<p><strong>ಹಿರಿಯೂರು:</strong> ‘2008ರಿಂದ ಇಲ್ಲಿಯವರೆಗೆ ನಗರದ ವಾಣಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ₹ 15 ಕೋಟಿ ಅನುದಾನ ತಂದು ಅಭಿವೃದ್ಧಿ ಮಾಡಲಾಗಿದೆ‘ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಹೇಳಿದರು.</p>.<p>ನಗರದ ವಾಣಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ 3 ಕೋಟಿ ವೆಚ್ಚದ ಸಭಾಭವನ ಉದ್ಘಾಟಿಸಿ ಮಾತನಾಡಿದರು.</p>.<p>ಉನ್ನತ ಶಿಕ್ಷಣ ಇಲಾಖೆಯಿಂದ ₹ 5 ಕೋಟಿ, ಕೇಂದ್ರ ಸರ್ಕಾರದಿಂದ ₹ 5 ಕೋಟಿ, ನಗರಸಭೆಯಿಂದ ₹ 3 ಕೋಟಿ ಹಾಗೂ ಶಾಸಕರ ನಿಧಿಯಲ್ಲಿ ₹ 2 ಕೋಟಿ ಅನುದಾನವನ್ನು ನೀಡಲಾಗಿದೆ. ಸರ್ಕಾರ ಕೋಟ್ಯಂತರ ರೂಪಾಯಿ ಹಣವನ್ನು ಸರ್ಕಾರಿ ಶಾಲಾ–ಕಾಲೇಜುಗಳಿಗೆ ಸೌಲಭ್ಯ ಕಲ್ಪಿಸಲು ವಿನಿಯೋಗಿಸುತ್ತಿದ್ದರೂ ವರ್ಷದಿಂದ ವರ್ಷಕ್ಕೆ ಸರ್ಕಾರಿ ಶಿಕ್ಷಣ ಸಂಸ್ಥೆಗಳಿಗೆ ಸೇರುವ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಆಗುತ್ತಿರುವುದು ಬೇಸರದ ಸಂಗತಿ. ಶಿಕ್ಷಣ ತಜ್ಞರು ಈ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸಬೇಕು ಎಂದು ಮನವಿ ಮಾಡಿದರು.</p>.<p>ಪ್ರೊ. ಮಹೇಶ್ ಪ್ರಾಂಶುಪಾಲರಾಗಿ ಅಧಿಕಾರ ವಹಿಸಿಕೊಂಡ ಮೂರು ವರ್ಷದಲ್ಲಿ ಕಾಲೇಜಿಗೆ ₹ 4 ಕೋಟಿ ಅನುದಾನ ತರಲು ಪ್ರಯತ್ನ ನಡೆಸಿದ್ದಾರೆ. ಅವರು ಕಾಲೇಜಿನ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿ ಇಂದು ನಿವೃತ್ತಿ ಹೊಂದುತ್ತಿದ್ದು, ಮುಂದೆಯೂ ಅವರ ಸೇವೆ ಶಿಕ್ಷಣ ಕ್ಷೇತ್ರಕ್ಕೆ ದೊರೆಯಲಿ ಎಂದು ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಜಿ. ಪ್ರೇಮ್ ಕುಮಾರ್ ಹೇಳಿದರು.</p>.<p>ಪ್ರಾಂಶುಪಾಲ ಪ್ರೊ. ಮಹೇಶ್ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಗಿಡ್ಡೋಬನಹಳ್ಳಿ ಅಶೋಕ್, ಖಾದಿ ರಮೇಶ್, ತಿಮ್ಮಶೆಟ್ಟಿ, ದಿಂಡಾವರ ಮಹೇಶ್, ಪ್ರೊ. ಧರಣೇಂದ್ರಯ್ಯ, ಗಂಗಾಧರ್, ಹೇಮಲತಾ, ವಿ. ಶಿವಕುಮಾರ್ ಹಾಗೂ ಕಾಲೇಜಿನ ಸಿಬ್ಬಂದಿ ಹಾಜರಿದ್ದರು.</p>.