<p><strong>ಚಿತ್ರದುರ್ಗ: </strong>ಹಿರಿಯೂರು ನಗರಸಭೆ ಚುನಾವಣೆಗೆ ಮೇ 29ರಂದು ಮತದಾನ ನಡೆಯಲಿದ್ದು, ನಗರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೇದರಿವೆ.</p>.<p>ಲೋಕಸಭಾ ಚುನಾವಣೆ ಮುಕ್ತಯವಾದ ಬೆನ್ನಲ್ಲೇ ಚುನಾವಣೆ ಘೋಷಣೆಯಾಗಿದ್ದು, ರಾಜಕೀಯ ಲೆಕ್ಕಾಚಾರ ಆರಂಭವಾಗಿವೆ. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ಟಿಕೆಟ್ ಪಡೆಯಲು ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದ್ದು, ಈಗಾಗಲೇ ಪಕ್ಷದ ಮುಖಂಡರನ್ನು ಎಡತಾಕುತ್ತಿದ್ದಾರೆ.</p>.<p>ಈ ಮೊದಲು ಇಲ್ಲಿ 27 ವಾರ್ಡ್ಗಳಿದ್ದವು. ಪುರಸಭೆಯಿಂದ ನಗರಸಭೆಯಾಗಿ ಮೇಲ್ದರ್ಜೆಗೆ ಬಡ್ತಿ ಹೊಂದಿದ ನಂತರ 31 ವಾರ್ಡ್ಗಳನ್ನಾಗಿ ವಿಂಗಡಿಸಲಾಗಿದೆ. ಈ ಬಾರಿಯ ಚುನಾವಣೆ ಸಾರ್ವಜನಿಕರಲ್ಲಿ ಹೆಚ್ಚು ಕುತೂಹಲ ಉಂಟು ಮಾಡಿದೆ.</p>.<p>2013ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ 8, ಜೆಡಿಎಸ್ನಿಂದ 5, ಬಿಎಸ್ಆರ್ ಕಾಂಗ್ರೆಸ್ನಿಂದ 3 ಹಾಗೂ 11 ಮಂದಿ ಸದಸ್ಯರು ಪಕ್ಷೇತರರಾಗಿ ಚುನಾಯಿತರಾಗಿದ್ದರು. ವಾರ್ಡ್ಗಳ ಸಂಖ್ಯೆ ಪುನರ್ ವಿಂಗಡನೆ ನಂತರ 31 ವಾರ್ಡ್ಗಳಿಗೆ ಇದೇ ಮೊದಲ ಬಾರಿ ಚುನಾವಣೆ ನಡೆಯುತ್ತಿದೆ. ಸ್ಥಳೀಯ ಸಂಸ್ಥೆಗಳ ಪೈಕಿ ಎರಡನೇ ಹಂತದ ಚುನಾವಣೆಗೆ ಹಿರಿಯೂರು ನಗರಸಭೆಯೂ ಸಜ್ಜಾಗಿದೆ.</p>.<p>ಲೋಕಸಭೆಗೂ ಮುನ್ನ ಇಲ್ಲಿನ ನಗರಸಭೆಗೆ ಚುನಾವಣೆ ನಡೆಯಬಹುದೆಂದು ಹಾಲಿ ಸದಸ್ಯರು ಸಾಕಷ್ಟು ತಯಾರಿ ಮಾಡಿಕೊಂಡಿದ್ದರು. ಇಷ್ಟೇ ಅಲ್ಲದೆ, ಹೊಸ ಆಕಾಂಕ್ಷಿಗಳು ಸಿದ್ಧತೆಯಲ್ಲಿ ತೊಡಗಿದ್ದರು. ರಾಷ್ಟ್ರೀಯ ಹಾಗೂ ಪ್ರಾದೇಶಿಕ ಪಕ್ಷಗಳಿಂದ ಟಿಕೆಟ್ ಸಿಗದಿದ್ದರೆ, ಪಕ್ಷೇತರರಾಗಿ ಕಣಕ್ಕೆ ಇಳಿಯಲು ಕೆಲವರು ನಿರ್ಧರಿಸಿದ್ದಾರೆ.</p>.<p>‘ನಗರಸಭೆಗೆ ಚುನಾವಣೆ ಘೋಷಣೆ ಆಗುವುದು ಯಾವಾಗ’ ಎಂದು ಕಾಯುತ್ತಿದ್ದ ಕೆಲವರು, ಸ್ಥಳೀಯ ಸಂಸ್ಥೆಗಳಿಗೆ ಮೊದಲ ಹಂತದಲ್ಲಿ ನಡೆದ ಚುನಾವಣೆಯಿಂದ ಇಲ್ಲಿಯವರೆಗೂ ವಾರ್ಡ್ಗಳ ಮತದಾರರನ್ನು ತಲುಪುವ ಪ್ರಯತ್ನದಲ್ಲಿದ್ದಾರೆ. ಹೊಸ ಆಕಾಂಕ್ಷಿಗಳು ಹುಟ್ಟಿಕೊಂಡ ಬೆನ್ನಲ್ಲೇ ಬೆಂಬಲಿಗರ ಮೂಲಕ ಮತದಾರರನ್ನು ಸಂಘಟಿಸಲು ಮುಂದಾಗುತ್ತಿದ್ದಾರೆ.</p>.