‘ಸಿದ್ದರಾಮಯ್ಯ ಅವರೊಬ್ಬ ನಾಯಕ ಎಂಬುದರ ಬಗ್ಗೆ ತಕಾರು ಇಲ್ಲ. ಅವರ ಬಗ್ಗೆ ಅಪಾರ ಗೌರವವಿದೆ. ಕಾಂಗ್ರೆಸ್ ಅಧಿಕಾರಕ್ಕೆ ತಂದ ಡಾ.ಜಿ.ಪರಮೇಶ್ವರ ಅವರನ್ನು ಸ್ವಜಾತಿಯವರ ನೆರವಿನಿಂದ ಕೊರಟಿಗೆರೆ ಕ್ಷೇತ್ರದಲ್ಲಿ ಸೋಲಿಸಿದರು. ಸಂಸದರಾದ ಶ್ರೀನಿವಾಸಪ್ರಸಾದ್, ಮಲ್ಲಿಕಾರ್ಜುನ ಖರ್ಗೆ, ಬಿ.ಎನ್.ಚಂದ್ರಪ್ಪ, ಆರ್.ಧ್ರುವನಾರಾಯಣ ಅವರನ್ನು ಸೋಲಿಸಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಮುಗಿಸುವ ಷಡ್ಯಂತ್ರ ಕಾಂಗ್ರೆಸ್ನಲ್ಲಿ ನಡೆಯುತ್ತಿದೆ’ ಎಂದು ಹೇಳಿದರು.