<p>ಪ್ರಜಾವಾಣಿ ವಾರ್ತೆ</p>.<p>ಹೊಳಲ್ಕೆರೆ: ಗೊಲ್ಲರಹಟ್ಟಿಗಳಲ್ಲಿ ಈಗಲೂ ಮೂಢನಂಬಿಕೆಗಳು ಪಾಲನೆಯಾಗುತ್ತಿದ್ದು, ಕೆಟ್ಟ ಆಚರಣೆಗಳಿಂದ ಜನರು ಹೊರಗೆ ಬರಬೇಕು ಎಂದು ////ಜೆಂಡರ್ ಸ್ಪಷಲಿಸ್ಟ್ ಡಿ.ಗೀತಾ ಸಲಹೆ ನೀಡಿದರು.</p>.<p>ತಾಲ್ಲೂಕಿನ ತೇಕಲವಟ್ಟಿ ಗೊಲ್ಲರ ಹಟ್ಟಿಯಲ್ಲಿ ಶಿಶು ಅಭಿವೃದ್ಧಿ ಯೋಜನೆ ಇಲಾಖೆ ಆಯೋಜಿಸಿದ್ದ ಮೌಢ್ಯ ಪದ್ಧತಿ ಆಚರಣೆ ವಿರುದ್ಧದ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಋತುಮತಿಯರು ಮತ್ತು ಹೆರಿಗೆಯಾದವರನ್ನು ಮನೆಯನ್ನು ಬಿಡಿಸಿ, ಊರಿನ ಹೊರಗೆ ಗುಡಿಸಲಿನಲ್ಲಿ ವಾಸ್ತವ್ಯ ಹೂಡುವ ಅನಿಷ್ಠ ಪದ್ಧತಿ ಇನ್ನೂ ಕೆಲವು ಕಡೆ ಇದೆ. ಇಂತಹ ಕೆಟ್ಟ ಆಚರಣೆಗಳಿಂದ ಹೆಣ್ಣು ಮಕ್ಕಳು ಮಾನಸಿಕವಾಗಿ ಮತ್ತು ದೈಹಿಕವಾಗಿ ಕುಗ್ಗಿ ಹೋಗುತ್ತಾರೆ. ಋತುಮತಿಯಾದ ಸಂದರ್ಭದಲ್ಲಿ ಮತ್ತು ಹೆರಿಗೆಯಾದಾಗ ವೈಯಕ್ತಿಕ ಸ್ವಚ್ಛತೆ ಮತ್ತು ಬೆಚ್ಚನೆಯ ವಾತಾವರಣ ತುಂಬಾ ಮುಖ್ಯವಾಗಿರುತ್ತದೆ. ಪುಟ್ಟ ಮಗುವಿಗೂ ಭದ್ರತೆ, ಆರೋಗ್ಯ ಮುಖ್ಯವಾಗುತ್ತದೆ. ಆದ್ದರಿಂದ ಇಂತಹ ಕೆಟ್ಟ ಆಚರಣೆಗಳನ್ನು ಮಾಡಬಾರದು ಎಂದು ಸಲಹೆ ನೀಡಿದರು.</p>.<p>ಕೆಟ್ಟ ಆಚರಣೆಗಳನ್ನು ನಿಷೇಧಿಸಲಾಗಿದ್ದು, ಯಾವುದೇ ಭಾಗದಲ್ಲಿ ಇಂತಹ ಕೃತ್ಯಗಳು ನಡೆದರೆ ಮೇಲಧಿಕಾರಿಗಳಿಗೆ ಅಥವಾ ಪೊಲೀಸರಿಗೆ ಮಾಹಿತಿ ನೀಡಬೇಕು. ಮಹಿಳಾ ಸಹಾಯವಾಣಿ ಸಂಖ್ಯೆ 181 ಮತ್ತು ಪೊಲೀಸ್ ಸಹಾಯವಾಣಿ 112 ಸಂಖ್ಯೆಗೆ ಕರೆ ಮಾಡಿ ದೂರು ಸಲ್ಲಿಸಬಹುದು. ಮಕ್ಕಳ ಮೇಲೆ ಯಾವುದೇ ರೀತಿಯ ದೌರ್ಜನ್ಯಗಳು ನಡೆದಾಗ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಸಂಖ್ಯೆಗೆ ಕರೆ ಮಾಡುವಂತೆ ತಿಳಿಸಿದರು.</p>.