<p>ಆಕಾಂಕ್ಷಿಗಳು ಮತದಾರರ ಮನೆಗೆ ತೆರಳಿ ‘ನಾನು ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ. ಗೆದ್ದರೆ, ವಾರ್ಡ್ ಅಭಿವೃದ್ಧಿಯ ಜತೆಗೆ ಮೂಲ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ’ ಎಂಬ ಭರವಸೆಯನ್ನೂ ನೀಡುತ್ತಿದ್ದಾರೆ.</p>.<p>31 ವಾರ್ಡ್ ವ್ಯಾಪ್ತಿಯಲ್ಲಿ 55 ಮತಗಟ್ಟೆಗಳನ್ನು ಸ್ಥಾಪಿಸಲು ತೀರ್ಮಾನಿಸಲಾಗಿದೆ. ಇಲ್ಲಿ 21,964 ಪುರುಷ ಹಾಗೂ 23,013 ಸಾವಿರ ಮಹಿಳಾ ಮತದಾರರು ಇದ್ದಾರೆ. ಮಹಿಳೆಯರ ಸಂಖ್ಯೆಯೇ ಹೆಚ್ಚಿದೆ.</p>.<p>‘ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾದಂತೆಲ್ಲ ಟಿಕೆಟ್ ಪಡೆಯಲು ಪೈಪೋಟಿ ಹೆಚ್ಚಾಗಲಿದೆ. ಹಾಲಿ ಸದಸ್ಯರಿಗೆ ಇಲ್ಲವೇ ಅವರ ಕುಟುಂಬದವರಿಗೆ ಪಕ್ಷಗಳು ಟಿಕೆಟ್ ನೀಡುವ ವಿಶ್ವಾಸವೂ ಇದೆ. ಈ ಬಾರಿ ಹಿರಿಯೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಶಾಸಕರೇ ಇರುವುದರಿಂದ ಆ ಪಕ್ಷದಲ್ಲಿ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಅಧಿಕವಾಗುವ ಸಾಧ್ಯತೆ ತಳ್ಳಿಹಾಕುವಂತಿಲ್ಲ’ ಎಂದು ಹೆಸರು ಹೇಳಲು ಇಚ್ಛಿಸದ ಸದಸ್ಯರೊಬ್ಬರು <span class="quote">‘ಪ್ರಜಾವಾಣಿ’</span>ಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>ಹಿರಿಯೂರು ನಗರಸಭೆ ಚುನಾವಣೆಗೆ ಮೇ 29ರಂದು ಮತದಾನ ನಡೆಯಲಿದ್ದು, ನಗರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೇದರಿವೆ.</p>.<p>ಲೋಕಸಭಾ ಚುನಾವಣೆ ಮುಕ್ತಯವಾದ ಬೆನ್ನಲ್ಲೇ ಚುನಾವಣೆ ಘೋಷಣೆಯಾಗಿದ್ದು, ರಾಜಕೀಯ ಲೆಕ್ಕಾಚಾರ ಆರಂಭವಾಗಿವೆ. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ಟಿಕೆಟ್ ಪಡೆಯಲು ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದ್ದು, ಈಗಾಗಲೇ ಪಕ್ಷದ ಮುಖಂಡರನ್ನು ಎಡತಾಕುತ್ತಿದ್ದಾರೆ.</p>.<p>ಈ ಮೊದಲು ಇಲ್ಲಿ 27 ವಾರ್ಡ್ಗಳಿದ್ದವು. ಪುರಸಭೆಯಿಂದ ನಗರಸಭೆಯಾಗಿ ಮೇಲ್ದರ್ಜೆಗೆ ಬಡ್ತಿ ಹೊಂದಿದ ನಂತರ 31 ವಾರ್ಡ್ಗಳನ್ನಾಗಿ ವಿಂಗಡಿಸಲಾಗಿದೆ. ಈ ಬಾರಿಯ ಚುನಾವಣೆ ಸಾರ್ವಜನಿಕರಲ್ಲಿ ಹೆಚ್ಚು ಕುತೂಹಲ ಉಂಟು ಮಾಡಿದೆ.</p>.<p>2013ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ 8, ಜೆಡಿಎಸ್ನಿಂದ 5, ಬಿಎಸ್ಆರ್ ಕಾಂಗ್ರೆಸ್ನಿಂದ 3 ಹಾಗೂ 11 ಮಂದಿ ಸದಸ್ಯರು ಪಕ್ಷೇತರರಾಗಿ ಚುನಾಯಿತರಾಗಿದ್ದರು. ವಾರ್ಡ್ಗಳ ಸಂಖ್ಯೆ ಪುನರ್ ವಿಂಗಡನೆ ನಂತರ 31 ವಾರ್ಡ್ಗಳಿಗೆ ಇದೇ ಮೊದಲ ಬಾರಿ ಚುನಾವಣೆ ನಡೆಯುತ್ತಿದೆ. ಸ್ಥಳೀಯ ಸಂಸ್ಥೆಗಳ ಪೈಕಿ ಎರಡನೇ ಹಂತದ ಚುನಾವಣೆಗೆ ಹಿರಿಯೂರು ನಗರಸಭೆಯೂ ಸಜ್ಜಾಗಿದೆ.