<p><strong>ಹಿರಿಯೂರು</strong>: ಮಳೆಗಾಲ ಆರಂಭಕ್ಕೂ ಮೊದಲು ನಗರದಲ್ಲಿರುವ ರಾಜ ಕಾಲುವೆಗಳನ್ನು ಸ್ವಚ್ಛಗೊಳಿಸುವ ಕಾರ್ಯಕ್ಕೆ ಮುಂದಾಗಿರುವ ನಗರಸಭೆ ಆಡಳಿತದ ಕ್ರಮಕ್ಕೆ ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.</p>.<p>ಪೌರಾಯುಕ್ತ ಎ. ವಾಸೀಂ ಅವರು ಆರೋಗ್ಯ ನಿರೀಕ್ಷಕರು ಹಾಗೂ ಪೌರ ನೌಕರರ ಸಭೆ ನಡೆಸಿ, ಅಕಾಲಿಕ ಮಳೆಯಿಂದ ಉಂಟಾಗಬಹುದಾದ ಹಾನಿ ತಡೆಯಲು ಆಶ್ರಯ ಕಾಲೊನಿಯಿಂದ ಆರಂಭವಾಗುವ ರಾಜಕಾಲುವೆ, ವಾಗ್ದೇವಿ ಶಿಕ್ಷಣ ಸಂಸ್ಥೆ ಮತ್ತು ಕಟುಗರ ಹಳ್ಳದ ರಾಜಕಾಲುವೆಗಳನ್ನು ಗುರುವಾರ ಸ್ವಚ್ಛಗೊಳಿಸಿದ್ದಾರೆ.</p>.<p>‘ಹಿಂದಿನ ವರ್ಷ ಒಂದೇ ರಾತ್ರಿ 90 ಮಿ.ಮೀಗಿಂತ ಹೆಚ್ಚು ಮಳೆ ಸುರಿದ ಕಾರಣ ರಾಜ ಕಾಲುವೆಗಳಿಂದ ನೀರು ಹೊರಬಂದು ಬಡಾವಣೆಗಳಿಗೆ ನುಗ್ಗಿತ್ತು. ಹಾಗಾಗಿ ಈ ಬಾರಿ ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲ ರಾಜ ಕಾಲುವೆಗಳನ್ನು ಸ್ವಚ್ಛಗೊಳಿಸಿದ್ದೇವೆ. ನಗರ ನಿವಾಸಿಗಳು ಮನೆಯ ತ್ಯಾಜ್ಯವನ್ನು ರಾಜ ಕಾಲುವೆಗೆ ಸುರಿಯಬಾರದು. ಜೊತೆಗೆ ಮನೆಯ ಮುಂದಿನ ಬಾಕ್ಸ್ ಚರಂಡಿಗಳ ಮೇಲೆ ಕಾಂಪೌಂಡ್ ನಿರ್ಮಿಸದಂತೆ, ಕಾಲುವೆ ಒತ್ತುವರಿ ಮಾಡದಂತೆ ಮನೆ ಮಾಲೀಕರಿಗೆ ಮನವಿ ಮಾಡಿದ್ದೇವೆ. ಈ ರೀತಿ ಮಾಡುವುದರಿಂದ ಮಳೆಯ ನೀರು ಕಟ್ಟಿಕೊಂಡು ಒತ್ತಡ ಹೆಚ್ಚಾದಾಗ ನೀರು ಒಮ್ಮೆಲೆ ನುಗ್ಗುತ್ತದೆ. ಇದರಿಂದ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಮನೆ ಮಾಲೀಕರು ನಿಯಮ ಪಾಲಿಸದಿದ್ದರೆ ಕಾನೂನು ಕ್ರಮ ಅನಿವಾರ್ಯ’ ಎಂದು ಪೌರಾಯುಕ್ತ ವಾಸೀಂ ಎಚ್ಚರಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-44-982376235</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರಿಯೂರು</strong>: ಮಳೆಗಾಲ ಆರಂಭಕ್ಕೂ ಮೊದಲು ನಗರದಲ್ಲಿರುವ ರಾಜ ಕಾಲುವೆಗಳನ್ನು ಸ್ವಚ್ಛಗೊಳಿಸುವ ಕಾರ್ಯಕ್ಕೆ ಮುಂದಾಗಿರುವ ನಗರಸಭೆ ಆಡಳಿತದ ಕ್ರಮಕ್ಕೆ ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.</p>.<p>ಪೌರಾಯುಕ್ತ ಎ. ವಾಸೀಂ ಅವರು ಆರೋಗ್ಯ ನಿರೀಕ್ಷಕರು ಹಾಗೂ ಪೌರ ನೌಕರರ ಸಭೆ ನಡೆಸಿ, ಅಕಾಲಿಕ ಮಳೆಯಿಂದ ಉಂಟಾಗಬಹುದಾದ ಹಾನಿ ತಡೆಯಲು ಆಶ್ರಯ ಕಾಲೊನಿಯಿಂದ ಆರಂಭವಾಗುವ ರಾಜಕಾಲುವೆ, ವಾಗ್ದೇವಿ ಶಿಕ್ಷಣ ಸಂಸ್ಥೆ ಮತ್ತು ಕಟುಗರ ಹಳ್ಳದ ರಾಜಕಾಲುವೆಗಳನ್ನು ಗುರುವಾರ ಸ್ವಚ್ಛಗೊಳಿಸಿದ್ದಾರೆ.</p>.<p>‘ಹಿಂದಿನ ವರ್ಷ ಒಂದೇ ರಾತ್ರಿ 90 ಮಿ.ಮೀಗಿಂತ ಹೆಚ್ಚು ಮಳೆ ಸುರಿದ ಕಾರಣ ರಾಜ ಕಾಲುವೆಗಳಿಂದ ನೀರು ಹೊರಬಂದು ಬಡಾವಣೆಗಳಿಗೆ ನುಗ್ಗಿತ್ತು. ಹಾಗಾಗಿ ಈ ಬಾರಿ ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲ ರಾಜ ಕಾಲುವೆಗಳನ್ನು ಸ್ವಚ್ಛಗೊಳಿಸಿದ್ದೇವೆ. ನಗರ ನಿವಾಸಿಗಳು ಮನೆಯ ತ್ಯಾಜ್ಯವನ್ನು ರಾಜ ಕಾಲುವೆಗೆ ಸುರಿಯಬಾರದು. ಜೊತೆಗೆ ಮನೆಯ ಮುಂದಿನ ಬಾಕ್ಸ್ ಚರಂಡಿಗಳ ಮೇಲೆ ಕಾಂಪೌಂಡ್ ನಿರ್ಮಿಸದಂತೆ, ಕಾಲುವೆ ಒತ್ತುವರಿ ಮಾಡದಂತೆ ಮನೆ ಮಾಲೀಕರಿಗೆ ಮನವಿ ಮಾಡಿದ್ದೇವೆ. ಈ ರೀತಿ ಮಾಡುವುದರಿಂದ ಮಳೆಯ ನೀರು ಕಟ್ಟಿಕೊಂಡು ಒತ್ತಡ ಹೆಚ್ಚಾದಾಗ ನೀರು ಒಮ್ಮೆಲೆ ನುಗ್ಗುತ್ತದೆ. ಇದರಿಂದ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಮನೆ ಮಾಲೀಕರು ನಿಯಮ ಪಾಲಿಸದಿದ್ದರೆ ಕಾನೂನು ಕ್ರಮ ಅನಿವಾರ್ಯ’ ಎಂದು ಪೌರಾಯುಕ್ತ ವಾಸೀಂ ಎಚ್ಚರಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-44-982376235</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>