<p><strong>ಹಿರಿಯೂರು:</strong> ಇಂದಿನ ಯುಪೀಳಿಗೆಯ ಬಹುಮಂದಿ ನಿರ್ದಿಷ್ಟ ಗುರಿಯತ್ತ ಸಾಗುವ ಪ್ರಯತ್ನ ಮಾಡದೆ ಹತಾಶೆಗೆ ಜಾರುತ್ತಿದ್ದಾರೆ. ದೊಡ್ಡ ಕನಸುಗಳನ್ನು ಹೊಂದಿ ಅವನ್ನು ನನಸಾಗಿಸುವ ನಿಟ್ಟಿನಲ್ಲಿ ಗಂಭೀರ ಪ್ರಯತ್ನ ನಡೆಸಬೇಕು ಎಂದು ಉಪನ್ಯಾಸಕ ಕೆ.ಎಂ. ಜಗನ್ನಾಥ್ ಹೇಳಿದರು.</p>.<p>ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವಿದ್ಯಾರ್ಥಿ ಸಂಘದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಬಡತನವನ್ನೇ ಸವಾಲಾಗಿ ಮಾಡಿಕೊಂಡು ಉನ್ನತ ಸಾಧನೆ ಮಾಡಿದವರ ದೊಡ್ಡ ಪಟ್ಟಿಯೇ ಇದೆ. ಬಡತನವನ್ನೇ ದೊಡ್ಡದು ಮಾಡಿ ಅವಕಾಶಗಳಿಂದ ವಂಚಿತರಾಗಬಾರದು. ಬರುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳುವ ಕೌಶಲವನ್ನು ರೂಢಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಪ್ರಾಂಶುಪಾಲ ಎನ್. ವಾಸುದೇವರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಉಪನ್ಯಾಸಕರಾಗಿದ್ದ ಶಿವರಾಜ್, ಶ್ರೀನಿವಾಸ್, ರಾಕೇಶ್, ಚಿಕ್ಕಕರಿಯಪ್ಪ, ರಾಘವೇಂದ್ರ, ಸವಿತಾ, ರಂಗಶ್ಯಾಮಯ್ಯ, ಚಂದ್ರಶೇಖರ್, ಪವನ್ ಕುಮಾರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರಿಯೂರು:</strong> ಇಂದಿನ ಯುಪೀಳಿಗೆಯ ಬಹುಮಂದಿ ನಿರ್ದಿಷ್ಟ ಗುರಿಯತ್ತ ಸಾಗುವ ಪ್ರಯತ್ನ ಮಾಡದೆ ಹತಾಶೆಗೆ ಜಾರುತ್ತಿದ್ದಾರೆ. ದೊಡ್ಡ ಕನಸುಗಳನ್ನು ಹೊಂದಿ ಅವನ್ನು ನನಸಾಗಿಸುವ ನಿಟ್ಟಿನಲ್ಲಿ ಗಂಭೀರ ಪ್ರಯತ್ನ ನಡೆಸಬೇಕು ಎಂದು ಉಪನ್ಯಾಸಕ ಕೆ.ಎಂ. ಜಗನ್ನಾಥ್ ಹೇಳಿದರು.</p>.<p>ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವಿದ್ಯಾರ್ಥಿ ಸಂಘದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಬಡತನವನ್ನೇ ಸವಾಲಾಗಿ ಮಾಡಿಕೊಂಡು ಉನ್ನತ ಸಾಧನೆ ಮಾಡಿದವರ ದೊಡ್ಡ ಪಟ್ಟಿಯೇ ಇದೆ. ಬಡತನವನ್ನೇ ದೊಡ್ಡದು ಮಾಡಿ ಅವಕಾಶಗಳಿಂದ ವಂಚಿತರಾಗಬಾರದು. ಬರುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳುವ ಕೌಶಲವನ್ನು ರೂಢಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಪ್ರಾಂಶುಪಾಲ ಎನ್. ವಾಸುದೇವರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಉಪನ್ಯಾಸಕರಾಗಿದ್ದ ಶಿವರಾಜ್, ಶ್ರೀನಿವಾಸ್, ರಾಕೇಶ್, ಚಿಕ್ಕಕರಿಯಪ್ಪ, ರಾಘವೇಂದ್ರ, ಸವಿತಾ, ರಂಗಶ್ಯಾಮಯ್ಯ, ಚಂದ್ರಶೇಖರ್, ಪವನ್ ಕುಮಾರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>