<p><strong>ಹೊಳಲ್ಕೆರೆ:</strong> ಮುಂದಿನ ವರ್ಷದಿಂದ ರಾಜ್ಯದಲ್ಲಿ ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಜಾರಿ ಮಾಡಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಡಿ.ಟಿ.ಶ್ರೀನಿವಾಸ್ ಭರವಸೆ ನೀಡಿದರು.</p>.<p>ಪಟ್ಟಣದಲ್ಲಿ ಶುಕ್ರವಾರ ನಡೆದ ಶಿಕ್ಷಕರ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಚುನಾವಣೆಗೆ ಮುನ್ನ ನೀಡಿದ ಭರವಸೆಗಳನ್ನು ಈಡೇರಿಸುವ ಕಾರ್ಯಕ್ಕೆ ಮುಂದಾಗಿದ್ದೇನೆ. 28 ವರ್ಷ ಆಗದ ಕೆಲಸಗಳಿಗೆ ಕೇವಲ 3 ತಿಂಗಳಲ್ಲಿ ಚುರುಕು ನೀಡಿದ್ದೇನೆ. ಶಿಕ್ಷಕರ ಪ್ರಮುಖ ಬೇಡಿಕೆಯಾಗಿರುವ ಹಳೆಯ ಪಿಂಚಣಿ ಯೋಜನೆ ಜಾರಿ ಬಗ್ಗೆ ಮುಖ್ಯಮಂತ್ರಿ ಜತೆ ಚರ್ಚಿಸಿದ್ದು, ಅವರ ಆದೇಶದಂತೆ ಈಗ ಪೂರ್ಣ ಪ್ರಮಾಣದ ಸಮಿತಿ ರಚನೆ ಆಗಿದೆ. ಗ್ಯಾರಂಟಿ ಯೋಜನೆಗೆ ಹೆಚ್ಚು ಹಣ ಬೇಕಾಗಿರುವುದರಿಂದ ಈ ವರ್ಷ ಒಪಿಎಸ್ ಜಾರಿ ಕಷ್ಟ. ಮುಂದಿನ ವರ್ಷ ಹಣಕಾಸು ಲಭ್ಯತೆ ನೋಡಿಕೊಂಡು ಯೋಜನೆ ಜಾರಿಗೊಳಿಸಲಾಗುವುದು’ ಎಂದರು.</p>.<p>ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಸೌಲಭ್ಯಗಳನ್ನು ಜಾರಿಗೊಳಿಸಲಾಗಿದೆ. ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಮುಂದಾಗಿದೆ. ಇದರಿಂದ ಸರ್ಕಾರಕ್ಕೆ ₹430 ಕೋಟಿ ಹೊರೆ ಆಗುತ್ತಿದ್ದರೂ, ಮುಖ್ಯಮಂತ್ರಿ ಒಪ್ಪಿಗೆ ನೀಡಿದ್ದಾರೆ. ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಿ ಆ್ಯಂಡ್ ಆರ್ ನಿಯಮ ತಿದ್ದುಪಡಿಗೂ ಮುಖ್ಯಮಂತ್ರಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಶ್ರೀನಿವಾಸ್ ತಿಳಿಸಿದರು.</p>.<p>ಖಾಸಗಿ ಹಾಗೂ ಅನುದಾನಿತ ಶಾಲೆಗಳನ್ನು ಪ್ರತೀ ವರ್ಷ ನವೀಕರಣ ಮಾಡಬೇಕೆಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಇದಲ್ಲದೆ ಸರ್ಕಾರಿ ಶಾಲೆ ಹೊರತುಪಡಿಸಿ ಖಾಸಗಿ ಶಾಲೆಗಳು 5 ಸುರಕ್ಷಾ ನಿಯಮಗಳನ್ನು ಅಳವಡಿಸಿಕೊಳ್ಳಬೇಕೆಂದು ಸೂಚಿಸಲಾಗಿದೆ. ಇದರಿಂದ ಖಾಸಗಿ ಶಾಲೆಗಳು ಸಂಕಷ್ಟಕ್ಕೆ ಸಿಲುಕಿವೆ. 