<p>ಹೊಸದುರ್ಗ: ‘ಸಾಣೇಹಳ್ಳಿ ಕೆರೆಯ ಹೂಳೆತ್ತುವ ಕಾರ್ಯವು ಭರದಿಂದ ಸಾಗಿದ್ದು, ಈಗಾಗಲೇ ಶೇ 90ರಷ್ಟು ಕೆಲಸ ಪೂರ್ಣಗೊಂಡಿದೆ. ಇನ್ನು ಒಂದು ವಾರದಲ್ಲಿ ಕಾರ್ಯ ಮುಕ್ತಾಯಗೊಳ್ಳಲಿದೆ’ ಎಂದು ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.</p>.<p>ಬುಧವಾರ ಕೆರೆಗೆ ಭೇಟಿ ನೀಡಿ, ಹೂಳೆತ್ತುವ ಕಾಮಗಾರಿ ವೀಕ್ಷಿಸಿ ಮಾತನಾಡಿದ ಅವರು, ‘ಮಳೆರಾಯ ಕೃಪೆ ತೋರಿ ಆದಷ್ಟು ಬೇಗ ಕೆರೆ ತುಂಬುವಂತಾಗಲಿ. ಇದರಿಂದ ಅಂತರ್ಜಲ ಮಟ್ಟ ವೃದ್ಧಿಸಿ, ಈ ಭಾಗದ ರೈತರ ಬಾಳು ಹಸನಾಗಲಿ’ ಎಂದು ಆಶಿಸಿದರು.</p>.<p>‘ಕೆರೆಯ ಮಧ್ಯ ಭಾಗದಲ್ಲಿರುವ ಐತಿಹಾಸಿಕ ‘ದೇವ ಕನ್ನಿಕೆಯರ ಬಾವಿ’ಯು ಸದ್ಯ ಶಿಥಿಲಾವಸ್ಥೆಯಲ್ಲಿದೆ. ಈ ಪುರಾತನ ಬಾವಿಗೆ ಸೂಕ್ತ ಸಂಪರ್ಕ ಕಲ್ಪಿಸಲು ಹಾಗೂ ಅದನ್ನು ನವೀಕರಿಸಲು ತಕ್ಷಣವೇ ಮಾರ್ಗ ಮಾಡಿಕೊಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಆಗ್ರಹಿಸಿದರು. ಬಾವಿಗೆ ಮಾರ್ಗ ಕಲ್ಪಿಸಲು ಆರ್ಥಿಕ ನೆರವನ್ನು ಸಾಣೇಹಳ್ಳಿ ಮಠದಿಂದಲೇ ಭರಿಸಲಾಗುವುದು’ ಎಂದು ತಿಳಿಸಿದರು.</p>.<p>‘ಈ ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಕ್ಕೆ ಕೇವಲ ಸರ್ಕಾರ, ಮಠ ಮಾತ್ರವಲ್ಲದೆ, ಸ್ಥಳೀಯ ಯುವಶಕ್ತಿಯೂ ಕೈಜೋಡಿಸಬೇಕಿದೆ. ಸಾಣೇಹಳ್ಳಿಯ ಯುವಕರು ಸ್ವಯಂಪ್ರೇರಿತರಾಗಿ ಬಂದು ಕೆರೆಯ ಅಭಿವೃದ್ಧಿ ಕೆಲಸಗಳಲ್ಲಿ ಶ್ರಮದಾನ ಮಾಡಬೇಕು’ ಎಂದು ಸಲಹೆ ನೀಡಿದರು.</p>.<p>ಎಂಜಿನಿಯರ್ ಉಮೇಶ್ ಸೇರಿದಂತೆ ಗ್ರಾಮಸ್ಥರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-44-353236493</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಸದುರ್ಗ: ‘ಸಾಣೇಹಳ್ಳಿ ಕೆರೆಯ ಹೂಳೆತ್ತುವ ಕಾರ್ಯವು ಭರದಿಂದ ಸಾಗಿದ್ದು, ಈಗಾಗಲೇ ಶೇ 90ರಷ್ಟು ಕೆಲಸ ಪೂರ್ಣಗೊಂಡಿದೆ. ಇನ್ನು ಒಂದು ವಾರದಲ್ಲಿ ಕಾರ್ಯ ಮುಕ್ತಾಯಗೊಳ್ಳಲಿದೆ’ ಎಂದು ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.</p>.<p>ಬುಧವಾರ ಕೆರೆಗೆ ಭೇಟಿ ನೀಡಿ, ಹೂಳೆತ್ತುವ ಕಾಮಗಾರಿ ವೀಕ್ಷಿಸಿ ಮಾತನಾಡಿದ ಅವರು, ‘ಮಳೆರಾಯ ಕೃಪೆ ತೋರಿ ಆದಷ್ಟು ಬೇಗ ಕೆರೆ ತುಂಬುವಂತಾಗಲಿ. ಇದರಿಂದ ಅಂತರ್ಜಲ ಮಟ್ಟ ವೃದ್ಧಿಸಿ, ಈ ಭಾಗದ ರೈತರ ಬಾಳು ಹಸನಾಗಲಿ’ ಎಂದು ಆಶಿಸಿದರು.</p>.<p>‘ಕೆರೆಯ ಮಧ್ಯ ಭಾಗದಲ್ಲಿರುವ ಐತಿಹಾಸಿಕ ‘ದೇವ ಕನ್ನಿಕೆಯರ ಬಾವಿ’ಯು ಸದ್ಯ ಶಿಥಿಲಾವಸ್ಥೆಯಲ್ಲಿದೆ. ಈ ಪುರಾತನ ಬಾವಿಗೆ ಸೂಕ್ತ ಸಂಪರ್ಕ ಕಲ್ಪಿಸಲು ಹಾಗೂ ಅದನ್ನು ನವೀಕರಿಸಲು ತಕ್ಷಣವೇ ಮಾರ್ಗ ಮಾಡಿಕೊಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಆಗ್ರಹಿಸಿದರು. ಬಾವಿಗೆ ಮಾರ್ಗ ಕಲ್ಪಿಸಲು ಆರ್ಥಿಕ ನೆರವನ್ನು ಸಾಣೇಹಳ್ಳಿ ಮಠದಿಂದಲೇ ಭರಿಸಲಾಗುವುದು’ ಎಂದು ತಿಳಿಸಿದರು.</p>.<p>‘ಈ ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಕ್ಕೆ ಕೇವಲ ಸರ್ಕಾರ, ಮಠ ಮಾತ್ರವಲ್ಲದೆ, ಸ್ಥಳೀಯ ಯುವಶಕ್ತಿಯೂ ಕೈಜೋಡಿಸಬೇಕಿದೆ. ಸಾಣೇಹಳ್ಳಿಯ ಯುವಕರು ಸ್ವಯಂಪ್ರೇರಿತರಾಗಿ ಬಂದು ಕೆರೆಯ ಅಭಿವೃದ್ಧಿ ಕೆಲಸಗಳಲ್ಲಿ ಶ್ರಮದಾನ ಮಾಡಬೇಕು’ ಎಂದು ಸಲಹೆ ನೀಡಿದರು.</p>.<p>ಎಂಜಿನಿಯರ್ ಉಮೇಶ್ ಸೇರಿದಂತೆ ಗ್ರಾಮಸ್ಥರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-44-353236493</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>