‘ಮಳೆ, ಬೆಳೆ ಚೆನ್ನಾಗಿ ಆಗಬೇಕೆಂದರೆ ಪ್ರತಿಯೊಬ್ಬರೂ ವರ್ಷಕ್ಕೆ ಒಂದು ಗಿಡವನ್ನಾದರೂ ನೆಟ್ಟು ಬೆಳೆಸಲು ಮುಂದಾಗಬೇಕು. ಸಾಣೇಹಳ್ಳಿಯ ಶಿವಕುಮಾರ ವನದಲ್ಲಿ ನಮ್ಮ ಸಮ್ಮುಖದಲ್ಲಿಯೇ ಕಳೆದ ನಾಲ್ಕಾರು ದಿನಗಳಿಂದ ಮಹಾಘನಿ, ಮಾವು, ತೇಗ, ನೇರಳೆ, ಹತ್ತಿ, ಪೇರಲ, ಸಂಪಿಗೆ, ಹಲಸು ವಿವಿಧ ಜಾತಿಯ 1,500 ಗಿಡಗಳನ್ನು ನಮ್ಮ ಶಾಲಾ ಮಕ್ಕಳು ಶ್ರಮದಾನದ ಮೂಲಕ ನೆಟ್ಟಿದ್ದಾರೆ. ಅಲ್ಲದೆ ಕಳೆದ ವರ್ಷ ನೆಟ್ಟಿದ್ದ ಸಾವಿರಾರು ಗಿಡ-ಮರಗಳಿಗೆ ಮಣ್ಣು, ನೀರು, ಗೊಬ್ಬರ ಮುಂತಾದ ಪೋಷಕಾಂಶಗಳನ್ನು ಒದಗಿಸಿದ್ದಾರೆ. ಈ ಎಲ್ಲ ಗಿಡಗಳು ನಳನಳಿಸುತ್ತಿದ್ದು, ನಿರೀಕ್ಷೆಗೂ ಮೀರಿದ ಬೆಳವಣಿಗೆ ಹೊಂದಿ ನೋಡುಗರ ಕಣ್ಮನ ಸೆಳೆಯುತ್ತಿವೆ’ ಎಂದರು.