<p>ಹೊಳಲ್ಕೆರೆ: ತಾಲ್ಲೂಕಿನ ಮದ್ದೇರು ಗ್ರಾಮದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ 135ನೇ ಜಯಂತಿ ಅಂಗವಾಗಿ ಜೈ ಭೀಮ್ ಸರ್ಕಲ್ ಉದ್ಘಾಟಿಸಲಾಯಿತು.</p>.<p>‘ಗ್ರಾಮದಲ್ಲಿ ಪ್ರತಿವರ್ಷ ಅಂಬೇಡ್ಕರ್ ಜಯಂತಿಯಂದು ಒಂದಲ್ಲ ಒಂದು ವಿಶೇಷ ಕಾರ್ಯಕ್ರಮ ಆಯೋಜಿಸಲಾಗುತ್ತದೆ. ಗ್ರಾಮದ ಯುವಕರು ಉತ್ಸಾಹಿಗಳಾಗಿದ್ದು, ಮಾದರಿ ಗ್ರಾಮವನ್ನಾಗಿ ಮಾಡಲು ಮುಂದಾಗಬೇಕು’ ಎಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕದ ಸಂಚಾಲಕ ಕೆಂಗುಂಟೆ ಜಯಣ್ಣ ಸಲಹೆ ನೀಡಿದರು.</p>.<p>ಮಹಿಳೆಯರಿಗೆ ರಂಗೋಲಿ ಸ್ಪರ್ಧೆ ಆಯೋಜಿಸಲಾಗಿತ್ತು. 1 ರಿಂದ 7ನೇ ತರಗತಿಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.</p>.<p>ದಸಂಸ ತಾಲ್ಲೂಕು ಘಟಕದ ಸಂಚಾಲಕ ಸುಂದರಮೂರ್ತಿ, ಪ್ರಭಾಕರ್, ನವೀನ್ ಮದ್ದೇರು, ಮಂಜುನಾಥ್, ಅಶೋಕ್, ಸ್ವಾಮಿ, ಮಧು, ತಿಪ್ಪೇಸ್ವಾಮಿ, ಶೇಖರಪ್ಪ, ನಾಗರಾಜ್, ಹೇಮಂತ್, ಕಲ್ಲೇಶ್, ರಘು, ಮನು, ಶಿವು, ಕರಿಬಸಪ್ಪ, ಜಯಪ್ಪ, ರಂಗಪ್ಪ, ಕಲ್ಲಪ್ಪ, ಹನುಮಂತಪ್ಪ, ರುದ್ರಪ್ಪ, ಮಂಜು, ಪ್ರದೀಪ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260502-44-1973628448</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಳಲ್ಕೆರೆ: ತಾಲ್ಲೂಕಿನ ಮದ್ದೇರು ಗ್ರಾಮದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ 135ನೇ ಜಯಂತಿ ಅಂಗವಾಗಿ ಜೈ ಭೀಮ್ ಸರ್ಕಲ್ ಉದ್ಘಾಟಿಸಲಾಯಿತು.</p>.<p>‘ಗ್ರಾಮದಲ್ಲಿ ಪ್ರತಿವರ್ಷ ಅಂಬೇಡ್ಕರ್ ಜಯಂತಿಯಂದು ಒಂದಲ್ಲ ಒಂದು ವಿಶೇಷ ಕಾರ್ಯಕ್ರಮ ಆಯೋಜಿಸಲಾಗುತ್ತದೆ. ಗ್ರಾಮದ ಯುವಕರು ಉತ್ಸಾಹಿಗಳಾಗಿದ್ದು, ಮಾದರಿ ಗ್ರಾಮವನ್ನಾಗಿ ಮಾಡಲು ಮುಂದಾಗಬೇಕು’ ಎಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕದ ಸಂಚಾಲಕ ಕೆಂಗುಂಟೆ ಜಯಣ್ಣ ಸಲಹೆ ನೀಡಿದರು.</p>.<p>ಮಹಿಳೆಯರಿಗೆ ರಂಗೋಲಿ ಸ್ಪರ್ಧೆ ಆಯೋಜಿಸಲಾಗಿತ್ತು. 1 ರಿಂದ 7ನೇ ತರಗತಿಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.</p>.<p>ದಸಂಸ ತಾಲ್ಲೂಕು ಘಟಕದ ಸಂಚಾಲಕ ಸುಂದರಮೂರ್ತಿ, ಪ್ರಭಾಕರ್, ನವೀನ್ ಮದ್ದೇರು, ಮಂಜುನಾಥ್, ಅಶೋಕ್, ಸ್ವಾಮಿ, ಮಧು, ತಿಪ್ಪೇಸ್ವಾಮಿ, ಶೇಖರಪ್ಪ, ನಾಗರಾಜ್, ಹೇಮಂತ್, ಕಲ್ಲೇಶ್, ರಘು, ಮನು, ಶಿವು, ಕರಿಬಸಪ್ಪ, ಜಯಪ್ಪ, ರಂಗಪ್ಪ, ಕಲ್ಲಪ್ಪ, ಹನುಮಂತಪ್ಪ, ರುದ್ರಪ್ಪ, ಮಂಜು, ಪ್ರದೀಪ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260502-44-1973628448</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>