<p><strong>ಚಿತ್ರದುರ್ಗ: </strong>‘ಕೋಟ್ಪಾ ಕಾಯ್ದೆಯಡಿ ತಂಬಾಕು ಉತ್ಪನ್ನಗಳ ಮೇಲೆ ನಿರ್ದಿಷ್ಟ ಪಡಿಸಿದ ಎಚ್ಚರಿಕೆಯ ಸಂದೇಶ (ಶೇ 85) ಇಲ್ಲದ ಹಾಗೂ ಬಿಡಿಯಾಗಿ ಮಾರಾಟ ಮಾಡುವ ತಂಬಾಕು ಉತ್ಪನ್ನಗಳ ಮೇಲೆ ಎಫ್ಐಆರ್ ದಾಖಲಿಸಬೇಕು’ ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಸೂಚನೆ ನೀಡಿದರು.</p>.<p>ಜಿಲ್ಲಾಡಳಿತ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದಿಂದ ಸೋಮವಾರ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಸಮನ್ವಯ ಸಮಿತಿಯ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ತಂಬಾಕು ಉತ್ಪನ್ನ ಮತ್ತು ಮಾರಾಟ ಮಾಡುವ ಸ್ಥಳಗಳಲ್ಲಿ ಆಗಿಂದಾಗ್ಗೆ ದಾಳಿ ನಡೆಸಬೇಕು. ನಿಯಮ ಪಾಲಿಸದಿದ್ದರೆ, ಪೊಲೀಸ್ ಇಲಾಖೆ ಕ್ರಮಕ್ಕೆ ಮುಂದಾಗಬೇಕು. ವಿವಿಧ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು’ ಎಂದು ಸಲಹೆ ನೀಡಿದರು.</p>.<p>ರಾಜ್ಯ ತಂಬಾಕು ನಿಯಂತ್ರಣಕೋಶದ ವಿಭಾಗೀಯ ಸಂಯೋಜಕ ಮಹಾಂತೇಶ್, ‘ಶಿಕ್ಷಣ ಸಂಸ್ಥೆಗಳ 100 ಗಜದ ಒಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ. ಈ ಸ್ಥಳಗಳಲ್ಲಿ ತಂಬಾಕು ಮುಕ್ತವಾಗಿಸುವ ಜವಾಬ್ದಾರಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರ ಮೇಲೂ ಇದೆ. ಜತೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳು ಅಗತ್ಯ ಸಹಕಾರ ನೀಡಬೇಕು’ ಎಂದು ಮನವಿ ಮಾಡಿದರು.</p>.<p>ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿ ರಂಗನಾಥ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಂದಗಾವಿ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಪ್ರಭುದೇವ್, ನಗರಸಭೆ ಪೌರಾಯುಕ್ತ ಜೆ.ಟಿ. ಹನುಮಂತರಾಜು ಇದ್ದರು.</p>.<p class="Briefhead"><strong>ಜಾಗೃತಿ ಮೂಡಿಸಲು ಅನುಮೋದನೆ</strong></p>.<p>ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯಾಧಿಕಾರಿ ಜಂಟಿ ಖಾತೆಯಲ್ಲಿ ಒಟ್ಟು ₹ 2.8 ಲಕ್ಷ ಮೊತ್ತ ಸಂಗ್ರಹಿಸಲಾಗಿದೆ. ಈ ಹಣದಲ್ಲಿ ತಂಬಾಕು ಸೇವನೆ ದುಷ್ಪರಿಣಾಮ ಕುರಿತ ಸೆಕ್ಷನ್–4ರ ನಾಮಫಲಕಗಳನ್ನು ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಮತ್ತು ಆಸ್ಪತ್ರೆಗಳಲ್ಲಿ ಗೋಡೆ ಬರಹಗಳನ್ನು ಬರೆಸುವ ಮೂಲಕ ಜಾಗೃತಿ ಮೂಡಿಸಲು ಸಭೆ ಅನುಮೋದನೆ ನೀಡಿತು.</p>.<p>ಜನಸಂದಣಿ ಇರುವ ಸಾರ್ವಜನಿಕ ಸ್ಥಳ, ಐತಿಹಾಸಿಕ ಪ್ರದೇಶಗಳಲ್ಲೂ ತಂಬಾಕು ನಿಷೇಧ ಕುರಿತ ನಾಮಫಲಕ ಅಳವಡಿಸಬೇಕು ಎಂದು ಸಭೆ ತೀರ್ಮಾನಿಸಿತು.</p>.<p class="Briefhead"><strong>ಕ್ಯಾನ್ಸರ್ಕಾರಕ ರಾಸಾಯನಿಕಪರೀಕ್ಷೆಗೆ </strong></p>.<p>‘ಪಾನ್ಮಸಾಲದಲ್ಲಿ ಕ್ಯಾನ್ಸರ್ಕಾರಕ ರಾಸಾಯನಿಕಗಳನ್ನು ಬಳಸುತ್ತಿರುವುದು ಗಮನಕ್ಕೆ ಬಂದಿದೆ. ಆದ ಕಾರಣ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಪಾನ್ಮಸಾಲ ಉತ್ಪನ್ನ ಖರೀದಿಸಿ ನೋಯ್ಡಾ ಹಾಗೂ ದೆಹಲಿಯ ಪ್ರಯೋಗಶಾಲೆಗೆ ಪರೀಕ್ಷೆಗೆ ಕಳುಹಿಸಲಾಗಿದೆ’ ಎಂದು ಮಹಾಂತೇಶ್ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>‘ಕೋಟ್ಪಾ ಕಾಯ್ದೆಯಡಿ ತಂಬಾಕು ಉತ್ಪನ್ನಗಳ ಮೇಲೆ ನಿರ್ದಿಷ್ಟ ಪಡಿಸಿದ ಎಚ್ಚರಿಕೆಯ ಸಂದೇಶ (ಶೇ 85) ಇಲ್ಲದ ಹಾಗೂ ಬಿಡಿಯಾಗಿ ಮಾರಾಟ ಮಾಡುವ ತಂಬಾಕು ಉತ್ಪನ್ನಗಳ ಮೇಲೆ ಎಫ್ಐಆರ್ ದಾಖಲಿಸಬೇಕು’ ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಸೂಚನೆ ನೀಡಿದರು.