</p>.<p>ಲೋಕಸಭೆಗೂ ಮುನ್ನ ಇಲ್ಲಿನ ನಗರಸಭೆಗೆ ಚುನಾವಣೆ ನಡೆಯಬಹುದೆಂದು ಹಾಲಿ ಸದಸ್ಯರು ಸಾಕಷ್ಟು ತಯಾರಿ ಮಾಡಿಕೊಂಡಿದ್ದರು. ಇಷ್ಟೇ ಅಲ್ಲದೆ, ಹೊಸ ಆಕಾಂಕ್ಷಿಗಳು ಸಿದ್ಧತೆಯಲ್ಲಿ ತೊಡಗಿದ್ದರು. ರಾಷ್ಟ್ರೀಯ ಹಾಗೂ ಪ್ರಾದೇಶಿಕ ಪಕ್ಷಗಳಿಂದ ಟಿಕೆಟ್ ಸಿಗದಿದ್ದರೆ, ಪಕ್ಷೇತರರಾಗಿ ಕಣಕ್ಕೆ ಇಳಿಯಲು ಕೆಲವರು ನಿರ್ಧರಿಸಿದ್ದಾರೆ.</p>.<p>‘ನಗರಸಭೆಗೆ ಚುನಾವಣೆ ಘೋಷಣೆ ಆಗುವುದು ಯಾವಾಗ’ ಎಂದು ಕಾಯುತ್ತಿದ್ದ ಕೆಲವರು, ಸ್ಥಳೀಯ ಸಂಸ್ಥೆಗಳಿಗೆ ಮೊದಲ ಹಂತದಲ್ಲಿ ನಡೆದ ಚುನಾವಣೆಯಿಂದ ಇಲ್ಲಿಯವರೆಗೂ ವಾರ್ಡ್ಗಳ ಮತದಾರರನ್ನು ತಲುಪುವ ಪ್ರಯತ್ನದಲ್ಲಿದ್ದಾರೆ. ಹೊಸ ಆಕಾಂಕ್ಷಿಗಳು ಹುಟ್ಟಿಕೊಂಡ ಬೆನ್ನಲ್ಲೇ ಬೆಂಬಲಿಗರ ಮೂಲಕ ಮತದಾರರನ್ನು ಸಂಘಟಿಸಲು ಮುಂದಾಗುತ್ತಿದ್ದಾರೆ.</p>.<p>ಆಕಾಂಕ್ಷಿಗಳು ಮತದಾರರ ಮನೆಗೆ ತೆರಳಿ ‘ನಾನು ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ. ಗೆದ್ದರೆ, ವಾರ್ಡ್ ಅಭಿವೃದ್ಧಿಯ ಜತೆಗೆ ಮೂಲ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ’ ಎಂಬ ಭರವಸೆಯನ್ನೂ ನೀಡುತ್ತಿದ್ದಾರೆ.</p>.<p>31 ವಾರ್ಡ್ ವ್ಯಾಪ್ತಿಯಲ್ಲಿ 55 ಮತಗಟ್ಟೆಗಳನ್ನು ಸ್ಥಾಪಿಸಲು ತೀರ್ಮಾನಿಸಲಾಗಿದೆ. ಇಲ್ಲಿ 21,964 ಪುರುಷ ಹಾಗೂ 23,013 ಸಾವಿರ ಮಹಿಳಾ ಮತದಾರರು ಇದ್ದಾರೆ. ಮಹಿಳೆಯರ ಸಂಖ್ಯೆಯೇ ಹೆಚ್ಚಿದೆ.</p>.<p>‘ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾದಂತೆಲ್ಲ ಟಿಕೆಟ್ ಪಡೆಯಲು ಪೈಪೋಟಿ ಹೆಚ್ಚಾಗಲಿದೆ. ಹಾಲಿ ಸದಸ್ಯರಿಗೆ ಇಲ್ಲವೇ ಅವರ ಕುಟುಂಬದವರಿಗೆ ಪಕ್ಷಗಳು ಟಿಕೆಟ್ ನೀಡುವ ವಿಶ್ವಾಸವೂ ಇದೆ. ಈ ಬಾರಿ ಹಿರಿಯೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಶಾಸಕರೇ ಇರುವುದರಿಂದ ಆ ಪಕ್ಷದಲ್ಲಿ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಅಧಿಕವಾಗುವ ಸಾಧ್ಯತೆ ತಳ್ಳಿಹಾಕುವಂತಿಲ್ಲ’ ಎಂದು ಹೆಸರು ಹೇಳಲು ಇಚ್ಛಿಸದ ಸದಸ್ಯರೊಬ್ಬರು <span class="quote">‘ಪ್ರಜಾವಾಣಿ’</span>ಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>