<p>ಗ್ರಾಮ ಪಂಚಾಯಿತಿ ಸದಸ್ಯೆ ಹೇಮಲತಾ, ದೇವರಾಜ್, ಎಸ್ಡಿಎಂಸಿ ಅಧ್ಯಕ್ಷ ಯೋಗೇಶ್ವರ್, ಅಂಗನವಾಡಿ ಮೇಲ್ವಿಚಾರಕಿ ಯಶೋಧಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p>ಹೊಳಲ್ಕೆರೆ: ಗೊಲ್ಲರಹಟ್ಟಿಗಳಲ್ಲಿ ಈಗಲೂ ಮೂಢನಂಬಿಕೆಗಳು ಪಾಲನೆಯಾಗುತ್ತಿದ್ದು, ಕೆಟ್ಟ ಆಚರಣೆಗಳಿಂದ ಜನರು ಹೊರಗೆ ಬರಬೇಕು ಎಂದು ////ಜೆಂಡರ್ ಸ್ಪಷಲಿಸ್ಟ್ ಡಿ.ಗೀತಾ ಸಲಹೆ ನೀಡಿದರು.</p>.<p>ತಾಲ್ಲೂಕಿನ ತೇಕಲವಟ್ಟಿ ಗೊಲ್ಲರ ಹಟ್ಟಿಯಲ್ಲಿ ಶಿಶು ಅಭಿವೃದ್ಧಿ ಯೋಜನೆ ಇಲಾಖೆ ಆಯೋಜಿಸಿದ್ದ ಮೌಢ್ಯ ಪದ್ಧತಿ ಆಚರಣೆ ವಿರುದ್ಧದ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಋತುಮತಿಯರು ಮತ್ತು ಹೆರಿಗೆಯಾದವರನ್ನು ಮನೆಯನ್ನು ಬಿಡಿಸಿ, ಊರಿನ ಹೊರಗೆ ಗುಡಿಸಲಿನಲ್ಲಿ ವಾಸ್ತವ್ಯ ಹೂಡುವ ಅನಿಷ್ಠ ಪದ್ಧತಿ ಇನ್ನೂ ಕೆಲವು ಕಡೆ ಇದೆ. ಇಂತಹ ಕೆಟ್ಟ ಆಚರಣೆಗಳಿಂದ ಹೆಣ್ಣು ಮಕ್ಕಳು ಮಾನಸಿಕವಾಗಿ ಮತ್ತು ದೈಹಿಕವಾಗಿ ಕುಗ್ಗಿ ಹೋಗುತ್ತಾರೆ. ಋತುಮತಿಯಾದ ಸಂದರ್ಭದಲ್ಲಿ ಮತ್ತು ಹೆರಿಗೆಯಾದಾಗ ವೈಯಕ್ತಿಕ ಸ್ವಚ್ಛತೆ ಮತ್ತು ಬೆಚ್ಚನೆಯ ವಾತಾವರಣ ತುಂಬಾ ಮುಖ್ಯವಾಗಿರುತ್ತದೆ. ಪುಟ್ಟ ಮಗುವಿಗೂ ಭದ್ರತೆ, ಆರೋಗ್ಯ ಮುಖ್ಯವಾಗುತ್ತದೆ. ಆದ್ದರಿಂದ ಇಂತಹ ಕೆಟ್ಟ ಆಚರಣೆಗಳನ್ನು ಮಾಡಬಾರದು ಎಂದು ಸಲಹೆ ನೀಡಿದರು.</p>.<p>ಕೆಟ್ಟ ಆಚರಣೆಗಳನ್ನು ನಿಷೇಧಿಸಲಾಗಿದ್ದು, ಯಾವುದೇ ಭಾಗದಲ್ಲಿ ಇಂತಹ ಕೃತ್ಯಗಳು ನಡೆದರೆ ಮೇಲಧಿಕಾರಿಗಳಿಗೆ ಅಥವಾ ಪೊಲೀಸರಿಗೆ ಮಾಹಿತಿ ನೀಡಬೇಕು. ಮಹಿಳಾ ಸಹಾಯವಾಣಿ ಸಂಖ್ಯೆ 181 ಮತ್ತು ಪೊಲೀಸ್ ಸಹಾಯವಾಣಿ 112 ಸಂಖ್ಯೆಗೆ ಕರೆ ಮಾಡಿ ದೂರು ಸಲ್ಲಿಸಬಹುದು. ಮಕ್ಕಳ ಮೇಲೆ ಯಾವುದೇ ರೀತಿಯ ದೌರ್ಜನ್ಯಗಳು ನಡೆದಾಗ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಸಂಖ್ಯೆಗೆ ಕರೆ ಮಾಡುವಂತೆ ತಿಳಿಸಿದರು.</p>.<p>ಗ್ರಾಮ ಪಂಚಾಯಿತಿ ಸದಸ್ಯೆ ಹೇಮಲತಾ, ದೇವರಾಜ್, ಎಸ್ಡಿಎಂಸಿ ಅಧ್ಯಕ್ಷ ಯೋಗೇಶ್ವರ್, ಅಂಗನವಾಡಿ ಮೇಲ್ವಿಚಾರಕಿ ಯಶೋಧಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>