<p>ನಿವೃತ್ತಿ ಹೊಂದಿದ ಪ್ರೊ. ಮಹೇಶ್ ಅವರನ್ನು ಸಚಿವರು ಸನ್ಮಾನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರಿಯೂರು:</strong> ‘2008ರಿಂದ ಇಲ್ಲಿಯವರೆಗೆ ನಗರದ ವಾಣಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ₹ 15 ಕೋಟಿ ಅನುದಾನ ತಂದು ಅಭಿವೃದ್ಧಿ ಮಾಡಲಾಗಿದೆ‘ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಹೇಳಿದರು.</p>.<p>ನಗರದ ವಾಣಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ 3 ಕೋಟಿ ವೆಚ್ಚದ ಸಭಾಭವನ ಉದ್ಘಾಟಿಸಿ ಮಾತನಾಡಿದರು.</p>.<p>ಉನ್ನತ ಶಿಕ್ಷಣ ಇಲಾಖೆಯಿಂದ ₹ 5 ಕೋಟಿ, ಕೇಂದ್ರ ಸರ್ಕಾರದಿಂದ ₹ 5 ಕೋಟಿ, ನಗರಸಭೆಯಿಂದ ₹ 3 ಕೋಟಿ ಹಾಗೂ ಶಾಸಕರ ನಿಧಿಯಲ್ಲಿ ₹ 2 ಕೋಟಿ ಅನುದಾನವನ್ನು ನೀಡಲಾಗಿದೆ. ಸರ್ಕಾರ ಕೋಟ್ಯಂತರ ರೂಪಾಯಿ ಹಣವನ್ನು ಸರ್ಕಾರಿ ಶಾಲಾ–ಕಾಲೇಜುಗಳಿಗೆ ಸೌಲಭ್ಯ ಕಲ್ಪಿಸಲು ವಿನಿಯೋಗಿಸುತ್ತಿದ್ದರೂ ವರ್ಷದಿಂದ ವರ್ಷಕ್ಕೆ ಸರ್ಕಾರಿ ಶಿಕ್ಷಣ ಸಂಸ್ಥೆಗಳಿಗೆ ಸೇರುವ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಆಗುತ್ತಿರುವುದು ಬೇಸರದ ಸಂಗತಿ. ಶಿಕ್ಷಣ ತಜ್ಞರು ಈ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸಬೇಕು ಎಂದು ಮನವಿ ಮಾಡಿದರು.</p>.<p>ಪ್ರೊ. ಮಹೇಶ್ ಪ್ರಾಂಶುಪಾಲರಾಗಿ ಅಧಿಕಾರ ವಹಿಸಿಕೊಂಡ ಮೂರು ವರ್ಷದಲ್ಲಿ ಕಾಲೇಜಿಗೆ ₹ 4 ಕೋಟಿ ಅನುದಾನ ತರಲು ಪ್ರಯತ್ನ ನಡೆಸಿದ್ದಾರೆ. ಅವರು ಕಾಲೇಜಿನ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿ ಇಂದು ನಿವೃತ್ತಿ ಹೊಂದುತ್ತಿದ್ದು, ಮುಂದೆಯೂ ಅವರ ಸೇವೆ ಶಿಕ್ಷಣ ಕ್ಷೇತ್ರಕ್ಕೆ ದೊರೆಯಲಿ ಎಂದು ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಜಿ. ಪ್ರೇಮ್ ಕುಮಾರ್ ಹೇಳಿದರು.</p>.<p>ಪ್ರಾಂಶುಪಾಲ ಪ್ರೊ. ಮಹೇಶ್ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಗಿಡ್ಡೋಬನಹಳ್ಳಿ ಅಶೋಕ್, ಖಾದಿ ರಮೇಶ್, ತಿಮ್ಮಶೆಟ್ಟಿ, ದಿಂಡಾವರ ಮಹೇಶ್, ಪ್ರೊ. ಧರಣೇಂದ್ರಯ್ಯ, ಗಂಗಾಧರ್, ಹೇಮಲತಾ, ವಿ. ಶಿವಕುಮಾರ್ ಹಾಗೂ ಕಾಲೇಜಿನ ಸಿಬ್ಬಂದಿ ಹಾಜರಿದ್ದರು.</p>.<p>ನಿವೃತ್ತಿ ಹೊಂದಿದ ಪ್ರೊ. ಮಹೇಶ್ ಅವರನ್ನು ಸಚಿವರು ಸನ್ಮಾನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>