧನ, ಧ್ವಜಾರೋಹಣ ಹಾಗೂ ವಿಶೇಷ ಅಲಂಕಾರ ನಡೆಸಲಾಗುವುದು. ಸಂಜೆ 6 ಗಂಟೆಯ ನಂತರ ಗಣಪತಿ, ನವಗ್ರಹ ಹೋಮ ನಡೆಯಲಿದೆ. 14 ರಂದು ಬೆಳಿಗ್ಗೆ 7 ಗಂಟೆಗೆ ಪಂಚಾಮೃತ ಅಭಿಷೇಕ, ರುದ್ರಾಭಿಷೇಕ ಸೇರಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸಂಜೆ 6 ಗಂಟೆಗೆ ಮಹಾ ಸುದರ್ಶನ ಹೋಮ, ಕುಬೇರ, ಮಹಾಲಕ್ಷ್ಮಿ ಹೋಮ, ವೆಂಕಟೇಶ್ವರ ಸ್ವಾಮಿ ಉತ್ಸವ ಮೂರ್ತಿಗಳಿಗೆ ಏಕದಶಾವರ ಮಹಾಭಿಷೇಕ ಜರುಗಲಿದೆ.</p>.<p>ಮೇ 15ರಂದು ಬೆಳಿಗ್ಗೆ ಮಹಾ ಚಂಡಿಕಾ ಹೋಮ ನಡೆಯಲಿದೆ. ಸಂಜೆ ಊರಿನ ಮುಖ್ಯ ಬೀದಿಗಳಲ್ಲಿ ರಥೋತ್ಸವ ನಡೆಯಲಿದೆ. 16ರಂದು ಕಂಕಣ ವಿಸರ್ಜನೆಯೊಂದಿಗೆ ಉತ್ಸವ ಸಂಪನ್ನಗೊಳ್ಳಲಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಟ್ರಸ್ಟ್ ನವರು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>