<p><strong>ಹೊಸದುರ್ಗ:</strong> 2023ರ ವಿಧಾನಸಭಾ ಚುನಾವಣೆಯಲ್ಲಿ ಹೊಸದುರ್ಗ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಯಾಗಿರುವುದಾಗಿರಾಜ್ಯ ಖನಿಜ ನಿಗಮದ ಅಧ್ಯಕ್ಷ ಎಸ್. ಲಿಂಗಮೂರ್ತಿ ಶುಕ್ರವಾರ ತಿಳಿಸಿದ್ದಾರೆ.</p>.<p>ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ಪಕ್ಷ ಸಾಮಾಜಿಕ ನ್ಯಾಯದ ಅಡಿಯಲ್ಲಿ ನನಗೆ ಟಿಕೆಟ್ ನೀಡಬೇಕು. ನಾನು ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದು ಖಚಿತ’ ಎಂದು ಘೋಷಿಸಿದ್ದಾರೆ.</p>.<p>‘ಕಳೆದ ಎರಡು ಬಾರಿ ಚುನಾವಣೆಯಲ್ಲಿ ಸೋತಿದ್ದ ಕಾರಣ, ಪಕ್ಷ ಗೆಲ್ಲಿಸುವ ನಿಟ್ಟಿನಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾನೇ ಟಿಕೆಟ್ ತ್ಯಾಗ ಮಾಡಿದ್ದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜನ ನನ್ನನ್ನು ಗೆಲ್ಲಿಸುವ ವಿಶ್ವಾಸವಿದೆ’ ಎಂದು ಹೇಳಿದ್ದಾರೆ.</p>.<p>‘15 ವರ್ಷಗಳಿಂದ ಪಕ್ಷ ಸಂಘಟನೆ ಮಾಡಿದ್ದೇನೆ. ಜಾತ್ಯತೀತವಾಗಿ ಸಾರ್ವಜನಿಕ ಸೇವೆ ಮಾಡಿ, ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬ ತತ್ವದ ಅಡಿ ಸೇವೆ ಮಾಡುತ್ತಿದ್ದೇನೆ. ಕಾರ್ಯಕರ್ತರು ಯಾರೂ ಎದೆಗುಂದಬಾರದು. ಮುಂದಿನ ಚುನಾವಣೆಯಲ್ಲಿ ಕಾರ್ಯಕರ್ತರು ಮತ್ತು ಜನಾಭಿಪ್ರಾಯದಂತೆ ತೀರ್ಮಾನ ತೆಗೆದುಕೊಳ್ಳುತ್ತೇನೆ’ ಎಂದೂ ಅವರು ತಿಳಿಸಿದ್ದಾರೆ.</p>.<p>ಈಚೆಗೆ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ಗೆ ನಡೆದ ಚುನಾವಣೆಯಲ್ಲಿಯೂ ಲಿಂಗಮೂರ್ತಿ ಟಿಕೆಟ್ ಕೇಳಿದ್ದರು. ಆದರೆ ಅವರಿಗೆ ಅವಕಾಶ ಒಲಿದಿರಲಿಲ್ಲ. ಪ್ರಸ್ತುತ ಹೊಸದುರ್ಗಕ್ಕೆ ಬಿಜೆಪಿಯ ಗೂಳಿಹಟ್ಟಿ ಶೇಖರ್ ಶಾಸಕರಾಗಿದ್ದು, ಅದೇ ಪಕ್ಷದಿಂದ ಮತ್ತೊಬ್ಬರು ಟಿಕೆಟ್ ಕೇಳಿರುವುದು ಕುತೂಹಲ ಮೂಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸದುರ್ಗ:</strong> 2023ರ ವಿಧಾನಸಭಾ ಚುನಾವಣೆಯಲ್ಲಿ ಹೊಸದುರ್ಗ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಯಾಗಿರುವುದಾಗಿರಾಜ್ಯ ಖನಿಜ ನಿಗಮದ ಅಧ್ಯಕ್ಷ ಎಸ್. ಲಿಂಗಮೂರ್ತಿ ಶುಕ್ರವಾರ ತಿಳಿಸಿದ್ದಾರೆ.</p>.<p>ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ಪಕ್ಷ ಸಾಮಾಜಿಕ ನ್ಯಾಯದ ಅಡಿಯಲ್ಲಿ ನನಗೆ ಟಿಕೆಟ್ ನೀಡಬೇಕು. ನಾನು ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದು ಖಚಿತ’ ಎಂದು ಘೋಷಿಸಿದ್ದಾರೆ.</p>.<p>‘ಕಳೆದ ಎರಡು ಬಾರಿ ಚುನಾವಣೆಯಲ್ಲಿ ಸೋತಿದ್ದ ಕಾರಣ, ಪಕ್ಷ ಗೆಲ್ಲಿಸುವ ನಿಟ್ಟಿನಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾನೇ ಟಿಕೆಟ್ ತ್ಯಾಗ ಮಾಡಿದ್ದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜನ ನನ್ನನ್ನು ಗೆಲ್ಲಿಸುವ ವಿಶ್ವಾಸವಿದೆ’ ಎಂದು ಹೇಳಿದ್ದಾರೆ.</p>.<p>‘15 ವರ್ಷಗಳಿಂದ ಪಕ್ಷ ಸಂಘಟನೆ ಮಾಡಿದ್ದೇನೆ. ಜಾತ್ಯತೀತವಾಗಿ ಸಾರ್ವಜನಿಕ ಸೇವೆ ಮಾಡಿ, ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬ ತತ್ವದ ಅಡಿ ಸೇವೆ ಮಾಡುತ್ತಿದ್ದೇನೆ. ಕಾರ್ಯಕರ್ತರು ಯಾರೂ ಎದೆಗುಂದಬಾರದು. ಮುಂದಿನ ಚುನಾವಣೆಯಲ್ಲಿ ಕಾರ್ಯಕರ್ತರು ಮತ್ತು ಜನಾಭಿಪ್ರಾಯದಂತೆ ತೀರ್ಮಾನ ತೆಗೆದುಕೊಳ್ಳುತ್ತೇನೆ’ ಎಂದೂ ಅವರು ತಿಳಿಸಿದ್ದಾರೆ.</p>.<p>ಈಚೆಗೆ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ಗೆ ನಡೆದ ಚುನಾವಣೆಯಲ್ಲಿಯೂ ಲಿಂಗಮೂರ್ತಿ ಟಿಕೆಟ್ ಕೇಳಿದ್ದರು. ಆದರೆ ಅವರಿಗೆ ಅವಕಾಶ ಒಲಿದಿರಲಿಲ್ಲ. ಪ್ರಸ್ತುತ ಹೊಸದುರ್ಗಕ್ಕೆ ಬಿಜೆಪಿಯ ಗೂಳಿಹಟ್ಟಿ ಶೇಖರ್ ಶಾಸಕರಾಗಿದ್ದು, ಅದೇ ಪಕ್ಷದಿಂದ ಮತ್ತೊಬ್ಬರು ಟಿಕೆಟ್ ಕೇಳಿರುವುದು ಕುತೂಹಲ ಮೂಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>