15–20 ವರ್ಷಗಳ ಹಿಂದೆ ಆಂಧ್ರಪ್ರದೇಶದ ಮಡಕಶಿರಾ ತಾಲ್ಲೂಕಿನಲ್ಲಿ ನಕ್ಸಲರ ಚಟುವಟಿಕೆ ಕ್ರಿಯಾಶೀಲವಾಗಿದ್ದ ಸಂದರ್ಭದಲ್ಲಿ ಧರ್ಮಪುರ ಹೋಬಳಿಯ ಖಂಡೇನ
ಹಳ್ಳಿ, ಹಲಗಲದ್ದಿ, ಮದ್ದಿಹಳ್ಳಿ, ಧರ್ಮಪುರ, ಹೊಸಕೆರೆ ಮತ್ತಿತರ ಗಡಿ ಗ್ರಾಮಗಳು ಅವರ ವಾಸಸ್ಥಾನ
ವಾಗಿದ್ದವು. ಅದಕ್ಕಾಗಿ ಪೊಲೀಸ್ ಇಲಾಖೆ ಸದಾ ಗಸ್ತು ನಡೆಸುತ್ತಿತ್ತು. ಆಗ ಮೊಬೈಲ್ ಬಳಕೆ ಬಹಳ ಕಡಿಮೆ ಇತ್ತು. ಹೀಗಾಗಿ ಡಿ.ಮಂಜುನಾಥ್ ಸಚಿವರಾಗಿದ್ದ ಸಂದರ್ಭದಲ್ಲಿ ಬಿಎಸ್ಎನ್ಎಲ್ ದೂರವಾಣಿ ಸಂಪರ್ಕ ಕೇಂದ್ರದ ಕಟ್ಟಡ ನಿರ್ಮಿಸಲು ಅನುದಾನ ಕಲ್ಪಿಸಿಕೊಟ್ಟಿದ್ದರು. ಕೋಟ್ಯಂತರ ರೂಪಾಯಿ ವೆಚ್ಚದ ಟವರ್ ಮತ್ತು ಕಟ್ಟಡ ನಿರ್ಮಾಣಗೊಂಡವು. ಆದರೆ, ಕಟ್ಟಡ ಇಲಾಖೆಗೆ ಹಸ್ತಾಂತರವಾಗದೇ ಇಂದು ಪಾಳು ಬಿದ್ದಿದೆ.