<p>ಚಿತ್ರದುರ್ಗ: ಮತದಾನಕ್ಕೂ ಮೊದಲೇ ಚುನಾವಣೆಯಲ್ಲಿ ಗೆದ್ದಿರುವುದಾಗಿ ಹೇಳುತ್ತಿರುವ ಬಿಜೆಪಿ, ಪ್ರಚಾರ ಕಾರ್ಯ ಬಿಟ್ಟು ಮನೆಗೆ ಹೋಗಲಿ ಎಂದು ಶಾಸಕ ಡಾ.ಜಿ.ಪರಮೇಶ್ವರ ತಿರುಗೇಟು ನೀಡಿದರು.</p>.<p>ಇಲ್ಲಿನ ಯಾದವ ಮಹಾಸಂಸ್ಥಾನಕ್ಕೆ ಶನಿವಾರ ಭೇಟಿ ನೀಡಿದ್ದ ಅವರು ಶ್ರೀಕೃಷ್ಣ ಯಾದವಾನಂದ ಸ್ವಾಮೀಜಿ ಆಶೀರ್ವಾದ ಪಡೆದು ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>‘ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಪರ ಅಲೆ ಎದ್ದಿದ್ದು, ಗೆಲುವು ನಿಶ್ಚಿತ’ ಎಂಬ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆಗೆ ಪ್ರತಿಕ್ರಿಯಿಸಿದರು.</p>.<p>‘ಬಿಜೆಪಿ ಹೆಣಗಳ ಮೇಲೆ, ಕೋವಿಡ್ ಲಸಿಕೆಯ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದೆ. ಚುನಾವಣೆ ಸಂದರ್ಭದಲ್ಲಿ ಮುಗ್ಧ ಜನರ ಮನವೊಲಿಕೆಗೆ ಪ್ರಯತ್ನಿಸುತ್ತಿದೆ. ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆಯೇ ವಿನಾ ಗೂಂಡಾಗಿರಿಯಲ್ಲ. ಗೂಂಡಾಗಿರಿಯ ವಿವರಣೆಯನ್ನು ಬಿಜೆಪಿಯೇ ನೀಡಲಿ’ ಎಂದು ಹೇಳಿದರು.</p>.<p>ಮಾಜಿ ಶಾಸಕ ಕೆ.ಎನ್. ರಾಜಣ್ಣ ಮಾತನಾಡಿ, ‘ಶಿರಾದಲ್ಲಿ ಎದ್ದಿರುವುದು ಸುನಾಮಿ ಅಲೆ ಎಂದವರು ಹುಚ್ಚಾಸ್ಪತ್ರೆಯಿಂದ ಬಂದಿರಬೇಕು. ಸರ್ಕಾರದ ಯೋಜನೆಗಳನ್ನು ಜನರ ಮುಂದಿಟ್ಟು ಬಿಜೆಪಿ ಮತ ಕೇಳಲಿ. ಬಿಜೆಪಿ ನಾಯಕರು ಕೋವಿಡ್ ನೆಪದಲ್ಲಿ ದುಡ್ಡು ಮಾಡಿಕೊಂಡು ತಿರುಗಾಟ ನಡೆಸುತ್ತಿದ್ದಾರೆ’ ಎಂದು<br />ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿತ್ರದುರ್ಗ: ಮತದಾನಕ್ಕೂ ಮೊದಲೇ ಚುನಾವಣೆಯಲ್ಲಿ ಗೆದ್ದಿರುವುದಾಗಿ ಹೇಳುತ್ತಿರುವ ಬಿಜೆಪಿ, ಪ್ರಚಾರ ಕಾರ್ಯ ಬಿಟ್ಟು ಮನೆಗೆ ಹೋಗಲಿ ಎಂದು ಶಾಸಕ ಡಾ.ಜಿ.ಪರಮೇಶ್ವರ ತಿರುಗೇಟು ನೀಡಿದರು.</p>.<p>ಇಲ್ಲಿನ ಯಾದವ ಮಹಾಸಂಸ್ಥಾನಕ್ಕೆ ಶನಿವಾರ ಭೇಟಿ ನೀಡಿದ್ದ ಅವರು ಶ್ರೀಕೃಷ್ಣ ಯಾದವಾನಂದ ಸ್ವಾಮೀಜಿ ಆಶೀರ್ವಾದ ಪಡೆದು ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>‘ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಪರ ಅಲೆ ಎದ್ದಿದ್ದು, ಗೆಲುವು ನಿಶ್ಚಿತ’ ಎಂಬ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆಗೆ ಪ್ರತಿಕ್ರಿಯಿಸಿದರು.</p>.<p>‘ಬಿಜೆಪಿ ಹೆಣಗಳ ಮೇಲೆ, ಕೋವಿಡ್ ಲಸಿಕೆಯ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದೆ. ಚುನಾವಣೆ ಸಂದರ್ಭದಲ್ಲಿ ಮುಗ್ಧ ಜನರ ಮನವೊಲಿಕೆಗೆ ಪ್ರಯತ್ನಿಸುತ್ತಿದೆ. ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆಯೇ ವಿನಾ ಗೂಂಡಾಗಿರಿಯಲ್ಲ. ಗೂಂಡಾಗಿರಿಯ ವಿವರಣೆಯನ್ನು ಬಿಜೆಪಿಯೇ ನೀಡಲಿ’ ಎಂದು ಹೇಳಿದರು.</p>.<p>ಮಾಜಿ ಶಾಸಕ ಕೆ.ಎನ್. ರಾಜಣ್ಣ ಮಾತನಾಡಿ, ‘ಶಿರಾದಲ್ಲಿ ಎದ್ದಿರುವುದು ಸುನಾಮಿ ಅಲೆ ಎಂದವರು ಹುಚ್ಚಾಸ್ಪತ್ರೆಯಿಂದ ಬಂದಿರಬೇಕು. ಸರ್ಕಾರದ ಯೋಜನೆಗಳನ್ನು ಜನರ ಮುಂದಿಟ್ಟು ಬಿಜೆಪಿ ಮತ ಕೇಳಲಿ. ಬಿಜೆಪಿ ನಾಯಕರು ಕೋವಿಡ್ ನೆಪದಲ್ಲಿ ದುಡ್ಡು ಮಾಡಿಕೊಂಡು ತಿರುಗಾಟ ನಡೆಸುತ್ತಿದ್ದಾರೆ’ ಎಂದು<br />ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>