‘15 ವರ್ಷಗಳಿಂದ ಪಕ್ಷ ಸಂಘಟನೆ ಮಾಡಿದ್ದೇನೆ. ಜಾತ್ಯತೀತವಾಗಿ ಸಾರ್ವಜನಿಕ ಸೇವೆ ಮಾಡಿ, ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬ ತತ್ವದ ಅಡಿ ಸೇವೆ ಮಾಡುತ್ತಿದ್ದೇನೆ. ಕಾರ್ಯಕರ್ತರು ಯಾರೂ ಎದೆಗುಂದಬಾರದು. ಮುಂದಿನ ಚುನಾವಣೆಯಲ್ಲಿ ಕಾರ್ಯಕರ್ತರು ಮತ್ತು ಜನಾಭಿಪ್ರಾಯದಂತೆ ತೀರ್ಮಾನ ತೆಗೆದುಕೊಳ್ಳುತ್ತೇನೆ’ ಎಂದೂ ಅವರು ತಿಳಿಸಿದ್ದಾರೆ.