<p><strong>ಹೊಳಲ್ಕೆರೆ:</strong> ಇನ್ನು ಮುಂದೆ ಪುರಸಭೆಯಿಂದಲೇ ಪ್ರತೀ ಮನೆಗಳಿಗೆ ಶುದ್ಧ ಕುಡಿಯುವ ನೀರು ಪೂರೈಸಲಾಗುವುದು ಎಂದು ಶಾಸಕ ಎಂ.ಚಂದ್ರಪ್ಪ ಹೇಳಿದರು.</p>.<p>ಪಟ್ಟಣ ಹಾಗೂ ಸಮೀಪದ ಚೀರನಹಳ್ಳಿಯಲ್ಲಿ ₹30 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಶುದ್ದ ಕುಡಿಯುವ ನೀರಿನ ಘಟಕ ಹಾಗೂ ₹40 ಲಕ್ಷ ವೆಚ್ಚದಲ್ಲಿ ಖರೀದಿಸಿರುವ ಶುದ್ಧ ಕುಡಿಯುವ ನೀರು ವಿತರಿಸುವ ಎರಡು ಟ್ಯಾಂಕರ್ ವಾಹನಗಳಿಗೆ ಬುಧವಾರ ಚಾಲನೆ ನೀಡಿ ಮಾತನಾಡಿದರು. </p>.<p>ಜನರು ನೀರಿಗಾಗಿ ಓಡಾಡುವುದನ್ನು ತಪ್ಪಿಸಲು ಈ ಕ್ರಮ ತೆಗೆದುಕೊಳ್ಳಲಾಗಿದೆ. ತಲಾ 6,000 ಲೀಟರ್ ಸಾಮರ್ಥ್ಯದ ಎರಡು ಟ್ಯಾಂಕರ್ ವಾಹನ ಖರೀದಿಸಿದ್ದು, ಪ್ರತೀ ಬಡಾವಣೆಗೆ ವಿತರಿಸಲಾಗುವುದು. ವಾಹನ ನಿರ್ವಹಣೆ ಉದ್ದೇಶದಿಂದ 20 ಲೀಟರ್ ನೀರಿಗೆ ₹5 ನಿಗದಿ ಮಾಡಿದ್ದು, ನಾಣ್ಯ ಹಾಕಿ ನೀರು ಪಡೆಯಬಹುದು. ಪಟ್ಟಣ ಸೇರಿದಂತೆ ಪುರಸಭೆ ವ್ಯಾಪ್ತಿಯ ಹಳ್ಳಿಗಳಿಗೂ ವಾಹನ ಬರಲಿದೆ ಎಂದರು.</p>.<p>ಪುರಸಭೆ ಮುಖ್ಯಾಧಿಕಾರಿ ಉಮೇಶ್, ಪುರಸಭೆ ಮಾಜಿ ಅಧ್ಯಕ್ಷ ಆರ್.ಎ.ಅಶೋಕ್, ಮಾಜಿ ಸದಸ್ಯರಾದ ಪಿ.ಎಚ್.ಮುರುಗೇಶ್, ಮಲ್ಲಿಕಾರ್ಜುನ ಸ್ವಾಮಿ, ಗೀತಾ ಕೃಷ್ಣಮೂರ್ತಿ, ಬಸವರಾಜ ಯಾದವ್, ರಾಜಣ್ಣ, ಡಿ.ಸಿ.ಮೋಹನ್, ಮರುಳಸಿದ್ದಪ್ಪ ಹಾಗೂ ಗ್ರಾಮಸ್ಥರು ಈ ಸಂದರ್ಭದಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಳಲ್ಕೆರೆ:</strong> ಇನ್ನು ಮುಂದೆ ಪುರಸಭೆಯಿಂದಲೇ ಪ್ರತೀ ಮನೆಗಳಿಗೆ ಶುದ್ಧ ಕುಡಿಯುವ ನೀರು ಪೂರೈಸಲಾಗುವುದು ಎಂದು ಶಾಸಕ ಎಂ.ಚಂದ್ರಪ್ಪ ಹೇಳಿದರು.</p>.<p>ಪಟ್ಟಣ ಹಾಗೂ ಸಮೀಪದ ಚೀರನಹಳ್ಳಿಯಲ್ಲಿ ₹30 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಶುದ್ದ ಕುಡಿಯುವ ನೀರಿನ ಘಟಕ ಹಾಗೂ ₹40 ಲಕ್ಷ ವೆಚ್ಚದಲ್ಲಿ ಖರೀದಿಸಿರುವ ಶುದ್ಧ ಕುಡಿಯುವ ನೀರು ವಿತರಿಸುವ ಎರಡು ಟ್ಯಾಂಕರ್ ವಾಹನಗಳಿಗೆ ಬುಧವಾರ ಚಾಲನೆ ನೀಡಿ ಮಾತನಾಡಿದರು. </p>.<p>ಜನರು ನೀರಿಗಾಗಿ ಓಡಾಡುವುದನ್ನು ತಪ್ಪಿಸಲು ಈ ಕ್ರಮ ತೆಗೆದುಕೊಳ್ಳಲಾಗಿದೆ. ತಲಾ 6,000 ಲೀಟರ್ ಸಾಮರ್ಥ್ಯದ ಎರಡು ಟ್ಯಾಂಕರ್ ವಾಹನ ಖರೀದಿಸಿದ್ದು, ಪ್ರತೀ ಬಡಾವಣೆಗೆ ವಿತರಿಸಲಾಗುವುದು. ವಾಹನ ನಿರ್ವಹಣೆ ಉದ್ದೇಶದಿಂದ 20 ಲೀಟರ್ ನೀರಿಗೆ ₹5 ನಿಗದಿ ಮಾಡಿದ್ದು, ನಾಣ್ಯ ಹಾಕಿ ನೀರು ಪಡೆಯಬಹುದು. ಪಟ್ಟಣ ಸೇರಿದಂತೆ ಪುರಸಭೆ ವ್ಯಾಪ್ತಿಯ ಹಳ್ಳಿಗಳಿಗೂ ವಾಹನ ಬರಲಿದೆ ಎಂದರು.</p>.<p>ಪುರಸಭೆ ಮುಖ್ಯಾಧಿಕಾರಿ ಉಮೇಶ್, ಪುರಸಭೆ ಮಾಜಿ ಅಧ್ಯಕ್ಷ ಆರ್.ಎ.ಅಶೋಕ್, ಮಾಜಿ ಸದಸ್ಯರಾದ ಪಿ.ಎಚ್.ಮುರುಗೇಶ್, ಮಲ್ಲಿಕಾರ್ಜುನ ಸ್ವಾಮಿ, ಗೀತಾ ಕೃಷ್ಣಮೂರ್ತಿ, ಬಸವರಾಜ ಯಾದವ್, ರಾಜಣ್ಣ, ಡಿ.ಸಿ.ಮೋಹನ್, ಮರುಳಸಿದ್ದಪ್ಪ ಹಾಗೂ ಗ್ರಾಮಸ್ಥರು ಈ ಸಂದರ್ಭದಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>