<p><strong>ಹೊಸದುರ್ಗ:</strong> ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ಬಸ್ಗಳ ರೂಟ್ ವಿಚಾರವಾಗಿ ಚಾಲಕ ಹಾಗೂ ಏಜೆಂಟ್ ಮಧ್ಯೆ ಶನಿವಾರ ಗಲಾಟೆ ನಡೆದಿದೆ. ಈ ವೇಳೆ ಬಸ್ ಚಾಲಕನಿಗೆ ಚಾಕುವಿನಿಂದ ಹಲ್ಲೆ ನಡೆದಿದೆ. </p>.<p>ತಾಲ್ಲೂಕಿನ ಗುತ್ತಿಕಟ್ಟೆ ಗ್ರಾಮದ ಪ್ರವೀಣ್ ಎಂಬವರು ಗಾಯಗೊಂಡಿದ್ದು, ಅವರನ್ನು ಇಲ್ಲಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಖಾಸಗಿ ಬಸ್ ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿದ್ದ ಪ್ರವೀಣ್, ಶನಿವಾರ ಮಧ್ಯಾಹ್ನ ಬಸ್ ನಿಲ್ಲಿಸಿ ಕೆಳಗಿಳಿಯುವಾಗ ಬಸ್ ಏಜೆಂಟ್, ಮಧುರೆ ಗ್ರಾಮದ ಶ್ರೀನಿವಾಸ್ ತಡೆದರು. ತಡವಾಗಿ ಬಂದು, ತಡವಾಗಿ ಹೋಗುತ್ತಿರುವುದಕ್ಕೆ ಆಕ್ಷೇಪಿಸಿದರು ಎನ್ನಲಾಗಿದೆ.</p>.<p>ಇಬ್ಬರ ನಡುವಿನ ವಾಗ್ವಾದ ಅತಿರೇಕಕ್ಕೆ ಹೋಯಿತು. ಶ್ರೀನಿವಾಸ್ ಚಾಕುವಿನಿಂದ ಹೊಟ್ಟೆಗೆ ಚುಚ್ಚಲು ಬಂದಾಗ ಪ್ರವೀಣ್ ತಪ್ಪಿಸಿಕೊಳ್ಳಲು ಯತ್ನಿಸಿದರು ಎನ್ನಲಾಗಿದೆ. ತಲೆಯ ಎಡಭಾಗದಲ್ಲಿ ಚುಚ್ಚಿದ ಗಾಯವಾಗಿ, ರಕ್ತಸ್ರಾವವಾಯಿತು. ಕೂಡಲೇ ಅಲ್ಲಿದ್ದವರು ಗಲಾಟೆ ಬಿಡಿಸಿ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿದರು.</p>.<p>ಈ ಕುರಿತು ಹೊಸದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸದುರ್ಗ:</strong> ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ಬಸ್ಗಳ ರೂಟ್ ವಿಚಾರವಾಗಿ ಚಾಲಕ ಹಾಗೂ ಏಜೆಂಟ್ ಮಧ್ಯೆ ಶನಿವಾರ ಗಲಾಟೆ ನಡೆದಿದೆ. ಈ ವೇಳೆ ಬಸ್ ಚಾಲಕನಿಗೆ ಚಾಕುವಿನಿಂದ ಹಲ್ಲೆ ನಡೆದಿದೆ. </p>.<p>ತಾಲ್ಲೂಕಿನ ಗುತ್ತಿಕಟ್ಟೆ ಗ್ರಾಮದ ಪ್ರವೀಣ್ ಎಂಬವರು ಗಾಯಗೊಂಡಿದ್ದು, ಅವರನ್ನು ಇಲ್ಲಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಖಾಸಗಿ ಬಸ್ ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿದ್ದ ಪ್ರವೀಣ್, ಶನಿವಾರ ಮಧ್ಯಾಹ್ನ ಬಸ್ ನಿಲ್ಲಿಸಿ ಕೆಳಗಿಳಿಯುವಾಗ ಬಸ್ ಏಜೆಂಟ್, ಮಧುರೆ ಗ್ರಾಮದ ಶ್ರೀನಿವಾಸ್ ತಡೆದರು. ತಡವಾಗಿ ಬಂದು, ತಡವಾಗಿ ಹೋಗುತ್ತಿರುವುದಕ್ಕೆ ಆಕ್ಷೇಪಿಸಿದರು ಎನ್ನಲಾಗಿದೆ.</p>.<p>ಇಬ್ಬರ ನಡುವಿನ ವಾಗ್ವಾದ ಅತಿರೇಕಕ್ಕೆ ಹೋಯಿತು. ಶ್ರೀನಿವಾಸ್ ಚಾಕುವಿನಿಂದ ಹೊಟ್ಟೆಗೆ ಚುಚ್ಚಲು ಬಂದಾಗ ಪ್ರವೀಣ್ ತಪ್ಪಿಸಿಕೊಳ್ಳಲು ಯತ್ನಿಸಿದರು ಎನ್ನಲಾಗಿದೆ. ತಲೆಯ ಎಡಭಾಗದಲ್ಲಿ ಚುಚ್ಚಿದ ಗಾಯವಾಗಿ, ರಕ್ತಸ್ರಾವವಾಯಿತು. ಕೂಡಲೇ ಅಲ್ಲಿದ್ದವರು ಗಲಾಟೆ ಬಿಡಿಸಿ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿದರು.</p>.<p>ಈ ಕುರಿತು ಹೊಸದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>