<p><strong>ಚಿತ್ರದುರ್ಗ:</strong> ಒಳ ಮೀಸಲಾತಿ ಜಾರಿಗೆ ರಾಜ್ಯದಲ್ಲಿ ನಡೆಯುತ್ತಿರುವ ಸಮೀಕ್ಷೆ ಕಾರ್ಯದಲ್ಲಿ 1.4 ಕೋಟಿ ಜನರು ಪಾಲ್ಗೊಂಡಿದ್ದಾರೆ. ಆಯೋಗ ವರದಿ ನೀಡುತ್ತಿದ್ದಂತೆ ಸಚಿವ ಸಂಪುಟದಲ್ಲಿ ಮಂಡಿಸಿ ಒಪ್ಪಿಗೆ ಪಡೆದು, ಜೂನ್ ಅಂತ್ಯದೊಳಗೆ ಒಳಮೀಸಲಾತಿ ಜಾರಿಗೊಳಿಸಬೇಕು’ ಎಂದು ಮಾಜಿ ಸಚಿವ ಎಚ್.ಆಂಜನೇಯ ಒತ್ತಾಯಿಸಿದರು.</p>.<p>‘ರಾಜ್ಯದಲ್ಲಿ ಕೈಗೊಂಡಿರುವ ಸರ್ವೇ ಕಾರ್ಯದ ಅವಧಿಯನ್ನು ಪುನಃ ವಿಸ್ತರಿಸಲಾಗಿದೆ. ಈ ಬಗ್ಗೆ ಸಾಕಷ್ಟು ಜಾಗೃತಿ ಮೂಡಿಸಿದರು ಸಹ ಬಹಳಷ್ಟು ಜನ ಹೊರಗುಳಿದಿದ್ದಾರೆ. ಜೂ.8ರ ವರೆಗೆ ವಿಸ್ತರಿಸಿದ್ದು, ಈ ಅವಧಿಯೊಳಗೆ ಪ್ರತಿಯೊಬ್ಬರೂ ನೋಂದಣಿ ಮಾಡಿಕೊಳ್ಳಬೇಕು’ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.</p>.<p>‘ಮೇ 5ರಂದು ಆರಂಭಗೊಂಡ ಸಮೀಕ್ಷೆ ಆರಂಭದಲ್ಲಿ ಕುಂಟುತ್ತಾ, ಬಳಿಕ ವೇಗ ಪಡೆದುಕೊಂಡಿದೆ. ಆದರೆ, ಬೆಂಗಳೂರು ಪ್ರದೇಶದಲ್ಲಿ ಬಹಳಷ್ಟು ಮಂದಗತಿಯಲ್ಲಿ ಸಾಗುತ್ತಿದೆ. ಈ ಪ್ರದೇಶದಲ್ಲಿ ಹೆಚ್ಚು ಜಾಗೃತಿ ಜೊತೆಗೆ ಗಣತಿದಾರರು ಶ್ರಮವಹಿಸಿ ಬದ್ಧತೆಯಿಂದ ಕಾರ್ಯನಿರ್ವಹಿಸಬೇಕಿದೆ’ ಎಂದರು.</p>.<p>‘ಒಳಮೀಸಲಾತಿ ಜಾರಿ ಬಳಿಕ ಆದಿ ಕರ್ನಾಟಕ, ಆದಿ ದ್ರಾವಿಡ, ಆದಿಆಂಧ್ರ ಪದಗಳೇ ಇರುವುದಿಲ್ಲ. ಆಗ ಮೂಲ ಜಾತಿ ಆಧಾರದ ಮೇಲೆ ಮೀಸಲಾತಿ ದೊರೆಯಲಿದೆ. ಆದ್ದರಿಂದ ಜಾತಿಗಣತಿ ಸಮೀಕ್ಷೆ ಮಹತ್ವದ ಕಾಲಘಟ್ಟವಾಗಿದ್ದು, ಇದರಲ್ಲಿ ಪಾಲ್ಗೊಳ್ಳುವ ಮೂಲಕ ಮೀಸಲು ಹಕ್ಕು ಪಡೆದುಕೊಳ್ಳಬೇಕು’ ಎಂದು ತಿಳಿಸಿದರು.</p>.<p>‘ಬೆಂಗಳೂರಿನ ಬಹಳಷ್ಟು ಕೊಳಚೆ ಪ್ರದೇಶದಲ್ಲಿ ಕೂಲಿಗಾರರೇ ಹೆಚ್ಚಾಗಿದ್ದಾರೆ. ಗಣತಿದಾರರು ಮನೆ ಬಾಗಿಲಿಗೆ ಬರುವ ವೇಳೆಗೆ ಕೆಲಸಕ್ಕೆ ಹೋಗಿರುತ್ತಾರೆ, ಇನ್ನೂ ಪ್ರತಿಷ್ಠಿತ ಬಡಾವಣೆಗಳಲ್ಲಿ ಸಾಮಾಜಿಕ ಸಮಸ್ಯೆ ಕಾರಣಕ್ಕೆ ನೋಂದಣಿ ಕಾರ್ಯದಲ್ಲಿ ಪಾಲ್ಗೊಳ್ಳುತ್ತಿಲ್ಲ. ಈ ಎಲ್ಲ ಸಮಸ್ಯೆಗಳನ್ನು ಸಮರ್ಥವಾಗಿ ನಿಭಾಯಿಸಬೇಕಿದೆ’ ಎಂದರು.</p>.<p>‘ಕೆಲ ಪಡಿತರ ಚೀಟಿಯಲ್ಲಿ ಪರಿಶಿಷ್ಟ ಜಾತಿ ಅವರನ್ನು ಪರಿಶಿಷ್ಟ ಪಂಗಡ ಎಂದು ನಮೂದಿಸಿರುವುದು ಕೂಡ ಸಮಸ್ಯೆ ಆಗಿದೆ. ಈ ಸಂಬಂಧ ಆಯೋಗಕ್ಕೆ ದೂರು ನೀಡಿದ್ದು, ತಕ್ಷಣ ಸರಿಪಡಿಸುವುದಾಗಿ ಭರವಸೆ ನೀಡಿದ್ದಾರೆ. ಜೊತೆಗೆ ಇಂತಹ ಪ್ರಕರಣಗಳ ಕುರಿತು ಸ್ಥಳೀಯವಾಗಿ ಸಮಾಜ ಕಲ್ಯಾಣ ಇಲಾಖೆಗೆ ದೂರು ನೀಡುತ್ತಿದ್ದಂತೆ ಅವರೇ ಸಮಸ್ಯೆ ಪರಿಹರಿಸಲಿದ್ದಾರೆ’ ಎಂದು ತಿಳಿಸಿದರು.</p>.<p>‘ಸರ್ಕಾರದ 36 ಇಲಾಖೆ ಹಾಗೂ ವಿಶ್ವವಿದ್ಯಾಲಯ ಸೇರಿ ಅನೇಕ ಅಂಗ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ ಜಾತಿವಾರು ಮಾಹಿತಿಯನ್ನು ನಾಗಮೋಹನ್ ದಾಸ್ ಆಯೋಗ, ಸರ್ಕಾರ ಕೇಳಿದ್ದರೂ ಈವರೆಗೂ ಮಾಹಿತಿ ನೀಡಿಲ್ಲ. ಈ ಸಂಬಂಧ ತಕ್ಷಣ ಅಂತಹ ಅಧಿಕಾರಿಗಳ ಮೇಲೆ ಶಿಸ್ತುಕ್ರಮ ಕೈಗೊಳ್ಳಲು ನೋಟಿಸ್ ಜಾರಿ ಮಾಡಬೇಕು. ಆಗ ಮಾತ್ರ ಸ್ಪಷ್ಟ ಮಾಹಿತಿ ದೊರೆಯಲಿದೆ’ ಎಂದು ಹೇಳಿದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷ ಆರ್.ಉಮೇಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಬಿ.ಪಿ.ಪ್ರಕಾಶಮೂರ್ತಿ, ನರಸಿಂಹರಾಜು, ಲಿಡ್ಕರ್ ಮಾಜಿ ಅಧ್ಯಕ್ಷ ಓ.ಶಂಕರ್, ಮುಖಂಡರಾದ ದೇವರಾಜ್, ಹನುಮಂತಪ್ಪ, ರವೀಂದ್ರ, ಶರಣಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ಒಳ ಮೀಸಲಾತಿ ಜಾರಿಗೆ ರಾಜ್ಯದಲ್ಲಿ ನಡೆಯುತ್ತಿರುವ ಸಮೀಕ್ಷೆ ಕಾರ್ಯದಲ್ಲಿ 1.4 ಕೋಟಿ ಜನರು ಪಾಲ್ಗೊಂಡಿದ್ದಾರೆ. ಆಯೋಗ ವರದಿ ನೀಡುತ್ತಿದ್ದಂತೆ ಸಚಿವ ಸಂಪುಟದಲ್ಲಿ ಮಂಡಿಸಿ ಒಪ್ಪಿಗೆ ಪಡೆದು, ಜೂನ್ ಅಂತ್ಯದೊಳಗೆ ಒಳಮೀಸಲಾತಿ ಜಾರಿಗೊಳಿಸಬೇಕು’ ಎಂದು ಮಾಜಿ ಸಚಿವ ಎಚ್.ಆಂಜನೇಯ ಒತ್ತಾಯಿಸಿದರು.</p>.<p>‘ರಾಜ್ಯದಲ್ಲಿ ಕೈಗೊಂಡಿರುವ ಸರ್ವೇ ಕಾರ್ಯದ ಅವಧಿಯನ್ನು ಪುನಃ ವಿಸ್ತರಿಸಲಾಗಿದೆ. ಈ ಬಗ್ಗೆ ಸಾಕಷ್ಟು ಜಾಗೃತಿ ಮೂಡಿಸಿದರು ಸಹ ಬಹಳಷ್ಟು ಜನ ಹೊರಗುಳಿದಿದ್ದಾರೆ. ಜೂ.8ರ ವರೆಗೆ ವಿಸ್ತರಿಸಿದ್ದು, ಈ ಅವಧಿಯೊಳಗೆ ಪ್ರತಿಯೊಬ್ಬರೂ ನೋಂದಣಿ ಮಾಡಿಕೊಳ್ಳಬೇಕು’ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.</p>.<p>‘ಮೇ 5ರಂದು ಆರಂಭಗೊಂಡ ಸಮೀಕ್ಷೆ ಆರಂಭದಲ್ಲಿ ಕುಂಟುತ್ತಾ, ಬಳಿಕ ವೇಗ ಪಡೆದುಕೊಂಡಿದೆ. ಆದರೆ, ಬೆಂಗಳೂರು ಪ್ರದೇಶದಲ್ಲಿ ಬಹಳಷ್ಟು ಮಂದಗತಿಯಲ್ಲಿ ಸಾಗುತ್ತಿದೆ. ಈ ಪ್ರದೇಶದಲ್ಲಿ ಹೆಚ್ಚು ಜಾಗೃತಿ ಜೊತೆಗೆ ಗಣತಿದಾರರು ಶ್ರಮವಹಿಸಿ ಬದ್ಧತೆಯಿಂದ ಕಾರ್ಯನಿರ್ವಹಿಸಬೇಕಿದೆ’ ಎಂದರು.</p>.<p>‘ಒಳಮೀಸಲಾತಿ ಜಾರಿ ಬಳಿಕ ಆದಿ ಕರ್ನಾಟಕ, ಆದಿ ದ್ರಾವಿಡ, ಆದಿಆಂಧ್ರ ಪದಗಳೇ ಇರುವುದಿಲ್ಲ. ಆಗ ಮೂಲ ಜಾತಿ ಆಧಾರದ ಮೇಲೆ ಮೀಸಲಾತಿ ದೊರೆಯಲಿದೆ. ಆದ್ದರಿಂದ ಜಾತಿಗಣತಿ ಸಮೀಕ್ಷೆ ಮಹತ್ವದ ಕಾಲಘಟ್ಟವಾಗಿದ್ದು, ಇದರಲ್ಲಿ ಪಾಲ್ಗೊಳ್ಳುವ ಮೂಲಕ ಮೀಸಲು ಹಕ್ಕು ಪಡೆದುಕೊಳ್ಳಬೇಕು’ ಎಂದು ತಿಳಿಸಿದರು.</p>.