<p><strong>ಧರ್ಮಪುರ: ಗ್ರಾ</strong>ಮ ಪಂಚಾಯಿತಿ ಹಂತದಲ್ಲಿ ಮಕ್ಕಳಿಗಾಗಿ ವಿಶೇಷ ಗ್ರಾಮಸಭೆ ಹಮ್ಮಿಕೊಂಡಿರುವುದು ಪ್ರಜಾಸತ್ತಾತ್ಮಕ ಸೌಲಭ್ಯಗಳನ್ನು, ಹಕ್ಕುಗಳನ್ನು ತಿಳಿದುಕೊಳ್ಳಲು ಸಹಕಾರಿಯಾಗಿದೆ ಎಂದು ವಕೀಲೆ ಎಂ.ಮೀನಾಕ್ಷಿ ತಿಳಿಸಿದರು.</p>.<p>ಸಮೀಪದ ಈಶ್ವರಗೆರೆ ಗ್ರಾಮ ಪಂಚಾಯಿತಿ ಆವರಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಮಕ್ಕಳ ವಿಶೇಷ ಗ್ರಾಮ ಸಭೆ ಉದ್ದೇಶಿಸಿ ಮಾತನಾಡಿದರು.</p>.<p>ಶಿಕ್ಷಕರು ವಿದ್ಯಾರ್ಥಿನಿಯರ ಬಗ್ಗೆ ಕಾಳಜಿ ಹೊಂದಿರಬೇಕು. ಮಕ್ಕಳ ಕಳ್ಳ ಸಾಗಾಣಿಕೆ ಪ್ರಕರಣಗಳು ನಡೆಯುತ್ತಿದ್ದು, ಮನೆಯಲ್ಲಿ ಪಾಲಕರು ತಮ್ಮ ಮಕ್ಕಳ ಮೇಲೆ ನಿಗಾ ವಹಿಸಬೇಕು. ಮಕ್ಕಳಿಗಾಗಿಯೇ ಸರ್ಕಾರದಿಂದ ವಿಶೇಷ ಸೌಲಭ್ಯಗಳಿದ್ದು, ಅವುಗಳನ್ನು ಬಳಸಿಕೊಳ್ಳಬೇಕು ಎಂದರು.</p>.<p>‘ಪ್ರೌಢಶಾಲೆಯಲ್ಲಿ ಹದಿಹರೆಯದ ಮಕ್ಕಳಿದ್ದು, ಶಿಕ್ಷಕರು ಅವರಿಗೆ ಪೋಕ್ಸೊ ಬಗ್ಗೆ ತಿಳಿಸಬೇಕು. ಮೊಬೈಲ್ ಗೀಳಿನಿಂದ ವಿದ್ಯಾರ್ಥಿಗಳ ವ್ಯಾಸಂಗ ಕುಂಠಿತವಾಗುತ್ತಿದೆ. ದೃಶ್ಯ ಮಾಧ್ಯಮಗಳು ದೃಶ್ಯಗಳನ್ನು ವೈಭವೀಕರಿಸದಂತೆ ತಡೆಯಲು ಕಟ್ಟುನಿಟ್ಟಿನ ಕಾನೂನು ಬರಬೇಕಿದೆ’ ಎಂದು ಶಿಕ್ಷಕಿ ಸುನಂದಮ್ಮ ಅಭಿಪ್ರಾಯಪಟ್ಟರು.</p>.<p>‘ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಸಾಂಕ್ರಾಮಿಕ ರೋಗಗಳು ಹರಡದಂತೆ ಎಚ್ಚರ ವಹಿಸಬೇಕು’ ಎಂದು ವೈದ್ಯೆ ಡಾ.ಯಶಸ್ವಿನಿ ತಿಳಿಸಿದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಾರದಮ್ಮ ಚಂದ್ರಪ್ಪ ಕಾರ್ಯಕ್ರಮ ಉದ್ಘಾಟಿಸಿದರು. ವಕೀಲ ಪಾಂಡುರಂಗಪ್ಪ, ಪಿಡಿಒ ಶ್ರೀನಿವಾಸ್, ಗ್ರಾಮ ಪಂಚಾಯಿತಿ ಸದಸ್ಯರಾದ ಸುಭದ್ರಮ್ಮ, ಜಗನ್ನಾಥ್, ಮುಖ್ಯ ಶಿಕ್ಷಕ ರಾಜಣ್ಣ, ರಮೇಶ್, ಆರ್.