<p>ಚಿತ್ರದುರ್ಗ: ಕೂಲಿ ಕಾರ್ಮಿಕರಾಗಿ ದುಡಿಯುತ್ತಿರುವ ಭೋವಿ ಸಮುದಾಯದ ಅನೇಕರು ನೆಲೆ ಹಾಗೂ ಶಿಕ್ಷಣದ ಕೊರತೆಯ ಕಾರಣಕ್ಕೆ ಅತಂತ್ರ ಸ್ಥಿತಿಯಲ್ಲಿದ್ದಾರೆ ಎಂದು ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಬೇಸರ<br />ವ್ಯಕ್ತಪಡಿಸಿದರು.</p>.<p>ಇಲ್ಲಿನ ಹೊರವಲಯದ ಭೋವಿ ಗುರುಪೀಠದಲ್ಲಿ ಕೋಲಾರ ಮತ್ತು ಚಿತ್ರದುರ್ಗ ಸರ್ಕಾರಿ ನೌಕರರ ಸಂಘ ಏರ್ಪಡಿಸಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಶಿಲಾಯುಗದ ಕಾಲದಿಂದ ಈವರೆಗೆ ಭೋವಿ ಸಮುದಾಯ ಅಸ್ಮಿತೆ ಉಳಿಸಿಕೊಂಡು ಬಂದಿದೆ. ಕೃಷಿ, ಕಟ್ಟಡ ನಿರ್ಮಾಣ ಹಾಗೂ ಗಣಿಯಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ಉದ್ಯೋಗದ ಕಾರಣಕ್ಕೆ ಅಲೆಮಾರಿ ಸ್ವಭಾವ ಹೊಂದಿದ್ದಾರೆ. ಅಲೆದಾಟದ ಪರಿಣಾಮವಾಗಿ ಸಮುದಾಯ ನೆಲೆ ಕಂಡುಕೊಳ್ಳಲು ಕಷ್ಟಪಡುತ್ತಿದೆ’ ಎಂದು ಹೇಳಿದರು.</p>.<p>‘ರಾಜರ ಆಡಳಿತದ ಕಾಲದಲ್ಲಿ ಕಲ್ಲು ಬಂಡೆಗಳ ಮೇಲೆ ಶಾಸನ ರಚಿಸಿದ್ದು ಭೋವಿ ಸಮುದಾಯ. ಮೂಢನಂಬಿಕೆ, ಕಂದಾಚಾರಗಳಿಗೆ ಕಟ್ಟುಬಿದ್ದು ಹಿಂದುಳಿದಿದೆ. ಶಿಕ್ಷಣದಿಂದ ಮಾತ್ರ ಸಮುದಾಯ ಸಂಘಟಿತವಾಗಲು ಸಾಧ್ಯವಿದೆ. ಸಮುದಾಯದ ಅಭಿವೃದ್ಧಿಗೂ ಶಿಕ್ಷಣ ನೆರವಾಗಲಿದೆ’ ಎಂದು ಅಭಿಪ್ರಾಯಪಟ್ಟರು.</p>.<p>ಉಪವಿಭಾಗಾಧಿಕಾರಿ ಚಂದ್ರಯ್ಯ, ‘ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಮಾರ್ಗದರ್ಶನದಲ್ಲಿ ಸಂಘಟನೆ ಆಗಬೇಕಿದೆ. ಸಂಘದ ಚೌಕಟ್ಟು ಮೀರದೇ ಕೆಲಸ ಮಾಡಬೇಕಿದೆ. ಉತ್ತಮ ಕೆಲಸ ಮಾಡುತ್ತ ಹೊಸ ವ್ಯಕ್ತಿತ್ವ ರೂಪಿಸಿಕೊಳ್ಳಬೇಕಿದೆ’ ಎಂದು ಸಲಹೆ ನೀಡಿದರು.</p>.<p>ಚಿತ್ರದುರ್ಗ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಚಿಕ್ಕಂದವಾಡಿ ಮಂಜುನಾಥ, ಗೌರವಾಧ್ಯಕ್ಷ ಶಿವರುದ್ರಯ್ಯ, ಕೋಲಾರ ನೌಕರರ ಸಂಘದ ಅಧ್ಯಕ್ಷ ರತ್ನಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿತ್ರದುರ್ಗ: