<p><strong>ಹೊಸದುರ್ಗ</strong>: ತಾಲ್ಲೂಕಿನ ಕಾರೇಹಳ್ಳಿ ಸಮೀಪದ ಹರಿಹರೇಶ್ವರಸ್ವಾಮಿ ದೇವಸ್ಥಾನದ ಬಾಗಿಲಿಗೆ ಬೆಂಕಿಹಚ್ಚಿ, ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿಗೆ ಚಿತ್ರದುರ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 7 ವರ್ಷ ಸಾದಾ ಶಿಕ್ಷೆ ಮತ್ತು ₹50,000 ದಂಡ ವಿಧಿಸಿ ತೀರ್ಪು ನೀಡಿದೆ. </p>.<p>2023ರ ಡಿಸೆಂಬರ್ನಲ್ಲಿ ಆರೋಪಿ ಖಲಂದರ್ ಸಾವೆಲ್ ಹುಂಡಿ ಕಳವು ಮಾಡಲು ಯತ್ನಿಸಿದ್ದ. ಅದು ಸಾಧ್ಯವಾಗದಿದ್ದಾಗ ದೇವಸ್ಥಾನದ ಮರದ ಬಾಗಿಲಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ. ಅಂದಾಜು ₹50,000 ಮೌಲ್ಯದ ಬಾಗಿಲಿಗೆ ಹಾನಿಯಾಗಿತ್ತು.</p>.<p>ಈ ಕುರಿತು ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್ಸ್ಪೆಕ್ಟರ್ ಪಿ.ಬಿ.ಮಧು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ರೋಣ ವಾಸುದೇವ್ ಅವರು ಶಿಕ್ಷೆ ಪ್ರಕಟಿಸಿದರು. </p>.<p>ಸರ್ಕಾರದ ಪರವಾಗಿ ಪ್ರಧಾನ ಸರ್ಕಾರಿ ಅಭಿಯೋಜಕ ಎಸ್.ಎಸ್.ಮಲ್ಲಯ್ಯ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸದುರ್ಗ</strong>: ತಾಲ್ಲೂಕಿನ ಕಾರೇಹಳ್ಳಿ ಸಮೀಪದ ಹರಿಹರೇಶ್ವರಸ್ವಾಮಿ ದೇವಸ್ಥಾನದ ಬಾಗಿಲಿಗೆ ಬೆಂಕಿಹಚ್ಚಿ, ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿಗೆ ಚಿತ್ರದುರ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 7 ವರ್ಷ ಸಾದಾ ಶಿಕ್ಷೆ ಮತ್ತು ₹50,000 ದಂಡ ವಿಧಿಸಿ ತೀರ್ಪು ನೀಡಿದೆ. </p>.<p>2023ರ ಡಿಸೆಂಬರ್ನಲ್ಲಿ ಆರೋಪಿ ಖಲಂದರ್ ಸಾವೆಲ್ ಹುಂಡಿ ಕಳವು ಮಾಡಲು ಯತ್ನಿಸಿದ್ದ. ಅದು ಸಾಧ್ಯವಾಗದಿದ್ದಾಗ ದೇವಸ್ಥಾನದ ಮರದ ಬಾಗಿಲಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ. ಅಂದಾಜು ₹50,000 ಮೌಲ್ಯದ ಬಾಗಿಲಿಗೆ ಹಾನಿಯಾಗಿತ್ತು.</p>.<p>ಈ ಕುರಿತು ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್ಸ್ಪೆಕ್ಟರ್ ಪಿ.ಬಿ.ಮಧು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ರೋಣ ವಾಸುದೇವ್ ಅವರು ಶಿಕ್ಷೆ ಪ್ರಕಟಿಸಿದರು. </p>.<p>ಸರ್ಕಾರದ ಪರವಾಗಿ ಪ್ರಧಾನ ಸರ್ಕಾರಿ ಅಭಿಯೋಜಕ ಎಸ್.ಎಸ್.ಮಲ್ಲಯ್ಯ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>