<p>ಹೊಸದುರ್ಗ: ತಾಲ್ಲೂಕಿನ ಶ್ರೀರಾಂಪುರ ಹೋಬಳಿಯ ಬೆಲಗೂರು ಗ್ರಾಮದಲ್ಲಿ ಗುರುವಾರ ಅವಧೂತ ಬಿಂದು ಮಾಧವ ಶರ್ಮಾ ಸ್ವಾಮೀಜಿ ಅವರ ಜಯಂತ್ಯುತ್ಸವ ಸಮಾರಂಭ ನಡೆಯಿತು.</p>.<p>ಬೆಳಿಗ್ಗೆ ಮಠದ ಆವರಣದಲ್ಲಿ ಲಲಿತೋಪಾಖ್ಯಾನ ಪಾರಾಯಣ, ಬಿಂದು ಮಾಧವ ಶರ್ಮಾ ಸ್ವಾಮೀಜಿ ಸನ್ನಿಧಿಯಲ್ಲಿ ಮಹಾಪೂಜೆ ನಡೆಯಿತು.</p>.<p>ಗುರುಗಳ ಮೂರ್ತಿ ಹಾಗೂ ಪಾದುಕೆಗಳಿಗೆ ಅಭಿಷೇಕ ನೆರವೇರಿಸಲಾಯಿತು. ಮಧ್ಯಾಹ್ನ ಲಲಿತಾ ಹೋಮ, ಸಂಜೆ 6ಕ್ಕೆ ಸ್ವಾಮೀಜಿ ಭಾವಚಿತ್ರದ ಅಡ್ಡಪಲ್ಲಕ್ಕಿ ಉತ್ಸವ ನಡೆಯಿತು.</p>.<p>ನಂತರ ಸಾಮೂಹಿಕವಾಗಿ ವಿಷ್ಣು ಸಹಸ್ರನಾಮ ಪಾರಾಯಣ ಜರುಗಿತು. ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳು ಮಾರುತಿ ಗುರುಪೀಠದ ಮಾರುತಿ ಶರ್ಮಾ ಸ್ವಾಮೀಜಿ ನೇತೃತ್ವದಲ್ಲಿ ನಡೆದವು. ಸಾವಿರಾರು ಭಕ್ತರು ಪೂಜಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260502-44-390751259</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಸದುರ್ಗ: ತಾಲ್ಲೂಕಿನ ಶ್ರೀರಾಂಪುರ ಹೋಬಳಿಯ ಬೆಲಗೂರು ಗ್ರಾಮದಲ್ಲಿ ಗುರುವಾರ ಅವಧೂತ ಬಿಂದು ಮಾಧವ ಶರ್ಮಾ ಸ್ವಾಮೀಜಿ ಅವರ ಜಯಂತ್ಯುತ್ಸವ ಸಮಾರಂಭ ನಡೆಯಿತು.</p>.<p>ಬೆಳಿಗ್ಗೆ ಮಠದ ಆವರಣದಲ್ಲಿ ಲಲಿತೋಪಾಖ್ಯಾನ ಪಾರಾಯಣ, ಬಿಂದು ಮಾಧವ ಶರ್ಮಾ ಸ್ವಾಮೀಜಿ ಸನ್ನಿಧಿಯಲ್ಲಿ ಮಹಾಪೂಜೆ ನಡೆಯಿತು.</p>.<p>ಗುರುಗಳ ಮೂರ್ತಿ ಹಾಗೂ ಪಾದುಕೆಗಳಿಗೆ ಅಭಿಷೇಕ ನೆರವೇರಿಸಲಾಯಿತು. ಮಧ್ಯಾಹ್ನ ಲಲಿತಾ ಹೋಮ, ಸಂಜೆ 6ಕ್ಕೆ ಸ್ವಾಮೀಜಿ ಭಾವಚಿತ್ರದ ಅಡ್ಡಪಲ್ಲಕ್ಕಿ ಉತ್ಸವ ನಡೆಯಿತು.</p>.<p>ನಂತರ ಸಾಮೂಹಿಕವಾಗಿ ವಿಷ್ಣು ಸಹಸ್ರನಾಮ ಪಾರಾಯಣ ಜರುಗಿತು. ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳು ಮಾರುತಿ ಗುರುಪೀಠದ ಮಾರುತಿ ಶರ್ಮಾ ಸ್ವಾಮೀಜಿ ನೇತೃತ್ವದಲ್ಲಿ ನಡೆದವು. ಸಾವಿರಾರು ಭಕ್ತರು ಪೂಜಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260502-44-390751259</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>