<p><strong>ಹೊಸದುರ್ಗ</strong>: ಕೆಲ ದಿನಗಳಿಂದ ಸುರಿದ ಹದ ಮಳೆಯಿಂದಾಗಿ ರೈತರು ಸಂತಸಗೊಂಡಿದ್ದು, ಈಗಾಗಲೇ ಭೂಮಿ ಸಿದ್ಧತೆ ಮಾಡಿಕೊಂಡಿರುವ ಕೆಲ ರೈತರು ಈರುಳ್ಳಿ ಬಿತ್ತನೆಗೆ ಮುಂದಾಗಿದ್ದರೆ, ಇನ್ನೂ ಕೆಲ ರೈತರು ಹೊಲ ಹಸನು ಮಾಡುವ ಕಾರ್ಯದಲ್ಲಿ ತೊಡಗಿದ್ದಾರೆ.</p>.<p>ಮಾಗಿ ಉಳುಮೆ ನಂತರ ರೈತರು ಕೊಟ್ಟಿಗೆ ಗೊಬ್ಬರ ಬೆರೆಸಿ, ಭೂಮಿಯನ್ನು ಬಿತ್ತನೆಗೆ ಹದ ಮಾಡಿಕೊಂಡಿದ್ದರು. ಈಚೆಗೆ ಸುರಿದ ಮಳೆಯಿಂದಾಗಿ ಭೂಮಿ ಹದವಾಗಿದ್ದು, ಈರುಳ್ಳಿ ಬೆಳೆಯುವ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.</p>.<p>ತಾಲ್ಲೂಕಿನ ಶೆಟ್ಟಿಹಳ್ಳಿ, ಶ್ರೀರಂಗಾಪುರ, ಬಾಗೂರು, ಚಿಕ್ಕಯಗಟಿ, ಆನಿವಾಳ, ಹೊನ್ನೆಕೆರೆ, ಐಲಾಪುರ, ಮಂಟೇನಹಳ್ಳಿ ಸೇರಿದಂತೆ ತಾಲ್ಲೂಕಿನ ವಿವಿಧೆಡೆ ರೈತರು ಈರುಳ್ಳಿ ಬೀಜ ಬಿತ್ತನೆಯಲ್ಲಿ ತೊಡಗಿದ್ದಾರೆ.</p>.<p>‘₹400ರಿಂದ ₹450ಗೆ ಒಂದು ಸೇರು ಬೀಜ ಖರೀದಿಸಿ, ಎಕರೆಗೆ 6 ಸೇರು ಬೀಜ ಚೆಲ್ಲಲಾಗಿದೆ. ಇದಕ್ಕೂ ಮೊದಲು ಎಕರೆಗೆ ಎರಡು ಲೋಡ್ನಂತೆ 3 ಎಕರೆಗೆ 6 ಲೋಡ್ ಕೊಟ್ಟಿಗೆ ಗೊಬ್ಬರ ಹಾಕಲಾಗಿದೆ. ನಂತರ ತಳಗೊಬ್ಬರವಾಗಿ ಡಿಎಪಿ ಬಳಸಲಾಗಿದೆ. ಬೀಜೋಪಚಾರ ಮಾಡಿದ ನಂತರ ಬಿತ್ತನೆ ಕಾರ್ಯ ಆರಂಭವಾಗಿದೆ. 3 ಎಕರೆ ಭೂಮಿಗೆ ಈರುಳ್ಳಿ ಬಿತ್ತನೆ ಮಾಡಲಾಗಿದೆ. ಇನ್ನೂ ಮಳೆಯಾದರೆ ಇನ್ನೂ 9 ದಿನಗಳಲ್ಲಿ ಸಸಿ ಭೂಮಿಯಿಂದ ಮೇಲೆ ಬರಲಿದೆ’ ಎನ್ನುತ್ತಾರೆ ಕಸಬಾ ಹೋಬಳಿಯ ಶ್ರೀರಂಗಾಪುರ ಗ್ರಾಮದ ರೈತ ಎಚ್. ನಿರಂಜನ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-44-335326008</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸದುರ್ಗ</strong>: