ಕೆಪಿಟಿಸಿಎಲ್ ಕಾರ್ಯನಿರ್ವಾಹಕ ಎಂಜಿನಿಯರ್ ಜಯ್ಯಣ್ಣ ಮಾತನಾಡಿ, ‘ಹಮಾಲರ ಮನೆಗಳಿಗೆ ಬೆಳಕು ಯೋಜನೆಯಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗುತ್ತಿದೆ. ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ಕೇಂದ್ರ ಸರ್ಕಾರದ ದೀನ್ದಯಾಳ್ ಉಪಾಧ್ಯ ಯೋಜನೆ ಮತ್ತು ಬೆಳಕು ಯೋಜನೆ ಮೂಲಕ ಮೊದಲನೇ ಹಂತದಲ್ಲಿ 54 ಮನೆಗಳಿಗೆ ಸಂಪರ್ಕ ನೀಡಲಾಗಿದೆ’ ಎಂದು ತಿಳಿಸಿದರು.