ಚಿತ್ರದುರ್ಗ ನಗರದ ವಾರ್ಡ್ ನಂ.11, ಜಿಲ್ಲಾಸ್ಪತ್ರೆ, ತಾಲ್ಲೂಕಿನ ತೊರೆಬೈಲು, ಗೊಲ್ಲರಹಳ್ಳಿ, ಹಿರಿಯೂರು ತಾಲ್ಲೂಕಿನ ಕೂಡ್ಲಹಳ್ಳಿ, ಮರಡಿಹಳ್ಳಿ, ಹಿರಿಯೂರಿನ ವಾರ್ಡ್ ನಂ.2. ಚಳ್ಳಕೆರೆ ತಾಲ್ಲೂಕಿನ ದೊಡ್ಡಬಾದಿಹಳ್ಳಿ, ಹೊಳಲ್ಕೆರೆ ತಾಲ್ಲೂಕಿನ ತಾಳಿಕಟ್ಟೆ, ಮೊಳಕಾಲ್ಮುರು ತಾಲ್ಲೂಕಿನ ಕೊಂಡ್ಲಹಳ್ಳಿ ಹಾಗೂ ಹೊಸದುರ್ಗ ತಾಲ್ಲೂಕಿನ ಚನ್ನಸಮುದ್ರದಲ್ಲಿ ಸಮೀಕ್ಷೆಗೆ ಮಾದರಿಗಳನ್ನು ಸಂಗ್ರಹಿಸಲಾಗಿತ್ತು. ರಾಷ್ಟ್ರೀಯ ಕ್ಷಯ ರೋಗ ಸಂಶೋಧನಾ ಸಂಸ್ಥೆಯ 30 ತಜ್ಞರ ತಂಡ ಸಮೀಕ್ಷೆಯಲ್ಲಿ ಪಾಲ್ಗೊಂಡಿತ್ತು.