<p><strong>ಹಿರಿಯೂರು</strong>: ‘ಶಾಲೆಗೆ ದಾಖಲಾತಿ ಪಡೆಯಲು ಜನನ ಪ್ರಮಾಣ ಪತ್ರ ಬೇಕು. ಮರಣಾ ನಂತರ ಕೌಟುಂಬಿಕ ವ್ಯವಹಾರಗಳಿಗೆ ಮರಣ ಪ್ರಮಾಣ ಪತ್ರ ಬೇಕು ಎಂಬ ಕಾನೂನಿನ ಅರಿವು ಎಲ್ಲರಿಗೂ ಇರಬೇಕು’ ಎಂದು ವಕೀಲರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಆರ್.ರಂಗಸ್ವಾಮಿ ತಿಳಿಸಿದರು.</p>.<p>ತಾಲ್ಲೂಕಿನ ಕಸ್ತೂರಿ ರಂಗಪ್ಪನಹಳ್ಳಿ ಗೇಟ್ ಸಮೀಪ ಇರುವ ಶಾಹಿ ಗಾರ್ಮೆಂಟ್ಸ್ ಆವರಣದಲ್ಲಿ ಶನಿವಾರ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಕಾರ್ಮಿಕ ಇಲಾಖೆ ನೇತೃತ್ವದಲ್ಲಿ ನಡೆದ ಅಂತರರಾಷ್ಟ್ರೀಯ ಕಾರ್ಮಿಕ ದಿನಾಚರಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ಕಾರ್ಮಿಕರಿಲ್ಲದೆ ದೇಶದ ಅಭಿವೃದ್ಧಿ ಸಾಧ್ಯವಿಲ್ಲ. ಅವರ ಶ್ರಮವೇ ದೇಶದ ಆರ್ಥಿಕತೆಯ ಬೆನ್ನೆಲುಬು. ಕಾರ್ಮಿಕರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಶೋಷಣೆಯಿಂದ ರಕ್ಷಿಸುವುದು ಕಾರ್ಮಿಕ ದಿನದ ಉದ್ದೇಶವಾಗಿದೆ’ ಎಂದು ಕಾನೂನು ಸಲಹೆಗಾರ ಟಿ.ಧ್ರುವಕುಮಾರ್ ಹೇಳಿದರು.</p>.<p>‘ಕಾರ್ಮಿಕರ ಅಭಿವೃದ್ಧಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಾಕಷ್ಟು ಸೌಲಭ್ಯಗಳನ್ನು ಜಾರಿಗೊಳಿಸಿದ್ದು, ಅವುಗಳ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ರಾಜ್ಯ ಕಾರ್ಮಿಕ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಈ. ಪರಮೇಶ್ ಸಲಹೆ ನೀಡಿದರು.</p>.<p>ಶಾಹಿ ಗಾರ್ಮೆಂಟ್ಸ್ ಸಹಾಯಕ ವ್ಯವಸ್ಥಾಪಕ ಎಂ.ಎ. ಮುರುಗನ್ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಕಾರ್ಮಿಕ ನಿರೀಕ್ಷಕ ಡಿ. ರಾಜಣ್ಣ, ಹಿರಿಯ ವಕೀಲ ಡಿ. ಲಕ್ಷ್ಮಣಮೂರ್ತಿ ಹಾಗೂ ಗಾರ್ಮೆಂಟ್ಸ್ ಕಾರ್ಮಿಕರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-44-2091498617</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರಿಯೂರು</strong>: ‘ಶಾಲೆಗೆ ದಾಖಲಾತಿ ಪಡೆಯಲು ಜನನ ಪ್ರಮಾಣ ಪತ್ರ ಬೇಕು. ಮರಣಾ ನಂತರ ಕೌಟುಂಬಿಕ ವ್ಯವಹಾರಗಳಿಗೆ ಮರಣ ಪ್ರಮಾಣ ಪತ್ರ ಬೇಕು ಎಂಬ ಕಾನೂನಿನ ಅರಿವು ಎಲ್ಲರಿಗೂ ಇರಬೇಕು’ ಎಂದು ವಕೀಲರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಆರ್.ರಂಗಸ್ವಾಮಿ ತಿಳಿಸಿದರು.</p>.<p>ತಾಲ್ಲೂಕಿನ ಕಸ್ತೂರಿ ರಂಗಪ್ಪನಹಳ್ಳಿ ಗೇಟ್ ಸಮೀಪ ಇರುವ ಶಾಹಿ ಗಾರ್ಮೆಂಟ್ಸ್ ಆವರಣದಲ್ಲಿ ಶನಿವಾರ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಕಾರ್ಮಿಕ ಇಲಾಖೆ ನೇತೃತ್ವದಲ್ಲಿ ನಡೆದ ಅಂತರರಾಷ್ಟ್ರೀಯ ಕಾರ್ಮಿಕ ದಿನಾಚರಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ಕಾರ್ಮಿಕರಿಲ್ಲದೆ ದೇಶದ ಅಭಿವೃದ್ಧಿ ಸಾಧ್ಯವಿಲ್ಲ. ಅವರ ಶ್ರಮವೇ ದೇಶದ ಆರ್ಥಿಕತೆಯ ಬೆನ್ನೆಲುಬು. ಕಾರ್ಮಿಕರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಶೋಷಣೆಯಿಂದ ರಕ್ಷಿಸುವುದು ಕಾರ್ಮಿಕ ದಿನದ ಉದ್ದೇಶವಾಗಿದೆ’ ಎಂದು ಕಾನೂನು ಸಲಹೆಗಾರ ಟಿ.ಧ್ರುವಕುಮಾರ್ ಹೇಳಿದರು.</p>.<p>‘ಕಾರ್ಮಿಕರ ಅಭಿವೃದ್ಧಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಾಕಷ್ಟು ಸೌಲಭ್ಯಗಳನ್ನು ಜಾರಿಗೊಳಿಸಿದ್ದು, ಅವುಗಳ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ರಾಜ್ಯ ಕಾರ್ಮಿಕ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಈ. ಪರಮೇಶ್ ಸಲಹೆ ನೀಡಿದರು.</p>.<p>ಶಾಹಿ ಗಾರ್ಮೆಂಟ್ಸ್ ಸಹಾಯಕ ವ್ಯವಸ್ಥಾಪಕ ಎಂ.ಎ. ಮುರುಗನ್ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಕಾರ್ಮಿಕ ನಿರೀಕ್ಷಕ ಡಿ. ರಾಜಣ್ಣ, ಹಿರಿಯ ವಕೀಲ ಡಿ. ಲಕ್ಷ್ಮಣಮೂರ್ತಿ ಹಾಗೂ ಗಾರ್ಮೆಂಟ್ಸ್ ಕಾರ್ಮಿಕರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-44-2091498617</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>