ಸಿರಿಗೆರೆ: ಸಮೀಪದ ಹೊಸಕೆರೆಗೆ ಬಿದ್ದು ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗ್ರಾಮದ ಸೌಂದರ್ಯ (21) ಆತ್ಮಹತ್ಯೆ ಮಾಡಿಕೊಂಡವರು.
ಅವರು ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ಇದರಿಂದ ನೊಂದುಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರ ತಾಯಿ ತಿಳಿಸಿದ್ದಾರೆ.
ಸ್ಥಳಕ್ಕೆ ತಹಶೀಲ್ದಾರ್ ಜಿ.ಎಚ್. ಸತ್ಯನಾರಾಯಣ್, ಭರಮಸಾಗರದ ವೃತ್ತ ನಿರೀಕ್ಷಕ ಟಿ.ಎಸ್. ಮಧು, ಪಿಎಸ್ಐ ಟಿ.ರಾಜು, ಕಾನ್ಸ್ಟೆಬಲ್ ಎನ್.ಬಿ. ಜ್ಯೋತಿ, ಸಿರಿಗೆರೆ ಪೊಲೀಸ್ ಉಪಠಾಣೆಯ ಸಿಬ್ಬಂದಿ ಹಾಗೂ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ತಿಮ್ಮೇಗೌಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.