ಕೆಲ ದಿನಗಳಿಂದ ಸುರಿದ ಹದ ಮಳೆಯಿಂದಾಗಿ ರೈತರು ಸಂತಸಗೊಂಡಿದ್ದು, ಈಗಾಗಲೇ ಭೂಮಿ ಸಿದ್ಧತೆ ಮಾಡಿಕೊಂಡಿರುವ ಕೆಲ ರೈತರು ಈರುಳ್ಳಿ ಬಿತ್ತನೆಗೆ ಮುಂದಾಗಿದ್ದರೆ, ಇನ್ನೂ ಕೆಲ ರೈತರು ಹೊಲ ಹಸನು ಮಾಡುವ ಕಾರ್ಯದಲ್ಲಿ ತೊಡಗಿದ್ದಾರೆ.</p>.<p>ಮಾಗಿ ಉಳುಮೆ ನಂತರ ರೈತರು ಕೊಟ್ಟಿಗೆ ಗೊಬ್ಬರ ಬೆರೆಸಿ, ಭೂಮಿಯನ್ನು ಬಿತ್ತನೆಗೆ ಹದ ಮಾಡಿಕೊಂಡಿದ್ದರು. ಈಚೆಗೆ ಸುರಿದ ಮಳೆಯಿಂದಾಗಿ ಭೂಮಿ ಹದವಾಗಿದ್ದು, ಈರುಳ್ಳಿ ಬೆಳೆಯುವ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.</p>.<p>ತಾಲ್ಲೂಕಿನ ಶೆಟ್ಟಿಹಳ್ಳಿ, ಶ್ರೀರಂಗಾಪುರ, ಬಾಗೂರು, ಚಿಕ್ಕಯಗಟಿ, ಆನಿವಾಳ, ಹೊನ್ನೆಕೆರೆ, ಐಲಾಪುರ, ಮಂಟೇನಹಳ್ಳಿ ಸೇರಿದಂತೆ ತಾಲ್ಲೂಕಿನ ವಿವಿಧೆಡೆ ರೈತರು ಈರುಳ್ಳಿ ಬೀಜ ಬಿತ್ತನೆಯಲ್ಲಿ ತೊಡಗಿದ್ದಾರೆ.</p>.<p>‘₹400ರಿಂದ ₹450ಗೆ ಒಂದು ಸೇರು ಬೀಜ ಖರೀದಿಸಿ, ಎಕರೆಗೆ 6 ಸೇರು ಬೀಜ ಚೆಲ್ಲಲಾಗಿದೆ. ಇದಕ್ಕೂ ಮೊದಲು ಎಕರೆಗೆ ಎರಡು ಲೋಡ್ನಂತೆ 3 ಎಕರೆಗೆ 6 ಲೋಡ್ ಕೊಟ್ಟಿಗೆ ಗೊಬ್ಬರ ಹಾಕಲಾಗಿದೆ. ನಂತರ ತಳಗೊಬ್ಬರವಾಗಿ ಡಿಎಪಿ ಬಳಸಲಾಗಿದೆ. ಬೀಜೋಪಚಾರ ಮಾಡಿದ ನಂತರ ಬಿತ್ತನೆ ಕಾರ್ಯ ಆರಂಭವಾಗಿದೆ. 3 ಎಕರೆ ಭೂಮಿಗೆ ಈರುಳ್ಳಿ ಬಿತ್ತನೆ ಮಾಡಲಾಗಿದೆ. ಇನ್ನೂ ಮಳೆಯಾದರೆ ಇನ್ನೂ 9 ದಿನಗಳಲ್ಲಿ ಸಸಿ ಭೂಮಿಯಿಂದ ಮೇಲೆ ಬರಲಿದೆ’ ಎನ್ನುತ್ತಾರೆ ಕಸಬಾ ಹೋಬಳಿಯ ಶ್ರೀರಂಗಾಪುರ ಗ್ರಾಮದ ರೈತ ಎಚ್. ನಿರಂಜನ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-44-335326008</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>