<p><strong>ಹೊಳಲ್ಕೆರೆ</strong>: 'ಮಕ್ಕಳಲ್ಲಿನ ರಕ್ತಹೀನತೆ ಗುರುತಿಸಿ ಪೌಷ್ಠಿಕಾಂಶ ಒದಗಿಸಲು ಸರ್ಕಾರ ಅನೀಮಿಯ ಮುಕ್ತ ಪೌಷ್ಠಿಕ ಕರ್ನಾಟಕ (ಎಎಂಪಿಕೆ) ಯೋಜನೆ ಜಾರಿಗೊಳಿಸಿದೆ’ ಎಂದು ಡಾ.ಮುಕ್ತಾ ತಿಳಿಸಿದರು.</p>.<p>ಪಟ್ಟಣದ ಎನ್ಇಎಸ್ ಸರ್ಕಾರಿ ಶಾಲೆಯಲ್ಲಿ ಗುರುವಾರ ಆರ್ಬಿಎಸ್ಕೆ ಯೋಜನೆಯಡಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಸಿ ಅವರು ಮಾತನಾಡಿದರು.</p>.<p>‘ನವಜಾತ ಶಿಶುವಿನಿಂದ 18 ವರ್ಷದ ಎಲ್ಲರಿಗೂ ರಕ್ತಪರೀಕ್ಷೆ ನಡೆಸಲಾಗುವುದು. ಹಿಮೋಗ್ಲೋಬಿನ್ ಪರೀಕ್ಷೆಸಿ ರಕ್ತಹೀನತೆ ಇರುವ ಮಕ್ಕಳನ್ನು ಗುರುತಿಸಲಾಗುವುದು. ಅನೀಮಿಯಾದಿಂದ ಬಳಲುವ ಮಕ್ಕಳನ್ನು ಸರ್ಕಾರಿ ಆಸ್ಪತ್ರೆಯಲ್ಲಿರುವ ಎನ್ಆರ್ಸಿ ಕೇಂದ್ರಕ್ಕೆ ದಾಖಲಿಸಲಾಗುವುದು. ಈ ಮೂಲಕ ಅನೀಮಿಯ ಮುಕ್ತ ಕರ್ನಾಟಕ ಮಾಡುವುದು ಸರ್ಕಾರದ ಉದ್ದೇಶ’ ಎಂದರು.</p>.<p>‘ವರ್ಷಕ್ಕೆ 2 ಬಾರಿ ಅಂಗನವಾಡಿ ಕೇಂದ್ರಗಳಲ್ಲಿ ಹಾಗೂ ಒಂದು ಬಾರಿ ಶಾಲಾ– ಕಾಲೇಜುಗಳಲ್ಲಿ ವೈದ್ಯಕೀಯ ತಪಾಸಣೆ ನಡೆಸಲಾಗುವುದು. ಹುಟ್ಟು ನ್ಯೂನ್ಯತೆ ಹಾಗೂ ಗಂಭೀರ ಕಾಯಿಲೆ ಪ್ರಕರಣಗಳು ಕಂಡುಬಂದರೆ ಉಚಿತ ವೈದ್ಯಕೀಯ ಚಿಕಿತ್ಸೆ ಕೊಡಿಸಲಾಗುವುದು’ ಎಂದು ಡಾ.ಕೆ.ಪಿ. ಆನಂದ್ ಮಾಹಿತಿ ನೀಡಿದರು.</p>.<p>ಶುಶ್ರೂಶಕಿ ಜಯಮ್ಮ, ನೇತ್ರ ಸಹಾಯಕಿ ರೆಹಮತ್ ಉನ್ನೀಸಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಳಲ್ಕೆರೆ</strong>: 'ಮಕ್ಕಳಲ್ಲಿನ ರಕ್ತಹೀನತೆ ಗುರುತಿಸಿ ಪೌಷ್ಠಿಕಾಂಶ ಒದಗಿಸಲು ಸರ್ಕಾರ ಅನೀಮಿಯ ಮುಕ್ತ ಪೌಷ್ಠಿಕ ಕರ್ನಾಟಕ (ಎಎಂಪಿಕೆ) ಯೋಜನೆ ಜಾರಿಗೊಳಿಸಿದೆ’ ಎಂದು ಡಾ.ಮುಕ್ತಾ ತಿಳಿಸಿದರು.</p>.<p>ಪಟ್ಟಣದ ಎನ್ಇಎಸ್ ಸರ್ಕಾರಿ ಶಾಲೆಯಲ್ಲಿ ಗುರುವಾರ ಆರ್ಬಿಎಸ್ಕೆ ಯೋಜನೆಯಡಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಸಿ ಅವರು ಮಾತನಾಡಿದರು.</p>.<p>‘ನವಜಾತ ಶಿಶುವಿನಿಂದ 18 ವರ್ಷದ ಎಲ್ಲರಿಗೂ ರಕ್ತಪರೀಕ್ಷೆ ನಡೆಸಲಾಗುವುದು. ಹಿಮೋಗ್ಲೋಬಿನ್ ಪರೀಕ್ಷೆಸಿ ರಕ್ತಹೀನತೆ ಇರುವ ಮಕ್ಕಳನ್ನು ಗುರುತಿಸಲಾಗುವುದು. ಅನೀಮಿಯಾದಿಂದ ಬಳಲುವ ಮಕ್ಕಳನ್ನು ಸರ್ಕಾರಿ ಆಸ್ಪತ್ರೆಯಲ್ಲಿರುವ ಎನ್ಆರ್ಸಿ ಕೇಂದ್ರಕ್ಕೆ ದಾಖಲಿಸಲಾಗುವುದು. ಈ ಮೂಲಕ ಅನೀಮಿಯ ಮುಕ್ತ ಕರ್ನಾಟಕ ಮಾಡುವುದು ಸರ್ಕಾರದ ಉದ್ದೇಶ’ ಎಂದರು.</p>.<p>‘ವರ್ಷಕ್ಕೆ 2 ಬಾರಿ ಅಂಗನವಾಡಿ ಕೇಂದ್ರಗಳಲ್ಲಿ ಹಾಗೂ ಒಂದು ಬಾರಿ ಶಾಲಾ– ಕಾಲೇಜುಗಳಲ್ಲಿ ವೈದ್ಯಕೀಯ ತಪಾಸಣೆ ನಡೆಸಲಾಗುವುದು. ಹುಟ್ಟು ನ್ಯೂನ್ಯತೆ ಹಾಗೂ ಗಂಭೀರ ಕಾಯಿಲೆ ಪ್ರಕರಣಗಳು ಕಂಡುಬಂದರೆ ಉಚಿತ ವೈದ್ಯಕೀಯ ಚಿಕಿತ್ಸೆ ಕೊಡಿಸಲಾಗುವುದು’ ಎಂದು ಡಾ.ಕೆ.ಪಿ. ಆನಂದ್ ಮಾಹಿತಿ ನೀಡಿದರು.</p>.<p>ಶುಶ್ರೂಶಕಿ ಜಯಮ್ಮ, ನೇತ್ರ ಸಹಾಯಕಿ ರೆಹಮತ್ ಉನ್ನೀಸಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>