<p><strong>ಹೊಸದುರ್ಗ:</strong> ‘ಬುಡಕಟ್ಟು ಜನರ ಸಮಗ್ರ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ನೀಡಬೇಕೆನ್ನುವ ಆಶಯವಿದೆ. ಹಾಗಾಗಿ ತರಬೇತುದಾರರು ಹಿಂದುಳಿದಿರುವ ಜನರನ್ನು ಗುರುತಿಸಿ, ಶಿಸ್ತುಬದ್ಧವಾಗಿ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸೋಣ’ ಎಂದು ತಹಶೀಲ್ದಾರ್ ತಿರುಪತಿ ಪಾಟೀಲ್ ಶಿಬಿರಾರ್ಥಿಗಳನ್ನು ಹುರಿದುಂಬಿಸಿದರು.</p>.<p>ತಾಲ್ಲೂಕು ಆಡಳಿತ, ತಾ.ಪಂ, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪಟ್ಟಣದ ಕ್ಷೇತ್ರ ಶಿಕ್ಷಣ ಸಂಪನ್ಮೂಲ ಅಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಈಚೆಗೆ ನಡೆದ ಆದಿ ಕರ್ಮಯೋಗಿ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.</p>.<p>ಬುಡಕಟ್ಟು ವರ್ಗಗಳನ್ನು ಸಮುದಾಯದ ಮುಖ್ಯ ವಾಹಿನಿಗೆ ತರಬೇಕು ಎನ್ನುವ ಉದ್ದೇಶದಿಂದ ಅಭಿಯಾನ ಕಾರ್ಯಗಾರ ಮಾಡಲಾಗುತ್ತಿದೆ. ಇದು ಶೈಕ್ಷಣಿಕ ಸ್ಥಿತಿಗತಿ, ಆರೋಗ್ಯ ಮತ್ತು ವಿವಿಧ ಸೌಕರ್ಯಗಳನ್ನು ಒದಗಿಸಿ ಕೊಡಬೇಕೆನ್ನುವ ವಿಶೇಷ ಕಾರ್ಯಕ್ರಮವಾಗಿದೆ ಎಂದರು.</p>.<p>ಮೂಲಸೌಕರ್ಯಗಳಿಂದ ವಂಚಿತರಾಗಿರುವ ಬುಡಕಟ್ಟು ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ಈ ತರಬೇತಿ ಪೂರಕವಾಗಿದೆ. ಇದರ ಸದುಪಯೋಗ ಪಡೆದುಕೊಳ್ಳಿ ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಗೋಪಾಲಪ್ಪ ತಿಳಿಸಿದರು.<br /><br />ಹೊಸದುರ್ಗ ತಾಲ್ಲೂಕಿನಲ್ಲಿ 4 ಹಳ್ಳಿಗಳನ್ನ ಆಯ್ಕೆ ಮಾಡಲಾಗಿದೆ. ಒಂದು ಗ್ರಾಮದಲ್ಲಿ ಶೇ 50ರಷ್ಟು ಬುಡಕಟ್ಟು ಜನರು ವಾಸವಾಗಿರುವ ಹಳ್ಳಿಗಳನ್ನು ಆಯ್ಕೆ ಮಾಡಲಾಗಿದ್ದು, ಈ ಪಟ್ಟಿಗೆ ಕಸಪ್ಪನಹಳ್ಳಿ, ಕಡವಿಗೆರೆ, ನಾಗತಿಹಳ್ಳಿ, ಕ್ಯಾದಿಗೆರೆ ಗ್ರಾಮಗಳು ಸೇರಿಕೊಂಡಿವೆ ಎಂದು ತಾಲ್ಲೂಕು ಶಿಕ್ಷಣ ಇಲಾಖೆ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಶ್ರೀನಿವಾಸ್ ಮಾತನಾಡಿದರು.<br /><br /> ತಾ.