<p><strong>ಹೊಸದುರ್ಗ</strong>: ಪಟ್ಟಣದ ಸದ್ಗುರು ಸೇವಾಶ್ರಮದಲ್ಲಿ ಶ್ರೀಕಾಂತಾನಂದ ಸ್ವಾಮೀಜಿ 26ನೇ ವರ್ಷದ ಬ್ರಹ್ಮೋಪದೇಶದ ಅಂಗವಾಗಿ ಗುರುವಾರ ಬೆಳಿಗ್ಗೆ 108 ದಂಪತಿಗಳಿಂದ ಅನಘದತ್ತ ವ್ರತ ಧಾರ್ಮಿಕ ವಿಧಿಗಳನ್ವಯ ವಿಜೃಂಭಣೆಯಿಂದ ನಡೆಯಿತು.</p>.<p>ಪೂರ್ಣಕುಂಭ ಸ್ವಾಗತ ಹಾಗೂ ಧ್ವಜಾರೋಹಣದ ಮೂಲಕ ಚಾಲನೆ ನೀಡಲಾಯಿತು. 108 ದಂಪತಿಗಳಿಂದ ಅನಘದತ್ತ ವ್ರತ ನಡೆಯಿತು. ಕುಟುಂಬ ಹಾಗೂ ಸಮಾಜದ ಅಭಿವೃದ್ಧಿಗಾಗಿ ಈ ಪೂಜಾ ಕೈಂಕರ್ಯದಲ್ಲಿ ಭಕ್ತರು ಶ್ರದ್ಧಾ ಭಕ್ತಿಯಿಂದ ಭಾಗಿಯಾಗಿದ್ದರು. ಪಟ್ಟಣದಲ್ಲಿ ಇದೇ ಮೊದಲ ಬಾರಿಗೆ ಅನಘದತ್ತ ವ್ರತ ಆಚರಣೆ ನೆರವೇರಿಸಲಾಯಿತು.</p>.<p>ಗುರುವಂದನಾ ಕಾರ್ಯಕ್ರಮ ಹಾಗೂ ಸಂಜೆ ಪಲ್ಲಕ್ಕಿ ಉತ್ಸವ ನಡೆಯಿತು. ಶ್ರೀಗಳ ಹೆಸರಲ್ಲಿ ಜಯಘೋಷಗಳು ಮೊಳಗಿದವು, ಭಕ್ತರು ಪಲ್ಲಕ್ಕಿ ಹೊರುವ ಮೂಲಕ ಭಕ್ತಿ ಸಮರ್ಪಿಸಿದರು. ಭಕ್ತರಿಗೆ ಪ್ರಸಾದದ ವ್ಯವಸ್ಥೆ ಕಲ್ಪಿಸಲಾಗಿತ್ತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-44-1313142576</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸದುರ್ಗ</strong>: ಪಟ್ಟಣದ ಸದ್ಗುರು ಸೇವಾಶ್ರಮದಲ್ಲಿ ಶ್ರೀಕಾಂತಾನಂದ ಸ್ವಾಮೀಜಿ 26ನೇ ವರ್ಷದ ಬ್ರಹ್ಮೋಪದೇಶದ ಅಂಗವಾಗಿ ಗುರುವಾರ ಬೆಳಿಗ್ಗೆ 108 ದಂಪತಿಗಳಿಂದ ಅನಘದತ್ತ ವ್ರತ ಧಾರ್ಮಿಕ ವಿಧಿಗಳನ್ವಯ ವಿಜೃಂಭಣೆಯಿಂದ ನಡೆಯಿತು.</p>.<p>ಪೂರ್ಣಕುಂಭ ಸ್ವಾಗತ ಹಾಗೂ ಧ್ವಜಾರೋಹಣದ ಮೂಲಕ ಚಾಲನೆ ನೀಡಲಾಯಿತು. 108 ದಂಪತಿಗಳಿಂದ ಅನಘದತ್ತ ವ್ರತ ನಡೆಯಿತು. ಕುಟುಂಬ ಹಾಗೂ ಸಮಾಜದ ಅಭಿವೃದ್ಧಿಗಾಗಿ ಈ ಪೂಜಾ ಕೈಂಕರ್ಯದಲ್ಲಿ ಭಕ್ತರು ಶ್ರದ್ಧಾ ಭಕ್ತಿಯಿಂದ ಭಾಗಿಯಾಗಿದ್ದರು. ಪಟ್ಟಣದಲ್ಲಿ ಇದೇ ಮೊದಲ ಬಾರಿಗೆ ಅನಘದತ್ತ ವ್ರತ ಆಚರಣೆ ನೆರವೇರಿಸಲಾಯಿತು.</p>.<p>ಗುರುವಂದನಾ ಕಾರ್ಯಕ್ರಮ ಹಾಗೂ ಸಂಜೆ ಪಲ್ಲಕ್ಕಿ ಉತ್ಸವ ನಡೆಯಿತು. ಶ್ರೀಗಳ ಹೆಸರಲ್ಲಿ ಜಯಘೋಷಗಳು ಮೊಳಗಿದವು, ಭಕ್ತರು ಪಲ್ಲಕ್ಕಿ ಹೊರುವ ಮೂಲಕ ಭಕ್ತಿ ಸಮರ್ಪಿಸಿದರು. ಭಕ್ತರಿಗೆ ಪ್ರಸಾದದ ವ್ಯವಸ್ಥೆ ಕಲ್ಪಿಸಲಾಗಿತ್ತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-44-1313142576</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>