<p>ಹೊಸದುರ್ಗ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಹಾಲುರಾಮೇಶ್ವರ ಹಾಗೂ ಸಾಣೇಹಳ್ಳಿ ಗ್ರಾಮದ ಕೆರೆ ಅಭಿವೃದ್ಧಿ ಸಮಿತಿಯ ಆಶ್ರಯದಲ್ಲಿ ಕೆರೆಗಳ ಪುನಃಶ್ಚೇತನ ಕಾರ್ಯಕ್ಕೆ ಬುಧವಾರ ಪಂಡಿತಾರಾಧ್ಯ ಸ್ವಾಮೀಜಿ ಚಾಲನೆ ನೀಡಿದರು.</p>.<p>‘2019ರಲ್ಲಿ ಗ್ರಾಮಸ್ಥರು ಸ್ವಯಂಪ್ರೇರಿತರಾಗಿ ಹಣ ಸಂಗ್ರಹಿಸಿ ಸಾಣೇಹಳ್ಳಿ ಕೆರೆಯ ಹೂಳೆತ್ತುವ ಕಾರ್ಯಕ್ಕೆ ಚಾಲನೆ ನೀಡಿದ್ದರು. ಆ ಸಮಯದಲ್ಲಿ ಕೆರೆಯ ಮಣ್ಣನ್ನು ತೆಗೆದ ತಕ್ಷಣ ಸುರಿದ ಮಳೆಯಿಂದಾಗಿ ಕೆರೆ ತುಂಬಿ ಗ್ರಾಮಸ್ಥರಲ್ಲಿ ಸಂತಸ ಮೂಡಿಸಿತ್ತು. ಆದರೆ, ನಂತರದ ದಿನಗಳಲ್ಲಿ ನಿರ್ವಹಣೆಯ ಕೊರತೆಯಿಂದಾಗಿ ಕೆರೆ ಮತ್ತೆ ‘ಬೋಳು ಕೆರೆ’ಯಾಗಿ ಮಾರ್ಪಟ್ಟಿದೆ’ ಎಂದು ಶ್ರೀಗಳು ಹೇಳಿದರು.</p>.<p>‘ಕೆರೆ ಸಂಪೂರ್ಣ ಅಭಿವೃದ್ಧಿ ಪಡಿಸಬೇಕು. ಹಿಂದಿನಂತೆ ಪ್ರತಿಯೊಬ್ಬರೂ ತಮ್ಮ ಕೈಲಾದ ಆರ್ಥಿಕ ಸಹಾಯವನ್ನು ನೀಡಿ. ಸಂಘಟಿತರಾಗಿ ಕೆರೆಯ ಹೂಳೆತ್ತುವ ಕಾರ್ಯದಲ್ಲಿ ಭಾಗಿಯಾಗಬೇಕು. ಸಾಣೇಹಳ್ಳಿ ಕೆರೆಯ ಅಭಿವೃದ್ಧಿಗೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಅಗತ್ಯ ಧನಸಹಾಯ ಮತ್ತು ಸಹಕಾರ ನೀಡುವರು’ ಎಂದು ತಿಳಿಸಿದರು.</p>.<p>‘ಕೆರೆ ಹೂಳು ಎತ್ತುವ ಕಾರ್ಯಕ್ಕೆ ಟ್ರ್ಯಾಕ್ಟರ್ಗಳ ಮೂಲಕ ಮಣ್ಣು ಸಾಗಿಸುವ ಕೆಲಸಕ್ಕೆ ಗ್ರಾಮಸ್ಥರು ಸನ್ನದ್ಧರಾಗಿದ್ದಾರೆ. ಹಿಂದೆ ಮಾಡಿದಂತೆಯೇ ಪ್ರತಿ ಮನೆಯಿಂದ ಅಲ್ಪ ಮೊತ್ತದ ದೇಣಿಗೆ ಸಂಗ್ರಹಿಸಿ ಈ ಕಾರ್ಯವನ್ನು ಯಶಸ್ವಿಗೊಳಿಸಬೇಕು. ಮಠದ ವತಿಯಿಂದಲೂ ಅಗತ್ಯ ಆರ್ಥಿಕ ನೆರವು ನೀಡಲಾಗುವುದು’ ಎಂದು ಹೇಳಿದರು.</p>.<p>ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಚಂದ್ರಶೇಖರ್, ಕೆರೆ ಎಂಜಿನಿಯರ್ ಹರೀಶ್, ಕೃಷಿ ಅಧಿಕಾರಿ ಉಮೇಶ್, ಕೆರೆ ಮೇಲ್ವಿಚಾರಕಿ ಫಕೀರಮ್ಮ, ಸೇವಾ ಪ್ರತಿನಿಧಿ ಶಿಲ್ಪಾ, ಒಕ್ಕೂಟದ ಪದಾಧಿಕಾರಿಗಳಾದ ರತ್ನಮ್ಮ ಮತ್ತು ಮಮತಾ, ಮುಖಂಡರಾದ ಎಸ್.ಕೆ. ಪರಮೇಶ್ವರಯ್ಯ, ಎಸ್.ಆರ್. ಮಂಜುನಾಥ್, ಸತೀಶ್, ಪ್ರದೀಪ್, ವೀರಭದ್ರಪ್ಪ, ಕೃಷ್ಣಪ್ಪ ಸೇರಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಪದಾಧಿಕಾರಿಗಳು, ಗ್ರಾಮಸ್ಥರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260417-44-913343980</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಸದುರ್ಗ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಹಾಲುರಾಮೇಶ್ವರ ಹಾಗೂ ಸಾಣೇಹಳ್ಳಿ ಗ್ರಾಮದ ಕೆರೆ ಅಭಿವೃದ್ಧಿ ಸಮಿತಿಯ ಆಶ್ರಯದಲ್ಲಿ ಕೆರೆಗಳ ಪುನಃಶ್ಚೇತನ ಕಾರ್ಯಕ್ಕೆ ಬುಧವಾರ ಪಂಡಿತಾರಾಧ್ಯ ಸ್ವಾಮೀಜಿ ಚಾಲನೆ ನೀಡಿದರು.