ನೌಕರರಿಬ್ಬರು ಬೆಂಗಳೂರಿನಿಂದ ಬಿ.ಜಿ.ಕೆರೆಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಹರ್ತಿಕೋಟೆ ಸಮೀಪದ ಹೆದ್ದಾರಿಯಲ್ಲಿ ವಾಹನವೊಂದು ಬೈಕ್ ಗೆ ಡಿಕ್ಕಿ ಹೊಡೆದಿದೆ. ಇಬ್ಬರೂ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಪ್ರದೀಪ್ ಕುಮಾರ್ ಒಂದೂವರೆ ವರ್ಷದ ಹಿಂದೆ ಮದುವೆಯಾಗಿದ್ದು, ನಾಲ್ಕು ತಿಂಗಳ ಮಗು ಇದೆ ಎಂದು ಐಮಂಗಲ ಠಾಣೆಯ ಪೊಲೀಸರು ತಿಳಿಸಿದ್ದಾರೆ.