<p><strong>ಹಿರಿಯೂರು</strong>: ತಾಲ್ಲೂಕಿನ ವಾಣಿವಿಲಾಸ ಅಣೆಕಟ್ಟೆಯ ನಾಲೆಯಲ್ಲಿ ಭಾನುವಾರ ಮಗನ ಕೈಹಿಡಿದು ಸೆಲ್ಫಿ ಕ್ಲಿಕ್ಕಿಸುವ ವೇಳೆ ತಂದೆಯ ಕಾಲು ಜಾರಿದ್ದು, ಮಗ ನೀರಿನಲ್ಲಿ ಕೊಚ್ಚಿ ಹೋಗಿ ಸಾವಿಗೀಡಾಗಿದ್ದಾನೆ.</p>.<p>ತಾಲ್ಲೂಕಿನ ಆದಿವಾಲ ಗ್ರಾಮದ ಜಾಫರ್ ಸಾದಿಕ್ ಅವರ ಪುತ್ರ ಸಮೀರ್ (4) ಮೃತಬಾಲಕ. ಪೈಂಟರ್ ಕೆಲಸ ಮಾಡುತ್ತಿದ್ದ ಜಾಫರ್ ಭಾನುವಾರ ರಜೆ ಇದ್ದ ಕಾರಣ ಮಗನೊಂದಿಗೆ ವಾಣಿವಿಲಾಸ ಜಲಾಶಯದ ನಾಲೆಯಲ್ಲಿ ಈಜಲು ಹೋಗಿದ್ದರು. ಈ ವೇಳೆ ನಾಲೆಯ ದಡದಲ್ಲಿ ಸೆಲ್ಫಿ ಕ್ಲಿಕ್ಕಿಸುವ ವೇಳೆ ತಂದೆಯ ಕಾಲು ಜಾರಿದ್ದರಿಂದ ಬಾಲಕ ನೀರಿನಲ್ಲಿ ಕೊಚ್ಚಿ ಹೋಗಿದ್ದು, ಸಾದಿಕ್ಗೆ ಗಾಯಗಳಾಗಿವೆ.</p>.<p>ಅಗ್ನಿ ಶಾಮಕ ದಳದ ಸಿಬ್ಬಂದಿ ಹಾಗೂ ಗ್ರಾಮಾಂತರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಾಲಕ ಜಾರಿಬಿದ್ದ ಸ್ಥಳದಿಂದ ಸ್ವಲ್ಪ ದೂರದಲ್ಲಿ ಶವವನ್ನು ಪತ್ತೆ ಮಾಡಿದ್ದಾರೆ. ಗಾಯಗೊಂಡಿರುವ ಸಾದಿಕ್ನನ್ನು ಹಿರಿಯೂರಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-44-47897256</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರಿಯೂರು</strong>: ತಾಲ್ಲೂಕಿನ ವಾಣಿವಿಲಾಸ ಅಣೆಕಟ್ಟೆಯ ನಾಲೆಯಲ್ಲಿ ಭಾನುವಾರ ಮಗನ ಕೈಹಿಡಿದು ಸೆಲ್ಫಿ ಕ್ಲಿಕ್ಕಿಸುವ ವೇಳೆ ತಂದೆಯ ಕಾಲು ಜಾರಿದ್ದು, ಮಗ ನೀರಿನಲ್ಲಿ ಕೊಚ್ಚಿ ಹೋಗಿ ಸಾವಿಗೀಡಾಗಿದ್ದಾನೆ.</p>.<p>ತಾಲ್ಲೂಕಿನ ಆದಿವಾಲ ಗ್ರಾಮದ ಜಾಫರ್ ಸಾದಿಕ್ ಅವರ ಪುತ್ರ ಸಮೀರ್ (4) ಮೃತಬಾಲಕ. ಪೈಂಟರ್ ಕೆಲಸ ಮಾಡುತ್ತಿದ್ದ ಜಾಫರ್ ಭಾನುವಾರ ರಜೆ ಇದ್ದ ಕಾರಣ ಮಗನೊಂದಿಗೆ ವಾಣಿವಿಲಾಸ ಜಲಾಶಯದ ನಾಲೆಯಲ್ಲಿ ಈಜಲು ಹೋಗಿದ್ದರು. ಈ ವೇಳೆ ನಾಲೆಯ ದಡದಲ್ಲಿ ಸೆಲ್ಫಿ ಕ್ಲಿಕ್ಕಿಸುವ ವೇಳೆ ತಂದೆಯ ಕಾಲು ಜಾರಿದ್ದರಿಂದ ಬಾಲಕ ನೀರಿನಲ್ಲಿ ಕೊಚ್ಚಿ ಹೋಗಿದ್ದು, ಸಾದಿಕ್ಗೆ ಗಾಯಗಳಾಗಿವೆ.</p>.<p>ಅಗ್ನಿ ಶಾಮಕ ದಳದ ಸಿಬ್ಬಂದಿ ಹಾಗೂ ಗ್ರಾಮಾಂತರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಾಲಕ ಜಾರಿಬಿದ್ದ ಸ್ಥಳದಿಂದ ಸ್ವಲ್ಪ ದೂರದಲ್ಲಿ ಶವವನ್ನು ಪತ್ತೆ ಮಾಡಿದ್ದಾರೆ. ಗಾಯಗೊಂಡಿರುವ ಸಾದಿಕ್ನನ್ನು ಹಿರಿಯೂರಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-44-47897256</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>