<p>‘ಬೆಂಗಳೂರಿನ ಬಹಳಷ್ಟು ಕೊಳಚೆ ಪ್ರದೇಶದಲ್ಲಿ ಕೂಲಿಗಾರರೇ ಹೆಚ್ಚಾಗಿದ್ದಾರೆ. ಗಣತಿದಾರರು ಮನೆ ಬಾಗಿಲಿಗೆ ಬರುವ ವೇಳೆಗೆ ಕೆಲಸಕ್ಕೆ ಹೋಗಿರುತ್ತಾರೆ, ಇನ್ನೂ ಪ್ರತಿಷ್ಠಿತ ಬಡಾವಣೆಗಳಲ್ಲಿ ಸಾಮಾಜಿಕ ಸಮಸ್ಯೆ ಕಾರಣಕ್ಕೆ ನೋಂದಣಿ ಕಾರ್ಯದಲ್ಲಿ ಪಾಲ್ಗೊಳ್ಳುತ್ತಿಲ್ಲ. ಈ ಎಲ್ಲ ಸಮಸ್ಯೆಗಳನ್ನು ಸಮರ್ಥವಾಗಿ ನಿಭಾಯಿಸಬೇಕಿದೆ’ ಎಂದರು.</p>.<p>‘ಕೆಲ ಪಡಿತರ ಚೀಟಿಯಲ್ಲಿ ಪರಿಶಿಷ್ಟ ಜಾತಿ ಅವರನ್ನು ಪರಿಶಿಷ್ಟ ಪಂಗಡ ಎಂದು ನಮೂದಿಸಿರುವುದು ಕೂಡ ಸಮಸ್ಯೆ ಆಗಿದೆ. ಈ ಸಂಬಂಧ ಆಯೋಗಕ್ಕೆ ದೂರು ನೀಡಿದ್ದು, ತಕ್ಷಣ ಸರಿಪಡಿಸುವುದಾಗಿ ಭರವಸೆ ನೀಡಿದ್ದಾರೆ. ಜೊತೆಗೆ ಇಂತಹ ಪ್ರಕರಣಗಳ ಕುರಿತು ಸ್ಥಳೀಯವಾಗಿ ಸಮಾಜ ಕಲ್ಯಾಣ ಇಲಾಖೆಗೆ ದೂರು ನೀಡುತ್ತಿದ್ದಂತೆ ಅವರೇ ಸಮಸ್ಯೆ ಪರಿಹರಿಸಲಿದ್ದಾರೆ’ ಎಂದು ತಿಳಿಸಿದರು.</p>.<p>‘ಸರ್ಕಾರದ 36 ಇಲಾಖೆ ಹಾಗೂ ವಿಶ್ವವಿದ್ಯಾಲಯ ಸೇರಿ ಅನೇಕ ಅಂಗ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ ಜಾತಿವಾರು ಮಾಹಿತಿಯನ್ನು ನಾಗಮೋಹನ್ ದಾಸ್ ಆಯೋಗ, ಸರ್ಕಾರ ಕೇಳಿದ್ದರೂ ಈವರೆಗೂ ಮಾಹಿತಿ ನೀಡಿಲ್ಲ. ಈ ಸಂಬಂಧ ತಕ್ಷಣ ಅಂತಹ ಅಧಿಕಾರಿಗಳ ಮೇಲೆ ಶಿಸ್ತುಕ್ರಮ ಕೈಗೊಳ್ಳಲು ನೋಟಿಸ್ ಜಾರಿ ಮಾಡಬೇಕು. ಆಗ ಮಾತ್ರ ಸ್ಪಷ್ಟ ಮಾಹಿತಿ ದೊರೆಯಲಿದೆ’ ಎಂದು ಹೇಳಿದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷ ಆರ್.ಉಮೇಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಬಿ.ಪಿ.ಪ್ರಕಾಶಮೂರ್ತಿ, ನರಸಿಂಹರಾಜು, ಲಿಡ್ಕರ್ ಮಾಜಿ ಅಧ್ಯಕ್ಷ ಓ.ಶಂಕರ್, ಮುಖಂಡರಾದ ದೇವರಾಜ್, ಹನುಮಂತಪ್ಪ, ರವೀಂದ್ರ, ಶರಣಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>