<p><strong>ಹಿರಿಯೂರು:</strong> ನಗರದಲ್ಲಿರುವ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣವನ್ನು 24x7 ಕಾರ್ಯನಿರ್ವಹಿಸುವ ನಿಲ್ದಾಣವನ್ನಾಗಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರು ಸೋಮವಾರ ಸಾರಿಗೆ ಮಂತ್ರಿ ರಾಮಲಿಂಗಾರೆಡ್ಡಿಯವರಿಗೆ ಮನವಿ ಸಲ್ಲಿಸಿದ್ದಾರೆ.</p>.<p>ಹಿರಿಯೂರು ಬಸ್ ನಿಲ್ದಾಣಕ್ಕೆ ನಿತ್ಯ ಸಾರಿಗೆ ಸಂಸ್ಥೆ ನಾಲ್ಕು ವಿಭಾಗಗಳಿಂದ ಸುಮಾರು 800 ಕ್ಕೂ ಹೆಚ್ಚು ಬಸ್ಸುಗಳು ನಿತ್ಯ ಬಂದು ಹೋಗುತ್ತವೆ. ಸರ್ಕಾರದ ಶಕ್ತಿ ಯೋಜನೆ ಜಾರಿಗೆ ಬಂದ ನಂತರ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಆದರೆ ರಾತ್ರಿ 7 ಗಂಟೆಯ ನಂತರ ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಿಂದ ದಾವಣಗೆರೆ, ಬಳ್ಳಾರಿ ಜಿಲ್ಲೆಯ ಕಡೆ ಸಂಚರಿಸುವ ಬಸ್ಸುಗಳು ಹಿರಿಯೂರು ಬಸ್ ನಿಲ್ದಾಣದ ಒಳಗೆ ಪ್ರವೇಶಿಸದೆ ಬೈಪಾಸ್ ಮೂಲಕ ಸಂಚರಿಸುತ್ತಿರುವುದರಿಂದ ಪ್ರಯಾಣಿಕರಿಗೆ ತೊಂದರೆ ಉಂಟಾಗುತ್ತಿದೆ. ಈ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬಂದಿದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಎಲ್ಲಾ ಬಸ್ಸುಗಳು ಹಿರಿಯೂರು ಬಸ್ ನಿಲ್ದಾಣಕ್ಕೆ ಬಂದು–ಹೋಗುವಂತೆ ಆದೇಶಿಸಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ.</p>.<p>ಇದಲ್ಲದೆ ಬಸ್ ನಿಲ್ದಾಣದಿಂದ ಗಾಂಧಿವೃತ್ತ, ಪ್ರವಾಸಿ ಮಂದಿರ ವೃತ್ತಗಳಿಗೆ ಪ್ರತ್ಯೇಕ ಹಂತಗಳೆಂದು ಪರಿಗಣಿಸಿ ಬಸ್ ನಿಲುಗಡೆ ಮಾಡಿಸಬೇಕು ಎಂದು ನಾನು ಮಾಡಿರುವ ಮನವಿಗೆ, ಸಾರಿಗೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಈ ವಿಷಯದ ಬಗ್ಗೆ ತುರ್ತಾಗಿ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಡಿ.ಸುಧಾಕರ್ ಪತ್ರಕರ್ತರಿಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರಿಯೂರು:</strong> ನಗರದಲ್ಲಿರುವ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣವನ್ನು 24x7 ಕಾರ್ಯನಿರ್ವಹಿಸುವ ನಿಲ್ದಾಣವನ್ನಾಗಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರು ಸೋಮವಾರ ಸಾರಿಗೆ ಮಂತ್ರಿ ರಾಮಲಿಂಗಾರೆಡ್ಡಿಯವರಿಗೆ ಮನವಿ ಸಲ್ಲಿಸಿದ್ದಾರೆ.</p>.<p>ಹಿರಿಯೂರು ಬಸ್ ನಿಲ್ದಾಣಕ್ಕೆ ನಿತ್ಯ ಸಾರಿಗೆ ಸಂಸ್ಥೆ ನಾಲ್ಕು ವಿಭಾಗಗಳಿಂದ ಸುಮಾರು 800 ಕ್ಕೂ ಹೆಚ್ಚು ಬಸ್ಸುಗಳು ನಿತ್ಯ ಬಂದು ಹೋಗುತ್ತವೆ. ಸರ್ಕಾರದ ಶಕ್ತಿ ಯೋಜನೆ ಜಾರಿಗೆ ಬಂದ ನಂತರ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಆದರೆ ರಾತ್ರಿ 7 ಗಂಟೆಯ ನಂತರ ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಿಂದ ದಾವಣಗೆರೆ, ಬಳ್ಳಾರಿ ಜಿಲ್ಲೆಯ ಕಡೆ ಸಂಚರಿಸುವ ಬಸ್ಸುಗಳು ಹಿರಿಯೂರು ಬಸ್ ನಿಲ್ದಾಣದ ಒಳಗೆ ಪ್ರವೇಶಿಸದೆ ಬೈಪಾಸ್ ಮೂಲಕ ಸಂಚರಿಸುತ್ತಿರುವುದರಿಂದ ಪ್ರಯಾಣಿಕರಿಗೆ ತೊಂದರೆ ಉಂಟಾಗುತ್ತಿದೆ. ಈ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬಂದಿದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಎಲ್ಲಾ ಬಸ್ಸುಗಳು ಹಿರಿಯೂರು ಬಸ್ ನಿಲ್ದಾಣಕ್ಕೆ ಬಂದು–ಹೋಗುವಂತೆ ಆದೇಶಿಸಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ.</p>.<p>ಇದಲ್ಲದೆ ಬಸ್ ನಿಲ್ದಾಣದಿಂದ ಗಾಂಧಿವೃತ್ತ, ಪ್ರವಾಸಿ ಮಂದಿರ ವೃತ್ತಗಳಿಗೆ ಪ್ರತ್ಯೇಕ ಹಂತಗಳೆಂದು ಪರಿಗಣಿಸಿ ಬಸ್ ನಿಲುಗಡೆ ಮಾಡಿಸಬೇಕು ಎಂದು ನಾನು ಮಾಡಿರುವ ಮನವಿಗೆ, ಸಾರಿಗೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಈ ವಿಷಯದ ಬಗ್ಗೆ ತುರ್ತಾಗಿ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಡಿ.ಸುಧಾಕರ್ ಪತ್ರಕರ್ತರಿಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>