ಪಂ ಇಒ ಸುನೀಲ್ ಕುಮಾರ್, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬಿ. ನವೀನ್ ಕುಮಾರ್, ಮುಖಂಡ ಕರಿಯಪ್ಪ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಶಿಬಿರಾರ್ಥಿಗಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸದುರ್ಗ:</strong> ‘ಬುಡಕಟ್ಟು ಜನರ ಸಮಗ್ರ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ನೀಡಬೇಕೆನ್ನುವ ಆಶಯವಿದೆ. ಹಾಗಾಗಿ ತರಬೇತುದಾರರು ಹಿಂದುಳಿದಿರುವ ಜನರನ್ನು ಗುರುತಿಸಿ, ಶಿಸ್ತುಬದ್ಧವಾಗಿ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸೋಣ’ ಎಂದು ತಹಶೀಲ್ದಾರ್ ತಿರುಪತಿ ಪಾಟೀಲ್ ಶಿಬಿರಾರ್ಥಿಗಳನ್ನು ಹುರಿದುಂಬಿಸಿದರು.</p>.<p>ತಾಲ್ಲೂಕು ಆಡಳಿತ, ತಾ.ಪಂ, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪಟ್ಟಣದ ಕ್ಷೇತ್ರ ಶಿಕ್ಷಣ ಸಂಪನ್ಮೂಲ ಅಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಈಚೆಗೆ ನಡೆದ ಆದಿ ಕರ್ಮಯೋಗಿ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.</p>.<p>ಬುಡಕಟ್ಟು ವರ್ಗಗಳನ್ನು ಸಮುದಾಯದ ಮುಖ್ಯ ವಾಹಿನಿಗೆ ತರಬೇಕು ಎನ್ನುವ ಉದ್ದೇಶದಿಂದ ಅಭಿಯಾನ ಕಾರ್ಯಗಾರ ಮಾಡಲಾಗುತ್ತಿದೆ. ಇದು ಶೈಕ್ಷಣಿಕ ಸ್ಥಿತಿಗತಿ, ಆರೋಗ್ಯ ಮತ್ತು ವಿವಿಧ ಸೌಕರ್ಯಗಳನ್ನು ಒದಗಿಸಿ ಕೊಡಬೇಕೆನ್ನುವ ವಿಶೇಷ ಕಾರ್ಯಕ್ರಮವಾಗಿದೆ ಎಂದರು.</p>.<p>ಮೂಲಸೌಕರ್ಯಗಳಿಂದ ವಂಚಿತರಾಗಿರುವ ಬುಡಕಟ್ಟು ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ಈ ತರಬೇತಿ ಪೂರಕವಾಗಿದೆ. ಇದರ ಸದುಪಯೋಗ ಪಡೆದುಕೊಳ್ಳಿ ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಗೋಪಾಲಪ್ಪ ತಿಳಿಸಿದರು.<br /><br />ಹೊಸದುರ್ಗ ತಾಲ್ಲೂಕಿನಲ್ಲಿ 4 ಹಳ್ಳಿಗಳನ್ನ ಆಯ್ಕೆ ಮಾಡಲಾಗಿದೆ. ಒಂದು ಗ್ರಾಮದಲ್ಲಿ ಶೇ 50ರಷ್ಟು ಬುಡಕಟ್ಟು ಜನರು ವಾಸವಾಗಿರುವ ಹಳ್ಳಿಗಳನ್ನು ಆಯ್ಕೆ ಮಾಡಲಾಗಿದ್ದು, ಈ ಪಟ್ಟಿಗೆ ಕಸಪ್ಪನಹಳ್ಳಿ, ಕಡವಿಗೆರೆ, ನಾಗತಿಹಳ್ಳಿ, ಕ್ಯಾದಿಗೆರೆ ಗ್ರಾಮಗಳು ಸೇರಿಕೊಂಡಿವೆ ಎಂದು ತಾಲ್ಲೂಕು ಶಿಕ್ಷಣ ಇಲಾಖೆ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಶ್ರೀನಿವಾಸ್ ಮಾತನಾಡಿದರು.<br /><br /> ತಾ.ಪಂ ಇಒ ಸುನೀಲ್ ಕುಮಾರ್, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬಿ. ನವೀನ್ ಕುಮಾರ್, ಮುಖಂಡ ಕರಿಯಪ್ಪ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಶಿಬಿರಾರ್ಥಿಗಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>