ತೇರುಮಲ್ಲೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಮುಗಿದ ಎರಡು ದಿನಗಳ ನಂತರ ನಡೆಯುವ ಕರ್ಪೂರದಾರತಿ ಕಾರ್ಯಕ್ರಮ ನಡೆಯುತ್ತದೆ. ಇದು ಮಹಿಳೆಯರಿಗೆ ವಿಶೇಷ ಹಬ್ಬ. ದೇಗುಲದ ಒಳ ಆವರಣದಲ್ಲಿ ಗರ್ಭಗುಡಿಯ ಮುಂಭಾಗ 48 ಅಡಿಯ ಕಲ್ಲುಕಂಬವಿದ್ದು, ಕಂಬದ ಮೇಲೆ 8 ಅಡಿ ಎತ್ತರದ ಬಸವಮಂಟಪ ಇದೆ. ಮಂಟಪದ ಒಳಗೆ ಕೆತ್ತನೆಯಿಂದ ಕೂಡಿದ ಚಿಕ್ಕ ನಂದಿ ವಿಗ್ರಹವಿದೆ. ಇದಕ್ಕೆ 6 ಅಡಿ ಉದ್ದವಿರುವ 8 ಕಬ್ಬಿಣದ ಸೌಟು (ಉದ್ದನೆಯ ಹಿಡಿ ಇರುವ ದೀಪ)ಗಳನ್ನು ಜೋಡಿಸಲಾಗಿದ್ದು, ಕರ್ಪೂರದ ಆರತಿಯ ದಿನ ಒಟ್ಟು 56 ಅಡಿ ಎತ್ತರದ ನುಣುಪಾದ ಕೆತ್ತನೆಯಿಂದ ಕೂಡಿರುವ ದೀಪಸ್ತಂಭದ ಮೇಲೆ ಏರಿ ಬತ್ತಿ, ಎಣ್ಣೆ ಹಾಕಿ, ಕರ್ಪೂರ ಬಳಸಿ ದೀಪ ಹಚ್ಚುವ ದೃಶ್ಯ ಭಕ್ತರನ್ನು ಮೈಜುಮ್ಮೆನ್ನಿಸುವಂತೆ ಮಾಡುತ್ತದೆ.