</p>.<p>ಜಿಲ್ಲಾಡಳಿತ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದಿಂದ ಸೋಮವಾರ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಸಮನ್ವಯ ಸಮಿತಿಯ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ತಂಬಾಕು ಉತ್ಪನ್ನ ಮತ್ತು ಮಾರಾಟ ಮಾಡುವ ಸ್ಥಳಗಳಲ್ಲಿ ಆಗಿಂದಾಗ್ಗೆ ದಾಳಿ ನಡೆಸಬೇಕು. ನಿಯಮ ಪಾಲಿಸದಿದ್ದರೆ, ಪೊಲೀಸ್ ಇಲಾಖೆ ಕ್ರಮಕ್ಕೆ ಮುಂದಾಗಬೇಕು. ವಿವಿಧ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು’ ಎಂದು ಸಲಹೆ ನೀಡಿದರು.</p>.<p>ರಾಜ್ಯ ತಂಬಾಕು ನಿಯಂತ್ರಣಕೋಶದ ವಿಭಾಗೀಯ ಸಂಯೋಜಕ ಮಹಾಂತೇಶ್, ‘ಶಿಕ್ಷಣ ಸಂಸ್ಥೆಗಳ 100 ಗಜದ ಒಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ. ಈ ಸ್ಥಳಗಳಲ್ಲಿ ತಂಬಾಕು ಮುಕ್ತವಾಗಿಸುವ ಜವಾಬ್ದಾರಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರ ಮೇಲೂ ಇದೆ. ಜತೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳು ಅಗತ್ಯ ಸಹಕಾರ ನೀಡಬೇಕು’ ಎಂದು ಮನವಿ ಮಾಡಿದರು.</p>.<p>ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿ ರಂಗನಾಥ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಂದಗಾವಿ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಪ್ರಭುದೇವ್, ನಗರಸಭೆ ಪೌರಾಯುಕ್ತ ಜೆ.ಟಿ. ಹನುಮಂತರಾಜು ಇದ್ದರು.</p>.<p class="Briefhead"><strong>ಜಾಗೃತಿ ಮೂಡಿಸಲು ಅನುಮೋದನೆ</strong></p>.<p>ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯಾಧಿಕಾರಿ ಜಂಟಿ ಖಾತೆಯಲ್ಲಿ ಒಟ್ಟು ₹ 2.8 ಲಕ್ಷ ಮೊತ್ತ ಸಂಗ್ರಹಿಸಲಾಗಿದೆ. ಈ ಹಣದಲ್ಲಿ ತಂಬಾಕು ಸೇವನೆ ದುಷ್ಪರಿಣಾಮ ಕುರಿತ ಸೆಕ್ಷನ್–4ರ ನಾಮಫಲಕಗಳನ್ನು ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಮತ್ತು ಆಸ್ಪತ್ರೆಗಳಲ್ಲಿ ಗೋಡೆ ಬರಹಗಳನ್ನು ಬರೆಸುವ ಮೂಲಕ ಜಾಗೃತಿ ಮೂಡಿಸಲು ಸಭೆ ಅನುಮೋದನೆ ನೀಡಿತು.</p>.<p>ಜನಸಂದಣಿ ಇರುವ ಸಾರ್ವಜನಿಕ ಸ್ಥಳ, ಐತಿಹಾಸಿಕ ಪ್ರದೇಶಗಳಲ್ಲೂ ತಂಬಾಕು ನಿಷೇಧ ಕುರಿತ ನಾಮಫಲಕ ಅಳವಡಿಸಬೇಕು ಎಂದು ಸಭೆ ತೀರ್ಮಾನಿಸಿತು.</p>.<p class="Briefhead"><strong>ಕ್ಯಾನ್ಸರ್ಕಾರಕ ರಾಸಾಯನಿಕಪರೀಕ್ಷೆಗೆ </strong></p>.<p>‘ಪಾನ್ಮಸಾಲದಲ್ಲಿ ಕ್ಯಾನ್ಸರ್ಕಾರಕ ರಾಸಾಯನಿಕಗಳನ್ನು ಬಳಸುತ್ತಿರುವುದು ಗಮನಕ್ಕೆ ಬಂದಿದೆ. ಆದ ಕಾರಣ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಪಾನ್ಮಸಾಲ ಉತ್ಪನ್ನ ಖರೀದಿಸಿ ನೋಯ್ಡಾ ಹಾಗೂ ದೆಹಲಿಯ ಪ್ರಯೋಗಶಾಲೆಗೆ ಪರೀಕ್ಷೆಗೆ ಕಳುಹಿಸಲಾಗಿದೆ’ ಎಂದು ಮಹಾಂತೇಶ್ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>