40–50 ವರ್ಷದಿಂದ ಶಾಲೆ ನಡೆಸಿಕೊಂಡು ಬರುತ್ತಿರುವವರಿಗೆ ಸಮಸ್ಯೆ ಆಗಿದೆ. ನ್ಯಾಯಾಲಯ 5 ವರ್ಷಕ್ಕೊಮ್ಮೆ ನವೀಕರಣ ಮಾಡಿಸಬಹುದು ಎಂದು ತೀರ್ಪು ನೀಡಿದ್ದರೂ, ಅದು ಪಾಲನೆ ಆಗುತ್ತಿಲ್ಲ. ಲೋಕೋಪಯೋಗಿ ಹಾಗೂ ಶಿಕ್ಷಣ ಇಲಾಖೆಗಳಿಂದ ಪ್ರತೀ ವರ್ಷ ಪ್ರಮಾಣ ಪತ್ರ ಪಡೆಯಬೇಕಾಗಿದ್ದು, ಅಲ್ಲಿನ ಅಧಿಕಾರಿಗಳು ಲಂಚ ಕೊಟ್ಟವರಿಗೆ ಮಾತ್ರ ಪ್ರಮಾಣ ಪತ್ರ ಕೊಡುತ್ತಿದ್ದಾರೆ. ಈ ನಿಯಮದಿಂದ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ದೂರಿದರು.</p>.<p>ತಹಶೀಲ್ದಾರ್ ಬೀಬಿ ಫಾತಿಮಾ, ಪುರಸಭೆ ಸದಸ್ಯ ಕೆ.ಸಿ.ರಮೇಶ್, ಬಿ.ಗಂಗಾಧರ್, ಬಿಸಿಎಂ ಕಲ್ಯಾಣಾಧಿಕಾರಿ ಪ್ರದೀಪ್ ಕುಮಾರ್, ಎ.ಜಯಪ್ಪ, ರಶೀದ್, ದೇವರಾಜ್, ಚಂದ್ರ ನಾಯ್ಕ್, ತಿಮ್ಮೇಶ್, ಕಿರಣ್, ವೀರೇಶ್, ಮನೋಹರ್, ಚಂದ್ರಶೇಖರ್, ರಂಗಸ್ವಾಮಿ, ಕಾಂತರಾಜು, ರವಿ, ಶಿವಣ್ಣ, ಕರಿಸಿದ್ದಪ್ಪ, ಜಗದೀಶ್, ರಮೇಶ್ ಇದ್ದರು.</p>.<div><blockquote>ಚಿತ್ರದುರ್ಗ ಹಾಗೂ ದಾವಣಗೆರೆಯಲ್ಲಿ ಶೀಘ್ರವೇ ಕಚೇರಿ ಆರಂಭಿಸಲಾಗುವುದು. ಶಿಕ್ಷಕರು ಯಾವುದೇ ಸಮಸ್ಯೆ ಇದ್ದರೂ ನನ್ನನ್ನು ಭೇಟಿ ಮಾಡಬಹುದು. </blockquote><span class="attribution">-ಡಿ.ಟಿ.ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಳಲ್ಕೆರೆ:</strong> ಮುಂದಿನ ವರ್ಷದಿಂದ ರಾಜ್ಯದಲ್ಲಿ ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಜಾರಿ ಮಾಡಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಡಿ.ಟಿ.ಶ್ರೀನಿವಾಸ್ ಭರವಸೆ ನೀಡಿದರು.</p>.<p>ಪಟ್ಟಣದಲ್ಲಿ ಶುಕ್ರವಾರ ನಡೆದ ಶಿಕ್ಷಕರ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಚುನಾವಣೆಗೆ ಮುನ್ನ ನೀಡಿದ ಭರವಸೆಗಳನ್ನು ಈಡೇರಿಸುವ ಕಾರ್ಯಕ್ಕೆ ಮುಂದಾಗಿದ್ದೇನೆ. 28 ವರ್ಷ ಆಗದ ಕೆಲಸಗಳಿಗೆ ಕೇವಲ 3 ತಿಂಗಳಲ್ಲಿ ಚುರುಕು ನೀಡಿದ್ದೇನೆ. ಶಿಕ್ಷಕರ ಪ್ರಮುಖ ಬೇಡಿಕೆಯಾಗಿರುವ ಹಳೆಯ ಪಿಂಚಣಿ ಯೋಜನೆ ಜಾರಿ ಬಗ್ಗೆ ಮುಖ್ಯಮಂತ್ರಿ ಜತೆ ಚರ್ಚಿಸಿದ್ದು, ಅವರ ಆದೇಶದಂತೆ ಈಗ ಪೂರ್ಣ ಪ್ರಮಾಣದ ಸಮಿತಿ ರಚನೆ ಆಗಿದೆ. ಗ್ಯಾರಂಟಿ ಯೋಜನೆಗೆ ಹೆಚ್ಚು ಹಣ ಬೇಕಾಗಿರುವುದರಿಂದ ಈ ವರ್ಷ ಒಪಿಎಸ್ ಜಾರಿ ಕಷ್ಟ. ಮುಂದಿನ ವರ್ಷ ಹಣಕಾಸು ಲಭ್ಯತೆ ನೋಡಿಕೊಂಡು ಯೋಜನೆ ಜಾರಿಗೊಳಿಸಲಾಗುವುದು’ ಎಂದರು.</p>.