ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಳಲ್ಕೆರೆ: ಸ್ಮಶಾನದ ಜಾಗ ತೆರವಿಗೆ ಆಗ್ರಹಿಸಿ ಪ್ರತಿಭಟನೆ

Published 27 ಜೂನ್ 2023, 12:28 IST
Last Updated 27 ಜೂನ್ 2023, 12:28 IST
ಅಕ್ಷರ ಗಾತ್ರ

ಹೊಳಲ್ಕೆರೆ: ತಾಲ್ಲೂಕಿನ ಕೊಂಡಾಪುರದಲ್ಲಿ ಒತ್ತುವರಿ ಮಾಡಲಾಗಿರುವ ಪರಿಶಿಷ್ಟ ಜಾತಿಯವರ ಸ್ಮಶಾನದ ಜಾಗವನ್ನು ತಕ್ಷಣವೇ ತೆರವು ಮಾಡಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯ ಸದಸ್ಯರು ಮಂಗಳವಾರ ಪ್ರತಿಭಟನೆ ನಡೆಸಿದರು.

ಕೊಂಡಾಪುರದ ಗ್ರಾಮದ ಸರ್ವೆ ನಂಬರ್ 22ರಲ್ಲಿರುವ 2.34 ಎಕರೆ ವ್ಯಾಪ್ತಿಯ ಸ್ಮಶಾನದಲ್ಲಿ ದಲಿತರು ಎರಡು ಮೂರು ತಲೆಮಾರುಗಳಿಂದ ಶವಸಂಸ್ಕಾರ ಮಾಡುತ್ತ ಬಂದಿದ್ದಾರೆ. ಆದರೆ ಈಚೆಗೆ ಗ್ರಾಮದ ಶೇಖರಪ್ಪ ಹಾಗೂ ರಾಮಪ್ಪ ಎಂಬವರು ಸ್ಮಶಾನದ ಜಾಗವನ್ನು ಒತ್ತುವರಿ ಮಾಡಿದ್ದಾರೆ. ಇದರಿಂದ ಸಮುದಾಯದ ಜನರಿಗೆ ಶವಸಂಸ್ಕಾರ ಮಾಡಲು ಜಾಗವಿಲ್ಲದಂತಾಗಿದೆ. ತಾಲ್ಲೂಕು ಆಡಳಿತ ತಕ್ಷಣವೇ ಕ್ರಮ ಕೈಗೊಂಡು ಒತ್ತುವರಿ ತೆರವು ಮಾಡಬೇಕು. ಈ ಜಾಗವನ್ನು ಸ್ಮಶಾನಕ್ಕೆ ಮೀಸಲಿಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಕೆಂಗುಂಟೆ ಜಯಣ್ಣ, ತಾಲ್ಲೂಕು ಸಂಚಾಲಕ ಸುಂದರ ಮೂರ್ತಿ, ನವೀನ್ ಮದ್ದೇರು, ಎನ್.ಪ್ರಭಾಕರ, ಎಚ್.ವಿಜಯ್, ಎಚ್.ವಿಜಯ ಕುಮಾರ್, ಮೂರ್ತಪ್ಪ, ದೇವರಾಜ್, ಎಚ್.ಶಿವಮೂರ್ತಿ, ಕರಿಯಣ್ಣ, ರಂಗಪ್ಪ, ಮಂಜುನಾಥ, ನಿಂಗಪ್ಪ, ತಿಪ್ಪೇಸ್ವಾಮಿ, ಹನುಮಂತಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT