<p><strong>ಹೊಸದುರ್ಗ:</strong> ‘ಇ– ಸ್ವತ್ತು ನೀಡುವ ವಿಚಾರದಲ್ಲಿ ಸಾರ್ವಜನಿಕರನ್ನು ಪದೇ ಪದೇ ಅಲೆದಾಡಿಸಲಾಗುತ್ತಿದೆ. ಈ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ. ಸಮಯಕ್ಕೆ ಸರಿಯಾಗಿ ಇ– ಸ್ವತ್ತು ನೀಡಲು ಏನು ಸಮಸ್ಯೆ ನಿಮಗೆ’ ಎಂದು ಶಾಸಕ ಬಿ.ಜಿ. ಗೋವಿಂದಪ್ಪ ಅಧಿಕಾರಿಗಳ ವಿರುದ್ಧ ಹರಿಹಾಯ್ದರು.</p>.<p>ಪುರಸಭೆ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಮಾತನಾಡಿದರು.</p>.<p>‘ಅಧಿಕಾರಿಗಳು ಕೇವಲ ತೋರಿಕೆಗಾಗಿ ಕೆಲಸ ಮಾಡದೇ ಪ್ರಾಮಾಣಿಕವಾಗಿ ಕೆಲಸ ಮಾಡಿ. ಪಟ್ಟಣದಲ್ಲಿ ವಿದ್ಯುತ್ ಸಮಸ್ಯೆ ಬಹಳಷ್ಟಿದೆ. ಮನೆ ಹಾಗೂ ಪಂಪ್ಸೆಟ್ಗಳಿಗೆ ಸಮಯಕ್ಕೆ ಸರಿಯಾಗಿ ವಿದ್ಯುತ್ ನೀಡುತ್ತಿಲ್ಲ. ವ್ಯರ್ಥ ಹೇಳಿಕೆಗಳನ್ನು ನೀಡುವುದನ್ನು ಬಿಟ್ಟು ಕೆಲಸ ನಿರ್ವಹಿಸಿ’ ಎಂದು ಬೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.</p>.<p>‘ಹೊಸದುರ್ಗ ಪುರಸಭೆಯಲ್ಲಿ ಇ–ಖಾತೆ ಬಹಳಷ್ಟು ಬಾಕಿ ಇವೆ. ಸಮಯಕ್ಕೆ ಸರಿಯಾಗಿ ಸಾರ್ವಜನಿಕರಿಗೆ ವಿಲೇವಾರಿ ಆಗುತ್ತಿಲ್ಲ. ಮುಂದಿನ ದಿನಗಳಲ್ಲಿ ಎಚ್ಚರಿಕೆಯಿಂದ ಕೆಲಸ ನಿರ್ವಹಿಸಬೇಕು’ ಎಂದು ಚಿತ್ರದುರ್ಗ ಉಪವಿಭಾಗಾಧಿಕಾರಿ ಕಾಂತರಾಜು ಕೆ.ಟಿ ಹೇಳಿದರು.</p>.<p>‘ವೇದಾವತಿ ನದಿಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರಿದೆ. ಕೊಳವೆ ಬಾವಿ, ಓವರ್ ಹೆಡ್ ಟ್ಯಾಂಕ್ ಇದ್ದರೂ ಪಟ್ಟಣದಲ್ಲಿ ಸಮಯಕ್ಕೆ ಸರಿಯಾಗಿ ನೀರು ಸರಬರಾಜು ಆಗುತ್ತಿಲ್ಲವೆಂಬ ದೂರುಗಳು ಕೇಳಿ ಬರುತ್ತಿವೆ. ಎಲ್ಲಾ ಬಡಾವಣೆಗಳಿಗೂ ನೀರು ಒದಗಿಸಿ’ ಎಂದರು.</p>.