<p>ಹಿರಿಯೂರು: ನಗರದ ಮೂರನೇ ವಾರ್ಡ್ನಲ್ಲಿ ನಡೆಸಬೇಕಾದ ರಸ್ತೆ ಕಾಮಗಾರಿಯನ್ನು ಬೇರೊಂಡು ವಾರ್ಡ್ನಲ್ಲಿ ಮಾಡಲಾಗಿದ್ದು, ಎಸ್ಟಿ ಸಮುದಾಯದ ಅನುದಾನವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ನಗರಸಭೆ ಮಾಜಿ ಅಧ್ಯಕ್ಷೆ ಶಿವರಂಜನಿ ಅವರು ಆರೋಪಿಸಿದ್ದಾರೆ. </p>.<p>ವಿಶ್ವೇಶ್ವರಯ್ಯ ಜಲ ನಿಗಮದ ವತಿಯಿಂದ ಟಿಎಸ್ಪಿ ಅನುದಾನದಲ್ಲಿ ಎಸ್ಟಿ ಸಮುದಾಯದ ಕಾಲೋನಿಯಲ್ಲಿ ರಸ್ತೆ ಕಾಮಗಾರಿ ಕೈಗೆತ್ತಿಕೊಳ್ಳಬೇಕಿತ್ತು. ಕಾಮಗಾರಿಗೆ ಅನುಮೋದನೆಯೂ ಸಿಕ್ಕಿತ್ತು. ಆದರೆ ಎಸ್ಟಿ ಸಮುದಾಯದವರೇ ಇಲ್ಲದ ಕಡೆ ಕಾಮಗಾರಿ ನಡೆಸಿರುವುದು ಸಂದೇಹಕ್ಕೆ ಕಾರಣವಾಗಿದೆ ಎಂದು ಅವರು ಆರೋಪಿಸಿದ್ದಾರೆ.</p>.<p>‘ಗುತ್ತಿಗೆದಾರರೊಬ್ಬರು ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರ ಪ್ರಭಾವ ಬಳಸಿಕೊಂಡು ಈ ಕಾಮಗಾರಿ ನಡೆಸುತ್ತಿರುವುದು ಗಮನಕ್ಕೆ ಬಂದಿದೆ. ಕಾಮಗಾರಿಯು ಅಂದಾಜು ಪಟ್ಟಿಗೆ ಅನುಗುಣವಾಗಿ ಇಲ್ಲ. ಜೊತೆಗೆ ತುಂಬಾ ಕಳಪೆ ಗುಣಮಟ್ಟದಿಂದ ಕೂಡಿದೆ. ಈ ಮೂಲಕ ಎಸ್ಟಿ ಸಮುದಾಯವನ್ನು ವಂಚಿಸಲಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ಕಾಮಗಾರಿಯನ್ನು ತಕ್ಷಣ ಸ್ಥಗಿತಗೊಳಿಸಿ, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಕಾನೂನು ಕ್ರಮ ಜರುಗಿಸಿ ಸಮುದಾಯದವರಿಗೆ ನ್ಯಾಯ ಒದಗಿಸಬೇಕು ಎಂದು ಶಿವರಂಜನಿ ಮನವಿ ಮಾಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಿರಿಯೂರು: ನಗರದ ಮೂರನೇ ವಾರ್ಡ್ನಲ್ಲಿ ನಡೆಸಬೇಕಾದ ರಸ್ತೆ ಕಾಮಗಾರಿಯನ್ನು ಬೇರೊಂಡು ವಾರ್ಡ್ನಲ್ಲಿ ಮಾಡಲಾಗಿದ್ದು, ಎಸ್ಟಿ ಸಮುದಾಯದ ಅನುದಾನವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ನಗರಸಭೆ ಮಾಜಿ ಅಧ್ಯಕ್ಷೆ ಶಿವರಂಜನಿ ಅವರು ಆರೋಪಿಸಿದ್ದಾರೆ. </p>.<p>ವಿಶ್ವೇಶ್ವರಯ್ಯ ಜಲ ನಿಗಮದ ವತಿಯಿಂದ ಟಿಎಸ್ಪಿ ಅನುದಾನದಲ್ಲಿ ಎಸ್ಟಿ ಸಮುದಾಯದ ಕಾಲೋನಿಯಲ್ಲಿ ರಸ್ತೆ ಕಾಮಗಾರಿ ಕೈಗೆತ್ತಿಕೊಳ್ಳಬೇಕಿತ್ತು. ಕಾಮಗಾರಿಗೆ ಅನುಮೋದನೆಯೂ ಸಿಕ್ಕಿತ್ತು. ಆದರೆ ಎಸ್ಟಿ ಸಮುದಾಯದವರೇ ಇಲ್ಲದ ಕಡೆ ಕಾಮಗಾರಿ ನಡೆಸಿರುವುದು ಸಂದೇಹಕ್ಕೆ ಕಾರಣವಾಗಿದೆ ಎಂದು ಅವರು ಆರೋಪಿಸಿದ್ದಾರೆ.</p>.<p>‘ಗುತ್ತಿಗೆದಾರರೊಬ್ಬರು ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರ ಪ್ರಭಾವ ಬಳಸಿಕೊಂಡು ಈ ಕಾಮಗಾರಿ ನಡೆಸುತ್ತಿರುವುದು ಗಮನಕ್ಕೆ ಬಂದಿದೆ. ಕಾಮಗಾರಿಯು ಅಂದಾಜು ಪಟ್ಟಿಗೆ ಅನುಗುಣವಾಗಿ ಇಲ್ಲ. ಜೊತೆಗೆ ತುಂಬಾ ಕಳಪೆ ಗುಣಮಟ್ಟದಿಂದ ಕೂಡಿದೆ. ಈ ಮೂಲಕ ಎಸ್ಟಿ ಸಮುದಾಯವನ್ನು ವಂಚಿಸಲಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ಕಾಮಗಾರಿಯನ್ನು ತಕ್ಷಣ ಸ್ಥಗಿತಗೊಳಿಸಿ, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಕಾನೂನು ಕ್ರಮ ಜರುಗಿಸಿ ಸಮುದಾಯದವರಿಗೆ ನ್ಯಾಯ ಒದಗಿಸಬೇಕು ಎಂದು ಶಿವರಂಜನಿ ಮನವಿ ಮಾಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>