</p>.<p>‘2019ರಲ್ಲಿ ಗ್ರಾಮಸ್ಥರು ಸ್ವಯಂಪ್ರೇರಿತರಾಗಿ ಹಣ ಸಂಗ್ರಹಿಸಿ ಸಾಣೇಹಳ್ಳಿ ಕೆರೆಯ ಹೂಳೆತ್ತುವ ಕಾರ್ಯಕ್ಕೆ ಚಾಲನೆ ನೀಡಿದ್ದರು. ಆ ಸಮಯದಲ್ಲಿ ಕೆರೆಯ ಮಣ್ಣನ್ನು ತೆಗೆದ ತಕ್ಷಣ ಸುರಿದ ಮಳೆಯಿಂದಾಗಿ ಕೆರೆ ತುಂಬಿ ಗ್ರಾಮಸ್ಥರಲ್ಲಿ ಸಂತಸ ಮೂಡಿಸಿತ್ತು. ಆದರೆ, ನಂತರದ ದಿನಗಳಲ್ಲಿ ನಿರ್ವಹಣೆಯ ಕೊರತೆಯಿಂದಾಗಿ ಕೆರೆ ಮತ್ತೆ ‘ಬೋಳು ಕೆರೆ’ಯಾಗಿ ಮಾರ್ಪಟ್ಟಿದೆ’ ಎಂದು ಶ್ರೀಗಳು ಹೇಳಿದರು.</p>.<p>‘ಕೆರೆ ಸಂಪೂರ್ಣ ಅಭಿವೃದ್ಧಿ ಪಡಿಸಬೇಕು. ಹಿಂದಿನಂತೆ ಪ್ರತಿಯೊಬ್ಬರೂ ತಮ್ಮ ಕೈಲಾದ ಆರ್ಥಿಕ ಸಹಾಯವನ್ನು ನೀಡಿ. ಸಂಘಟಿತರಾಗಿ ಕೆರೆಯ ಹೂಳೆತ್ತುವ ಕಾರ್ಯದಲ್ಲಿ ಭಾಗಿಯಾಗಬೇಕು. ಸಾಣೇಹಳ್ಳಿ ಕೆರೆಯ ಅಭಿವೃದ್ಧಿಗೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಅಗತ್ಯ ಧನಸಹಾಯ ಮತ್ತು ಸಹಕಾರ ನೀಡುವರು’ ಎಂದು ತಿಳಿಸಿದರು.</p>.<p>‘ಕೆರೆ ಹೂಳು ಎತ್ತುವ ಕಾರ್ಯಕ್ಕೆ ಟ್ರ್ಯಾಕ್ಟರ್ಗಳ ಮೂಲಕ ಮಣ್ಣು ಸಾಗಿಸುವ ಕೆಲಸಕ್ಕೆ ಗ್ರಾಮಸ್ಥರು ಸನ್ನದ್ಧರಾಗಿದ್ದಾರೆ. ಹಿಂದೆ ಮಾಡಿದಂತೆಯೇ ಪ್ರತಿ ಮನೆಯಿಂದ ಅಲ್ಪ ಮೊತ್ತದ ದೇಣಿಗೆ ಸಂಗ್ರಹಿಸಿ ಈ ಕಾರ್ಯವನ್ನು ಯಶಸ್ವಿಗೊಳಿಸಬೇಕು. ಮಠದ ವತಿಯಿಂದಲೂ ಅಗತ್ಯ ಆರ್ಥಿಕ ನೆರವು ನೀಡಲಾಗುವುದು’ ಎಂದು ಹೇಳಿದರು.</p>.<p>ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಚಂದ್ರಶೇಖರ್, ಕೆರೆ ಎಂಜಿನಿಯರ್ ಹರೀಶ್, ಕೃಷಿ ಅಧಿಕಾರಿ ಉಮೇಶ್, ಕೆರೆ ಮೇಲ್ವಿಚಾರಕಿ ಫಕೀರಮ್ಮ, ಸೇವಾ ಪ್ರತಿನಿಧಿ ಶಿಲ್ಪಾ, ಒಕ್ಕೂಟದ ಪದಾಧಿಕಾರಿಗಳಾದ ರತ್ನಮ್ಮ ಮತ್ತು ಮಮತಾ, ಮುಖಂಡರಾದ ಎಸ್.ಕೆ. ಪರಮೇಶ್ವರಯ್ಯ, ಎಸ್.ಆರ್. ಮಂಜುನಾಥ್, ಸತೀಶ್, ಪ್ರದೀಪ್, ವೀರಭದ್ರಪ್ಪ, ಕೃಷ್ಣಪ್ಪ ಸೇರಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಪದಾಧಿಕಾರಿಗಳು, ಗ್ರಾಮಸ್ಥರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260417-44-913343980</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>