ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈದುಂಬಿ ಹರಿಯುತ್ತಿರುವ ವೇದಾವತಿ: ಹಿರಿಯೂರಿನ ನದಿ ತೀರದ ಬಡಾವಣೆಗೆ ನುಗ್ಗಿದ ನೀರು

Last Updated 6 ಸೆಪ್ಟೆಂಬರ್ 2022, 5:03 IST
ಅಕ್ಷರ ಗಾತ್ರ

ಹಿರಿಯೂರು (ಚಿತ್ರದುರ್ಗ): ತಾಲ್ಲೂಕಿನ ವಾಣಿವಿಲಾಸ ಜಲಾಶಯದ ಹೊರಹರಿವು ಹೆಚ್ಚಿರುವುದರಿಂದ ವೇದಾವತಿ ಮೈದುಂಬಿ ಹರಿಯುತ್ತಿದ್ದು, ನದಿ ತೀರದ ಬಡಾವಣೆಗಳಿಗೆ ನೀರು ನುಗ್ಗಿದೆ.

ಸೋಮವಾರ ರಾತ್ರಿ ಭಾರಿ ಮಳೆಯಾಗಿದ್ದು, ಇತರ ಬಡಾವಣೆಗಳಿಗೂ ತೊಂದರೆ ಆಗಿದೆ. ವಾಣಿವಿಲಾಸ ಜಲಾಶಯದ ಎರಡು ನಾಲೆಗಳು ತುಂಬಿ ಹರಿಯುತ್ತಿವೆ.

ನದಿ ತೀರದಲ್ಲಿದ್ದ ಸುಮಾರು 32 ಮನೆಗಳ ನಿವಾಸಿಗಳನ್ನು ತೆರವುಗೊಳಿಸಿ ಬನಶಂಕರಿ ದೇವಸ್ಥಾನ, ದರ್ಗಾದಲ್ಲಿ ಆಶ್ರಯ ಕಲ್ಪಿಸಲಾಗಿದೆ. ಸಂತ್ರಸ್ತರಿಗೆ ಪುನರ್ವಸತಿ ಕೇಂದ್ರ ತೆರೆಯಲಾಗಿದೆ. ಸಂಜೆ ವೇಳೆಗೆ ವೇದಾವತಿ ನದಿ ನೀರಿನ ಪ್ರಮಾಣ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದ್ದು, ಮುನ್ನೆಚ್ಚರಿಕೆ ಕ್ರಮವಾಗಿ ನದಿ ತೀರದ ನಿವಾಸಿಗಳನ್ನು ತೆರವುಗೊಳಿಸುವ ಪ್ರಕ್ರಿಯೆ ಮುಂದುವರೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT