<p><strong>ಮೊಳಕಾಲ್ಮುರು: ‘</strong>ಮರಳು ಅಕ್ರಮ ದಂಧೆ ತಡೆಯುವುದು ಎಲ್ಲಾ ಇಲಾಖೆಗಳ ಹೊಣೆಯಾಗಿದ್ದು, ನುಣಿಚಿಕೊಳ್ಳದಂತೆ ಎಚ್ಚರ ವಹಿಸಬೇಕು’ ಎಂದು ಜಿಲ್ಲಾ ಉಪ ವಿಭಾಗಾಧಿಕಾರಿ ಮಹಿಬೂಬ್ ಜಿಲಾನ್ ಖುರೇಷಿ ಹೇಳಿದರು.</p>.<p>ತಾಲ್ಲೂಕು ಕಚೇರಿಯಲ್ಲಿ ಬುಧವಾರ ನಡೆದ ಮರಳು ತಾಲ್ಲೂಕು ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>‘ಮರಳು ಅಕ್ರಮ ಸಾಗಣೆ ತಡೆಯುವುದು ಬರೀ ಕಂದಾಯ ಇಲಾಖೆ ಹೊಣೆ ಎಂಬ ಭಾವನೆ ಸರಿಯಲ್ಲ. ಸಮಿತಿಯಲ್ಲಿರುವ ಅರಣ್ಯ, ಲೋಕೋಪಯೋಗಿ, ಸಾರಿಗೆ, ಗ್ರಾಮ ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಕ್ರಮ ಕೈಗೊಳ್ಳಬಹುದಾಗಿದೆ. ಯಾವುದೇ ಕಾರಣಕ್ಕೂ ಅಕ್ರಮಕ್ಕೆ ಅವಕಾಶ ಕೊಡಬಾರದು’ ಎಂದರು.</p>.<p>ತಾಲ್ಲೂಕಿನಲ್ಲಿ 8 ಅನುಮತಿ ನೀಡಿರುವ ಮರಳು ಪಾಯಿಂಟ್ಗಳು ಇವೆ. ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಮಾಹಿತಿ ಮೇರೆಗೆ 3 ತಿಂಗಳಲ್ಲಿ 26 ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.</p>.<p>ತಹಶೀಲ್ದಾರ್ ನಾಗವೇಣಿ, ತಾ.ಪಂ. ಇಒ ಎಚ್. ಹನುಮಂತಪ್ಪ, ಸಣ್ಣ ನೀರಾವರಿಯ ಮಂಜಪ್ಪ, ಲೋಕೋಪಯೋಗಿ ಇಲಾಖೆಯ ಲಕ್ಷ್ಮೀನಾರಾಯಣ್, ಸಾರಿಗೆ ಇಲಾಖೆಯ ಪ್ರಕಾಶ್ ಹಾಗೂ ಪಿಡಿಒಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೊಳಕಾಲ್ಮುರು: ‘</strong>ಮರಳು ಅಕ್ರಮ ದಂಧೆ ತಡೆಯುವುದು ಎಲ್ಲಾ ಇಲಾಖೆಗಳ ಹೊಣೆಯಾಗಿದ್ದು, ನುಣಿಚಿಕೊಳ್ಳದಂತೆ ಎಚ್ಚರ ವಹಿಸಬೇಕು’ ಎಂದು ಜಿಲ್ಲಾ ಉಪ ವಿಭಾಗಾಧಿಕಾರಿ ಮಹಿಬೂಬ್ ಜಿಲಾನ್ ಖುರೇಷಿ ಹೇಳಿದರು.</p>.<p>ತಾಲ್ಲೂಕು ಕಚೇರಿಯಲ್ಲಿ ಬುಧವಾರ ನಡೆದ ಮರಳು ತಾಲ್ಲೂಕು ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>‘ಮರಳು ಅಕ್ರಮ ಸಾಗಣೆ ತಡೆಯುವುದು ಬರೀ ಕಂದಾಯ ಇಲಾಖೆ ಹೊಣೆ ಎಂಬ ಭಾವನೆ ಸರಿಯಲ್ಲ. ಸಮಿತಿಯಲ್ಲಿರುವ ಅರಣ್ಯ, ಲೋಕೋಪಯೋಗಿ, ಸಾರಿಗೆ, ಗ್ರಾಮ ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಕ್ರಮ ಕೈಗೊಳ್ಳಬಹುದಾಗಿದೆ. ಯಾವುದೇ ಕಾರಣಕ್ಕೂ ಅಕ್ರಮಕ್ಕೆ ಅವಕಾಶ ಕೊಡಬಾರದು’ ಎಂದರು.</p>.<p>ತಾಲ್ಲೂಕಿನಲ್ಲಿ 8 ಅನುಮತಿ ನೀಡಿರುವ ಮರಳು ಪಾಯಿಂಟ್ಗಳು ಇವೆ. ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಮಾಹಿತಿ ಮೇರೆಗೆ 3 ತಿಂಗಳಲ್ಲಿ 26 ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.</p>.<p>ತಹಶೀಲ್ದಾರ್ ನಾಗವೇಣಿ, ತಾ.ಪಂ. ಇಒ ಎಚ್. ಹನುಮಂತಪ್ಪ, ಸಣ್ಣ ನೀರಾವರಿಯ ಮಂಜಪ್ಪ, ಲೋಕೋಪಯೋಗಿ ಇಲಾಖೆಯ ಲಕ್ಷ್ಮೀನಾರಾಯಣ್, ಸಾರಿಗೆ ಇಲಾಖೆಯ ಪ್ರಕಾಶ್ ಹಾಗೂ ಪಿಡಿಒಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>