‘ಜಿಲ್ಲಾಧಿಕಾರಿ ಮಾರ್ಗದರ್ಶನ
ದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು, ಸಂಘ, ಸಂಸ್ಥೆಗಳ ನೆರವಿನಿಂದ ‘ಸ್ವಚ್ಛ ಶನಿವಾರ’ ಎಂಬ ವಿನೂತನ ಕಾರ್ಯಕ್ರಮ ನಡೆಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪಟ್ಟಣದ ಎಲ್ಲಾ ಬಡಾವಣೆಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಗಿತ್ತು. ಮುಖ್ಯವಾಗಿ ಪ್ಲಾಸ್ಟಿಕ್ ಬಳಸದಂತೆ ಜಾಗೃತಿ ಕಾರ್ಯಕ್ರಮ ನಡೆಸಲಾಗಿತ್ತು. ಪ್ರತಿ ಅಂಗಡಿಯ ಮುಂದೆ ‘ನಮ್ಮ ಅಂಗಡಿಯಲ್ಲಿ ಪ್ಲಾಸ್ಟಿಕ್ ಬಳಸುವುದಿಲ್ಲ’ ಎಂಬ ಫ್ಲೆಕ್ಸ್ ಹಾಕಿಸಲಾಗಿತ್ತು. ಸಾರ್ವಜನಿಕ ಶೌಚಾಲಯಗಳ ನಿರ್ವಹಣೆ, ಜಾಗೃತಿ ಕಾರ್ಯಕ್ರಮಗಳು, ಪರಿಸರ ಸಂರಕ್ಷಣೆ ಮತ್ತಿತರ ಮಾನದಂಡಗಳಿಂದ ಈ ಪ್ರಶಸ್ತಿ ನೀಡಲಾಗಿದೆ. ರಾಜ್ಯದಲ್ಲಿ ಪ್ರಶಸ್ತಿಗೆ ಆಯ್ಕೆಯಾಗಿರುವ 10 ನಗರ, ಪಟ್ಟಣಗಳಲ್ಲಿ ನಮ್ಮ ಪಟ್ಟಣ ಸೇರಿರುವುದು ಹೆಮ್ಮೆಯ ಸಂಗತಿ’ ಎಂದರು.