ದೊರೆ, ಭಾಗ್ಯಮ್ಮ, ರಂಗಸ್ವಾಮಿ, ವೀರೇಂದ್ರ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧರ್ಮಪುರ: ಗ್ರಾ</strong>ಮ ಪಂಚಾಯಿತಿ ಹಂತದಲ್ಲಿ ಮಕ್ಕಳಿಗಾಗಿ ವಿಶೇಷ ಗ್ರಾಮಸಭೆ ಹಮ್ಮಿಕೊಂಡಿರುವುದು ಪ್ರಜಾಸತ್ತಾತ್ಮಕ ಸೌಲಭ್ಯಗಳನ್ನು, ಹಕ್ಕುಗಳನ್ನು ತಿಳಿದುಕೊಳ್ಳಲು ಸಹಕಾರಿಯಾಗಿದೆ ಎಂದು ವಕೀಲೆ ಎಂ.ಮೀನಾಕ್ಷಿ ತಿಳಿಸಿದರು.</p>.<p>ಸಮೀಪದ ಈಶ್ವರಗೆರೆ ಗ್ರಾಮ ಪಂಚಾಯಿತಿ ಆವರಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಮಕ್ಕಳ ವಿಶೇಷ ಗ್ರಾಮ ಸಭೆ ಉದ್ದೇಶಿಸಿ ಮಾತನಾಡಿದರು.</p>.<p>ಶಿಕ್ಷಕರು ವಿದ್ಯಾರ್ಥಿನಿಯರ ಬಗ್ಗೆ ಕಾಳಜಿ ಹೊಂದಿರಬೇಕು. ಮಕ್ಕಳ ಕಳ್ಳ ಸಾಗಾಣಿಕೆ ಪ್ರಕರಣಗಳು ನಡೆಯುತ್ತಿದ್ದು, ಮನೆಯಲ್ಲಿ ಪಾಲಕರು ತಮ್ಮ ಮಕ್ಕಳ ಮೇಲೆ ನಿಗಾ ವಹಿಸಬೇಕು. ಮಕ್ಕಳಿಗಾಗಿಯೇ ಸರ್ಕಾರದಿಂದ ವಿಶೇಷ ಸೌಲಭ್ಯಗಳಿದ್ದು, ಅವುಗಳನ್ನು ಬಳಸಿಕೊಳ್ಳಬೇಕು ಎಂದರು.</p>.<p>‘ಪ್ರೌಢಶಾಲೆಯಲ್ಲಿ ಹದಿಹರೆಯದ ಮಕ್ಕಳಿದ್ದು, ಶಿಕ್ಷಕರು ಅವರಿಗೆ ಪೋಕ್ಸೊ ಬಗ್ಗೆ ತಿಳಿಸಬೇಕು. ಮೊಬೈಲ್ ಗೀಳಿನಿಂದ ವಿದ್ಯಾರ್ಥಿಗಳ ವ್ಯಾಸಂಗ ಕುಂಠಿತವಾಗುತ್ತಿದೆ. ದೃಶ್ಯ ಮಾಧ್ಯಮಗಳು ದೃಶ್ಯಗಳನ್ನು ವೈಭವೀಕರಿಸದಂತೆ ತಡೆಯಲು ಕಟ್ಟುನಿಟ್ಟಿನ ಕಾನೂನು ಬರಬೇಕಿದೆ’ ಎಂದು ಶಿಕ್ಷಕಿ ಸುನಂದಮ್ಮ ಅಭಿಪ್ರಾಯಪಟ್ಟರು.</p>.<p>‘ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಸಾಂಕ್ರಾಮಿಕ ರೋಗಗಳು ಹರಡದಂತೆ ಎಚ್ಚರ ವಹಿಸಬೇಕು’ ಎಂದು ವೈದ್ಯೆ ಡಾ.ಯಶಸ್ವಿನಿ ತಿಳಿಸಿದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಾರದಮ್ಮ ಚಂದ್ರಪ್ಪ ಕಾರ್ಯಕ್ರಮ ಉದ್ಘಾಟಿಸಿದರು. ವಕೀಲ ಪಾಂಡುರಂಗಪ್ಪ, ಪಿಡಿಒ ಶ್ರೀನಿವಾಸ್, ಗ್ರಾಮ ಪಂಚಾಯಿತಿ ಸದಸ್ಯರಾದ ಸುಭದ್ರಮ್ಮ, ಜಗನ್ನಾಥ್, ಮುಖ್ಯ ಶಿಕ್ಷಕ ರಾಜಣ್ಣ, ರಮೇಶ್, ಆರ್.ದೊರೆ, ಭಾಗ್ಯಮ್ಮ, ರಂಗಸ್ವಾಮಿ, ವೀರೇಂದ್ರ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>