<p><strong>ಹಿರಿಯೂರು</strong>: ಮುದ್ದೆ ಕೋಲಿನಿಂದ ಹೊಡೆದು ಪತಿಯೇ ಪತ್ನಿಯನ್ನು ಹತ್ಯೆಗೈದ ಘಟನೆ ತಾಲ್ಲೂಕಿನ ಎಂ.ಡಿ. ಕೋಟೆ ಗ್ರಾಮದಲ್ಲಿ ಶನಿವಾರ ಬೆಳಕಿಗೆ ಬಂದಿದೆ.</p>.<p>ವಿಜಯಲಕ್ಷ್ಮಿ (30) ಕೊಲೆಯಾದ ಮಹಿಳೆ. ಆರೋಪಿ ಬಸವರಾಜ್ ಎಂಬಾತನನ್ನು ಐಮಂಗಲ ಠಾಣೆಯ ಪೊಲೀಸರು ಬಂಧಿಸಿದ್ದಾರೆ.</p>.<p>ನಿತ್ಯ ಕುಡಿದು ಮನೆಗೆ ಬರುತ್ತಿದ್ದ ಪತಿಯನ್ನು ಹೆಂಡತಿ ಪ್ರಶ್ನಿಸಿದ್ದಳು. ಈ ಗಲಾಟೆ ವಿಕೋಪಕ್ಕೆ ತಿರುಗಿ ಮುದ್ದೆ ಕೋಲಿನಿಂದ ಹೆಂಡತಿಗೆ ಹೊಡೆದಿದ್ದಾನೆ. ಬಲವಾದ ಏಟು ಬಿದ್ದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ರಾತ್ರಿ ಸಮಯವಾಗಿದ್ದರಿಂದ ಯಾರಿಗೂ ಮಾಹಿತಿ ತಿಳಿದಿರಲಿಲ್ಲ. ಬೆಳಿಗ್ಗೆ ಮಕ್ಕಳು ಅಕ್ಕಪಕ್ಕದವರಿಗೆ ವಿಷಯ ತಿಳಿಸಿದ್ದಾರೆ. ಪರಾರಿಯಾಗಿದ್ದ ಆರೋಪಿಯನ್ನು ಪೊಲಿಸರು ಬಂಧಿಸಿದ್ದಾರೆ. ಜಿಲ್ಲಾ ವರಿಷ್ಠಾಧಿಕಾರಿ ಜಿ. ರಾಧಿಕಾ ಸ್ಥಳಕ್ಕೆ ಭೇಟಿ ನೀಡಿದ್ದರು.</p>.<p>ಮೂಲತಃ ಚಳ್ಳಕೆರೆ ತಾಲ್ಲೂಕಿನ ಗೊರ್ಲತ್ತು ಗ್ರಾಮದ ಬಸವರಾಜ ಲಾರಿ ಚಾಲಕನಾಗಿದ್ದ. ಎಂ.ಡಿ. ಕೋಟೆಯ ವಿಜಯಲಕ್ಷ್ಮಿ ಅವರನ್ನು ವರಿಸಿದ ಬಳಿಕ ಇಲ್ಲಿಯೇ ವಾಸವಾಗಿದ್ದ. ದಂಪತಿಗೆ ಸಿದ್ದಾರ್ಥ್ (9), ಸನ್ನಿಧಿ (6), 9 ತಿಂಗಳ ಮಗು ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರಿಯೂರು</strong>: ಮುದ್ದೆ ಕೋಲಿನಿಂದ ಹೊಡೆದು ಪತಿಯೇ ಪತ್ನಿಯನ್ನು ಹತ್ಯೆಗೈದ ಘಟನೆ ತಾಲ್ಲೂಕಿನ ಎಂ.ಡಿ. ಕೋಟೆ ಗ್ರಾಮದಲ್ಲಿ ಶನಿವಾರ ಬೆಳಕಿಗೆ ಬಂದಿದೆ.</p>.<p>ವಿಜಯಲಕ್ಷ್ಮಿ (30) ಕೊಲೆಯಾದ ಮಹಿಳೆ. ಆರೋಪಿ ಬಸವರಾಜ್ ಎಂಬಾತನನ್ನು ಐಮಂಗಲ ಠಾಣೆಯ ಪೊಲೀಸರು ಬಂಧಿಸಿದ್ದಾರೆ.</p>.<p>ನಿತ್ಯ ಕುಡಿದು ಮನೆಗೆ ಬರುತ್ತಿದ್ದ ಪತಿಯನ್ನು ಹೆಂಡತಿ ಪ್ರಶ್ನಿಸಿದ್ದಳು. ಈ ಗಲಾಟೆ ವಿಕೋಪಕ್ಕೆ ತಿರುಗಿ ಮುದ್ದೆ ಕೋಲಿನಿಂದ ಹೆಂಡತಿಗೆ ಹೊಡೆದಿದ್ದಾನೆ. ಬಲವಾದ ಏಟು ಬಿದ್ದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ರಾತ್ರಿ ಸಮಯವಾಗಿದ್ದರಿಂದ ಯಾರಿಗೂ ಮಾಹಿತಿ ತಿಳಿದಿರಲಿಲ್ಲ. ಬೆಳಿಗ್ಗೆ ಮಕ್ಕಳು ಅಕ್ಕಪಕ್ಕದವರಿಗೆ ವಿಷಯ ತಿಳಿಸಿದ್ದಾರೆ. ಪರಾರಿಯಾಗಿದ್ದ ಆರೋಪಿಯನ್ನು ಪೊಲಿಸರು ಬಂಧಿಸಿದ್ದಾರೆ. ಜಿಲ್ಲಾ ವರಿಷ್ಠಾಧಿಕಾರಿ ಜಿ. ರಾಧಿಕಾ ಸ್ಥಳಕ್ಕೆ ಭೇಟಿ ನೀಡಿದ್ದರು.</p>.<p>ಮೂಲತಃ ಚಳ್ಳಕೆರೆ ತಾಲ್ಲೂಕಿನ ಗೊರ್ಲತ್ತು ಗ್ರಾಮದ ಬಸವರಾಜ ಲಾರಿ ಚಾಲಕನಾಗಿದ್ದ. ಎಂ.ಡಿ. ಕೋಟೆಯ ವಿಜಯಲಕ್ಷ್ಮಿ ಅವರನ್ನು ವರಿಸಿದ ಬಳಿಕ ಇಲ್ಲಿಯೇ ವಾಸವಾಗಿದ್ದ. ದಂಪತಿಗೆ ಸಿದ್ದಾರ್ಥ್ (9), ಸನ್ನಿಧಿ (6), 9 ತಿಂಗಳ ಮಗು ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>