<p><strong>ಚಿತ್ರದುರ್ಗ</strong>: ಆಸ್ಪತ್ರೆಗೆ ದಾಖಲಾಗುವ ಒಳ ರೋಗಿಗಳ ಚಿಕಿತ್ಸಾ ವರದಿ ಆಯಾ ವಾರ್ಡ್ಗಳಲ್ಲಿ ಲಭ್ಯವಿರಬೇಕು. ಇದರಿಂದ ತುರ್ತು ಸಮಯದಲ್ಲಿ ವೈದ್ಯರು ಸಕಾಲಕ್ಕೆ ಚಿಕಿತ್ಸೆ ನೀಡಲು ಸಹಕಾರಿಯಾಗುತ್ತದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ನ್ಯಾಯಾಧೀಶ ಗಿರೀಶ್ ಸೂಚಿಸಿದರು.</p>.<p>ಇಲ್ಲಿನ ಜಿಲ್ಲಾ ಆಸ್ಪತ್ರೆಗೆ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ರೋಗಿಗಳ ಬೆಡ್ ಬಳಿ ಹಾಗೂ ವಾರ್ಡ್ನಲ್ಲಿ ಮಾಹಿತಿ ಹಾಕದಿರುವುದನ್ನು ಗಮನಿಸಿ ಗರಂ ಆದರು. ‘ಯಾವ ವಿಭಾಗದಲ್ಲಿ ಯಾವ ವೈದ್ಯರಿದ್ದಾರೆ ಎಂಬ ಬಗ್ಗೆ ನಾಮಫಲಕ ಹಾಕಬೇಕು. ಜತೆಗೆ ಎಲ್ಲಾ ರೋಗಿಗಳಿಗೆ ಸೊಳ್ಳೆಪರದೆ, ಬೆಡ್ಶೀಟ್ ವಿತರಿಸಬೇಕು’ ಎಂದು ತಿಳಿಸಿದರು.</p>.<p>‘ಆಸ್ಪತ್ರೆಯಲ್ಲಿ ರೋಗಿಗಳಗೆ ಹೊರಗಡೆಯಿಂದ ಔಷಧ ತರುವಂತೆ ಚೀಟಿ ಬರೆದುಕೊಡುತ್ತಿದ್ದಾರೆ ಎಂಬ ದೂರುಗಳು ಹೆಚ್ಚಾಗಿವೆ. ಹೊರಗಡೆ ಔಷಧ ಖರೀದಿಸಿದರೆ ಅದರ ಹಣವನ್ನು ಸರ್ಕಾರಿ ಆಸ್ಪತ್ರೆಯೇ ಭರಿಸಬೇಕು ಎಂದು ಸರ್ಕಾರ ಆದೇಶಿಸಿದೆ. ಆದರೆ ಆ ಕೆಲಸವನ್ನು ನೀವುಗಳು ಮಾಡುತ್ತಿಲ್ಲ. ಇನ್ನು ಮುಂದೆ ಹೊರಗಡೆಯಿಂದ ತರುವ ಔಷಧದ ಹಣ ಮರು ಪಾವತಿಯನ್ನು ಆಸ್ಪತ್ರೆಯಿಂದಲೇ ಮಾಡಬೇಕು’ ಎಂದು ಸೂಚಿಸಿದರು.</p>.<p>ಎಂಆರ್ಐ ಸ್ಕ್ಯಾನ್ ಸೆಂಟರ್ನಲ್ಲಿ ಒಂದು ದಿನಕ್ಕೆ 48 ಸ್ಕ್ಯಾನ್ ಮಾಡಬಹುದಾಗಿದೆ. ಆದರೂ ನೀವು ಏಕೆ ಮಾಡುತ್ತಿಲ್ಲ ಎಂದು ಪ್ರಶ್ನಿಸಿದರು. ಹೊರ ಜಿಲ್ಲೆಗಳಿಂದ ರೋಗಿಗಳು ಹೆಚ್ಚಾಗಿ ಬರುತ್ತಿರುವ ಕಾರಣ ಸಮಸ್ಯೆ ಆಗುತ್ತಿದೆ ಎಂದು ಸಿಬ್ಬಂದಿ ಪರಿಸ್ಥಿತಿ ವಿವರಿಸಿದರು.</p>.<p>‘ಜನರ ಆರೋಗ್ಯದ ರಕ್ಷಣೆಗೆ ಸರ್ಕಾರ ಕೋಟಿಗಟ್ಟಲೆ ಹಣ ವ್ಯಯಿಸುತ್ತಿದೆ. ಆದರೆ ನಿಮ್ಮ ನಿರ್ಲಕ್ಷ್ಯದಿಂದಾಗಿ ರೋಗಿಗಳಿಗೆ ಸರಿಯಾದ ಚಿಕಿತ್ಸೆ ದೊರೆಯುತ್ತಿಲ್ಲ. ಮುಂದಿನ ಭೇಟಿ ವೇಳೆಗೆ ಸೂಚಿಸಿದ ಎಲ್ಲ ಕೆಲಸಗಳು ಅಚ್ಚಕಟ್ಟಾಗಿ ಆಗಬೇಕು’ ಎಂದು ತಿಳಿಸಿದರು.</p>.<p>ಜಿಲ್ಲಾ ಸರ್ಜನ್ ಡಾ.ಬಸವರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ</strong>: ಆಸ್ಪತ್ರೆಗೆ ದಾಖಲಾಗುವ ಒಳ ರೋಗಿಗಳ ಚಿಕಿತ್ಸಾ ವರದಿ ಆಯಾ ವಾರ್ಡ್ಗಳಲ್ಲಿ ಲಭ್ಯವಿರಬೇಕು. ಇದರಿಂದ ತುರ್ತು ಸಮಯದಲ್ಲಿ ವೈದ್ಯರು ಸಕಾಲಕ್ಕೆ ಚಿಕಿತ್ಸೆ ನೀಡಲು ಸಹಕಾರಿಯಾಗುತ್ತದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ನ್ಯಾಯಾಧೀಶ ಗಿರೀಶ್ ಸೂಚಿಸಿದರು.</p>.<p>ಇಲ್ಲಿನ ಜಿಲ್ಲಾ ಆಸ್ಪತ್ರೆಗೆ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ರೋಗಿಗಳ ಬೆಡ್ ಬಳಿ ಹಾಗೂ ವಾರ್ಡ್ನಲ್ಲಿ ಮಾಹಿತಿ ಹಾಕದಿರುವುದನ್ನು ಗಮನಿಸಿ ಗರಂ ಆದರು. ‘ಯಾವ ವಿಭಾಗದಲ್ಲಿ ಯಾವ ವೈದ್ಯರಿದ್ದಾರೆ ಎಂಬ ಬಗ್ಗೆ ನಾಮಫಲಕ ಹಾಕಬೇಕು. ಜತೆಗೆ ಎಲ್ಲಾ ರೋಗಿಗಳಿಗೆ ಸೊಳ್ಳೆಪರದೆ, ಬೆಡ್ಶೀಟ್ ವಿತರಿಸಬೇಕು’ ಎಂದು ತಿಳಿಸಿದರು.</p>.<p>‘ಆಸ್ಪತ್ರೆಯಲ್ಲಿ ರೋಗಿಗಳಗೆ ಹೊರಗಡೆಯಿಂದ ಔಷಧ ತರುವಂತೆ ಚೀಟಿ ಬರೆದುಕೊಡುತ್ತಿದ್ದಾರೆ ಎಂಬ ದೂರುಗಳು ಹೆಚ್ಚಾಗಿವೆ. ಹೊರಗಡೆ ಔಷಧ ಖರೀದಿಸಿದರೆ ಅದರ ಹಣವನ್ನು ಸರ್ಕಾರಿ ಆಸ್ಪತ್ರೆಯೇ ಭರಿಸಬೇಕು ಎಂದು ಸರ್ಕಾರ ಆದೇಶಿಸಿದೆ. ಆದರೆ ಆ ಕೆಲಸವನ್ನು ನೀವುಗಳು ಮಾಡುತ್ತಿಲ್ಲ. ಇನ್ನು ಮುಂದೆ ಹೊರಗಡೆಯಿಂದ ತರುವ ಔಷಧದ ಹಣ ಮರು ಪಾವತಿಯನ್ನು ಆಸ್ಪತ್ರೆಯಿಂದಲೇ ಮಾಡಬೇಕು’ ಎಂದು ಸೂಚಿಸಿದರು.</p>.<p>ಎಂಆರ್ಐ ಸ್ಕ್ಯಾನ್ ಸೆಂಟರ್ನಲ್ಲಿ ಒಂದು ದಿನಕ್ಕೆ 48 ಸ್ಕ್ಯಾನ್ ಮಾಡಬಹುದಾಗಿದೆ. ಆದರೂ ನೀವು ಏಕೆ ಮಾಡುತ್ತಿಲ್ಲ ಎಂದು ಪ್ರಶ್ನಿಸಿದರು. ಹೊರ ಜಿಲ್ಲೆಗಳಿಂದ ರೋಗಿಗಳು ಹೆಚ್ಚಾಗಿ ಬರುತ್ತಿರುವ ಕಾರಣ ಸಮಸ್ಯೆ ಆಗುತ್ತಿದೆ ಎಂದು ಸಿಬ್ಬಂದಿ ಪರಿಸ್ಥಿತಿ ವಿವರಿಸಿದರು.</p>.<p>‘ಜನರ ಆರೋಗ್ಯದ ರಕ್ಷಣೆಗೆ ಸರ್ಕಾರ ಕೋಟಿಗಟ್ಟಲೆ ಹಣ ವ್ಯಯಿಸುತ್ತಿದೆ. ಆದರೆ ನಿಮ್ಮ ನಿರ್ಲಕ್ಷ್ಯದಿಂದಾಗಿ ರೋಗಿಗಳಿಗೆ ಸರಿಯಾದ ಚಿಕಿತ್ಸೆ ದೊರೆಯುತ್ತಿಲ್ಲ. ಮುಂದಿನ ಭೇಟಿ ವೇಳೆಗೆ ಸೂಚಿಸಿದ ಎಲ್ಲ ಕೆಲಸಗಳು ಅಚ್ಚಕಟ್ಟಾಗಿ ಆಗಬೇಕು’ ಎಂದು ತಿಳಿಸಿದರು.</p>.<p>ಜಿಲ್ಲಾ ಸರ್ಜನ್ ಡಾ.ಬಸವರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>