<p>ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಸೌಲಭ್ಯಗಳನ್ನು ಜಾರಿಗೊಳಿಸಲಾಗಿದೆ. ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಮುಂದಾಗಿದೆ. ಇದರಿಂದ ಸರ್ಕಾರಕ್ಕೆ ₹430 ಕೋಟಿ ಹೊರೆ ಆಗುತ್ತಿದ್ದರೂ, ಮುಖ್ಯಮಂತ್ರಿ ಒಪ್ಪಿಗೆ ನೀಡಿದ್ದಾರೆ. ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಿ ಆ್ಯಂಡ್ ಆರ್ ನಿಯಮ ತಿದ್ದುಪಡಿಗೂ ಮುಖ್ಯಮಂತ್ರಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಶ್ರೀನಿವಾಸ್ ತಿಳಿಸಿದರು.</p>.<p>ಖಾಸಗಿ ಹಾಗೂ ಅನುದಾನಿತ ಶಾಲೆಗಳನ್ನು ಪ್ರತೀ ವರ್ಷ ನವೀಕರಣ ಮಾಡಬೇಕೆಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಇದಲ್ಲದೆ ಸರ್ಕಾರಿ ಶಾಲೆ ಹೊರತುಪಡಿಸಿ ಖಾಸಗಿ ಶಾಲೆಗಳು 5 ಸುರಕ್ಷಾ ನಿಯಮಗಳನ್ನು ಅಳವಡಿಸಿಕೊಳ್ಳಬೇಕೆಂದು ಸೂಚಿಸಲಾಗಿದೆ. ಇದರಿಂದ ಖಾಸಗಿ ಶಾಲೆಗಳು ಸಂಕಷ್ಟಕ್ಕೆ ಸಿಲುಕಿವೆ. 40–50 ವರ್ಷದಿಂದ ಶಾಲೆ ನಡೆಸಿಕೊಂಡು ಬರುತ್ತಿರುವವರಿಗೆ ಸಮಸ್ಯೆ ಆಗಿದೆ. ನ್ಯಾಯಾಲಯ 5 ವರ್ಷಕ್ಕೊಮ್ಮೆ ನವೀಕರಣ ಮಾಡಿಸಬಹುದು ಎಂದು ತೀರ್ಪು ನೀಡಿದ್ದರೂ, ಅದು ಪಾಲನೆ ಆಗುತ್ತಿಲ್ಲ. ಲೋಕೋಪಯೋಗಿ ಹಾಗೂ ಶಿಕ್ಷಣ ಇಲಾಖೆಗಳಿಂದ ಪ್ರತೀ ವರ್ಷ ಪ್ರಮಾಣ ಪತ್ರ ಪಡೆಯಬೇಕಾಗಿದ್ದು, ಅಲ್ಲಿನ ಅಧಿಕಾರಿಗಳು ಲಂಚ ಕೊಟ್ಟವರಿಗೆ ಮಾತ್ರ ಪ್ರಮಾಣ ಪತ್ರ ಕೊಡುತ್ತಿದ್ದಾರೆ. ಈ ನಿಯಮದಿಂದ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ದೂರಿದರು.</p>.<p>ತಹಶೀಲ್ದಾರ್ ಬೀಬಿ ಫಾತಿಮಾ, ಪುರಸಭೆ ಸದಸ್ಯ ಕೆ.ಸಿ.ರಮೇಶ್, ಬಿ.ಗಂಗಾಧರ್, ಬಿಸಿಎಂ ಕಲ್ಯಾಣಾಧಿಕಾರಿ ಪ್ರದೀಪ್ ಕುಮಾರ್, ಎ.ಜಯಪ್ಪ, ರಶೀದ್, ದೇವರಾಜ್, ಚಂದ್ರ ನಾಯ್ಕ್, ತಿಮ್ಮೇಶ್, ಕಿರಣ್, ವೀರೇಶ್, ಮನೋಹರ್, ಚಂದ್ರಶೇಖರ್, ರಂಗಸ್ವಾಮಿ, ಕಾಂತರಾಜು, ರವಿ, ಶಿವಣ್ಣ, ಕರಿಸಿದ್ದಪ್ಪ, ಜಗದೀಶ್, ರಮೇಶ್ ಇದ್ದರು.</p>.<div><blockquote>ಚಿತ್ರದುರ್ಗ ಹಾಗೂ ದಾವಣಗೆರೆಯಲ್ಲಿ ಶೀಘ್ರವೇ ಕಚೇರಿ ಆರಂಭಿಸಲಾಗುವುದು. ಶಿಕ್ಷಕರು ಯಾವುದೇ ಸಮಸ್ಯೆ ಇದ್ದರೂ ನನ್ನನ್ನು ಭೇಟಿ ಮಾಡಬಹುದು. </blockquote><span class="attribution">-ಡಿ.ಟಿ.ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>