ಕೂಲಿ ಕಾರ್ಮಿಕರಾಗಿ ದುಡಿಯುತ್ತಿರುವ ಭೋವಿ ಸಮುದಾಯದ ಅನೇಕರು ನೆಲೆ ಹಾಗೂ ಶಿಕ್ಷಣದ ಕೊರತೆಯ ಕಾರಣಕ್ಕೆ ಅತಂತ್ರ ಸ್ಥಿತಿಯಲ್ಲಿದ್ದಾರೆ ಎಂದು ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಬೇಸರ<br />ವ್ಯಕ್ತಪಡಿಸಿದರು.</p>.<p>ಇಲ್ಲಿನ ಹೊರವಲಯದ ಭೋವಿ ಗುರುಪೀಠದಲ್ಲಿ ಕೋಲಾರ ಮತ್ತು ಚಿತ್ರದುರ್ಗ ಸರ್ಕಾರಿ ನೌಕರರ ಸಂಘ ಏರ್ಪಡಿಸಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಶಿಲಾಯುಗದ ಕಾಲದಿಂದ ಈವರೆಗೆ ಭೋವಿ ಸಮುದಾಯ ಅಸ್ಮಿತೆ ಉಳಿಸಿಕೊಂಡು ಬಂದಿದೆ. ಕೃಷಿ, ಕಟ್ಟಡ ನಿರ್ಮಾಣ ಹಾಗೂ ಗಣಿಯಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ಉದ್ಯೋಗದ ಕಾರಣಕ್ಕೆ ಅಲೆಮಾರಿ ಸ್ವಭಾವ ಹೊಂದಿದ್ದಾರೆ. ಅಲೆದಾಟದ ಪರಿಣಾಮವಾಗಿ ಸಮುದಾಯ ನೆಲೆ ಕಂಡುಕೊಳ್ಳಲು ಕಷ್ಟಪಡುತ್ತಿದೆ’ ಎಂದು ಹೇಳಿದರು.</p>.<p>‘ರಾಜರ ಆಡಳಿತದ ಕಾಲದಲ್ಲಿ ಕಲ್ಲು ಬಂಡೆಗಳ ಮೇಲೆ ಶಾಸನ ರಚಿಸಿದ್ದು ಭೋವಿ ಸಮುದಾಯ. ಮೂಢನಂಬಿಕೆ, ಕಂದಾಚಾರಗಳಿಗೆ ಕಟ್ಟುಬಿದ್ದು ಹಿಂದುಳಿದಿದೆ. ಶಿಕ್ಷಣದಿಂದ ಮಾತ್ರ ಸಮುದಾಯ ಸಂಘಟಿತವಾಗಲು ಸಾಧ್ಯವಿದೆ. ಸಮುದಾಯದ ಅಭಿವೃದ್ಧಿಗೂ ಶಿಕ್ಷಣ ನೆರವಾಗಲಿದೆ’ ಎಂದು ಅಭಿಪ್ರಾಯಪಟ್ಟರು.</p>.<p>ಉಪವಿಭಾಗಾಧಿಕಾರಿ ಚಂದ್ರಯ್ಯ, ‘ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಮಾರ್ಗದರ್ಶನದಲ್ಲಿ ಸಂಘಟನೆ ಆಗಬೇಕಿದೆ. ಸಂಘದ ಚೌಕಟ್ಟು ಮೀರದೇ ಕೆಲಸ ಮಾಡಬೇಕಿದೆ. ಉತ್ತಮ ಕೆಲಸ ಮಾಡುತ್ತ ಹೊಸ ವ್ಯಕ್ತಿತ್ವ ರೂಪಿಸಿಕೊಳ್ಳಬೇಕಿದೆ’ ಎಂದು ಸಲಹೆ ನೀಡಿದರು.</p>.<p>ಚಿತ್ರದುರ್ಗ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಚಿಕ್ಕಂದವಾಡಿ ಮಂಜುನಾಥ, ಗೌರವಾಧ್ಯಕ್ಷ ಶಿವರುದ್ರಯ್ಯ, ಕೋಲಾರ ನೌಕರರ ಸಂಘದ ಅಧ್ಯಕ್ಷ ರತ್ನಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>