<p>ಪುರಸಭೆ ಮುಖ್ಯಾಧಿಕಾರಿ ನಾಗಭೂಷಣ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಪುರಸಭೆ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸದುರ್ಗ:</strong> ‘ಇ– ಸ್ವತ್ತು ನೀಡುವ ವಿಚಾರದಲ್ಲಿ ಸಾರ್ವಜನಿಕರನ್ನು ಪದೇ ಪದೇ ಅಲೆದಾಡಿಸಲಾಗುತ್ತಿದೆ. ಈ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ. ಸಮಯಕ್ಕೆ ಸರಿಯಾಗಿ ಇ– ಸ್ವತ್ತು ನೀಡಲು ಏನು ಸಮಸ್ಯೆ ನಿಮಗೆ’ ಎಂದು ಶಾಸಕ ಬಿ.ಜಿ. ಗೋವಿಂದಪ್ಪ ಅಧಿಕಾರಿಗಳ ವಿರುದ್ಧ ಹರಿಹಾಯ್ದರು.</p>.<p>ಪುರಸಭೆ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಮಾತನಾಡಿದರು.</p>.<p>‘ಅಧಿಕಾರಿಗಳು ಕೇವಲ ತೋರಿಕೆಗಾಗಿ ಕೆಲಸ ಮಾಡದೇ ಪ್ರಾಮಾಣಿಕವಾಗಿ ಕೆಲಸ ಮಾಡಿ. ಪಟ್ಟಣದಲ್ಲಿ ವಿದ್ಯುತ್ ಸಮಸ್ಯೆ ಬಹಳಷ್ಟಿದೆ. ಮನೆ ಹಾಗೂ ಪಂಪ್ಸೆಟ್ಗಳಿಗೆ ಸಮಯಕ್ಕೆ ಸರಿಯಾಗಿ ವಿದ್ಯುತ್ ನೀಡುತ್ತಿಲ್ಲ. ವ್ಯರ್ಥ ಹೇಳಿಕೆಗಳನ್ನು ನೀಡುವುದನ್ನು ಬಿಟ್ಟು ಕೆಲಸ ನಿರ್ವಹಿಸಿ’ ಎಂದು ಬೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.</p>.<p>‘ಹೊಸದುರ್ಗ ಪುರಸಭೆಯಲ್ಲಿ ಇ–ಖಾತೆ ಬಹಳಷ್ಟು ಬಾಕಿ ಇವೆ. ಸಮಯಕ್ಕೆ ಸರಿಯಾಗಿ ಸಾರ್ವಜನಿಕರಿಗೆ ವಿಲೇವಾರಿ ಆಗುತ್ತಿಲ್ಲ. ಮುಂದಿನ ದಿನಗಳಲ್ಲಿ ಎಚ್ಚರಿಕೆಯಿಂದ ಕೆಲಸ ನಿರ್ವಹಿಸಬೇಕು’ ಎಂದು ಚಿತ್ರದುರ್ಗ ಉಪವಿಭಾಗಾಧಿಕಾರಿ ಕಾಂತರಾಜು ಕೆ.ಟಿ ಹೇಳಿದರು.</p>.<p>‘ವೇದಾವತಿ ನದಿಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರಿದೆ. ಕೊಳವೆ ಬಾವಿ, ಓವರ್ ಹೆಡ್ ಟ್ಯಾಂಕ್ ಇದ್ದರೂ ಪಟ್ಟಣದಲ್ಲಿ ಸಮಯಕ್ಕೆ ಸರಿಯಾಗಿ ನೀರು ಸರಬರಾಜು ಆಗುತ್ತಿಲ್ಲವೆಂಬ ದೂರುಗಳು ಕೇಳಿ ಬರುತ್ತಿವೆ. ಎಲ್ಲಾ ಬಡಾವಣೆಗಳಿಗೂ ನೀರು ಒದಗಿಸಿ’ ಎಂದರು.</p>.<p>ಪುರಸಭೆ ಮುಖ್ಯಾಧಿಕಾರಿ ನಾಗಭೂಷಣ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಪುರಸಭೆ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>