ಬ್ರಾಹ್ಮಣ ಸಂಘದ ಅಧ್ಯಕ್ಷ ಪಿ.ಎಸ್. ಮಂಜುನಾಥ, ‘ರಾಜ್ಯದ ಮಧ್ಯಭಾಗದಲ್ಲಿ ಇರುವ ಚಿತ್ರದುರ್ಗ ಬರಪೀಡಿತ ಜಿಲ್ಲೆ. ಇಲ್ಲಿ ಶ್ರೀಮಂತರ ಸಂಖ್ಯೆ ಕಡಿಮೆ ಇರಬಹುದು. ಆದರೆ, ಕಲೆ, ಸಾಹಿತ್ಯ, ಸಂಸ್ಕೃತಿ ಬೆಳೆಸುವ ನಿಟ್ಟಿನಲ್ಲಿ ಇಲ್ಲಿನ ಜನ ಸಿರಿವಂಥರಾಗಿದ್ದಾರೆ’ ಎಂದ ಅವರು, ‘ಗಮಕ ಪರಿಷತ್ತಿಗೆ ಸ್ವಂತ ಕಟ್ಟಡವಾಗಲಿ, ಭವನವಾಗಲಿ ಇಲ್ಲ. ಈ ಹಿನ್ನಲೆಯಲ್ಲಿ ಸರ್ಕಾರ ಕೂಡ ಗಮಕ ಕಲೆಗೆ ಪ್ರೋತ್ಸಾಹ ನೀಡಲು ಅನುದಾನ ಮಂಜೂರು ಮಾಡಬೇಕು’ ಎಂದು ಒತ್ತಾಯಿಸಿದರು.